ಬ್ರೇಕಿಂಗ್ ನ್ಯೂಸ್
03-05-22 04:35 pm Mangalore Correspondent ಕ್ರೈಂ
ಬಂಟ್ವಾಳ, ಮೇ 3 : ಬಿ.ಸಿ.ರೋಡ್ ನಲ್ಲಿ ಮಕ್ಕಳ ತಜ್ಞರಾಗಿರುವ ಡಾ.ಅಶ್ವಿನ್ ಬಾಳಿಗಾ ಅವರನ್ನು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಮೈ ಜಿಯೋ ಏಪ್ ಡೌನ್ಲೋಡ್ ಮಾಡುವ ಹೆಸರಲ್ಲಿ ವೈದ್ಯರ ಖಾತೆಯಿಂದ 1.65 ಲಕ್ಷ ರೂಪಾಯಿ ಹಣ ದೋಚಿದ ಘಟನೆ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಡಾ.ಅಶ್ವಿನ್ ಬಾಳಿಗಾ ಅವರಿಗೆ ಎ.28 ರಂದು ಸಂಜೆ 5.30 ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು ನಿಮ್ಮ ಜಿಯೋ ನಂಬರನ್ನು ಅಪ್ಡೇಟ್ ಮಾಡುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಗೂಗಲ್ ಪ್ಲೇ ಸ್ಟೋರ್ ನಿಂದ ಕ್ವಿಕ್ ಈಝೀ ಏಪ್ ಡೌನ್ಲೋಡ್ ಮಾಡಲು ಹೇಳಿದ್ದಾನೆ. ಆನಂತರ, ಅಶ್ವಿನ್ ಬಾಳಿಗಾ ಅವರಿಗೆ ಮೈ ಜಿಯೋ ಏಪ್ ನಲ್ಲಿ ಮೊಬೈಲ್ ನಲ್ಲಿ ಹತ್ತು ರೂಪಾಯಿ ರಿಚಾರ್ಜ್ ಮಾಡಲು ತಿಳಿಸಿದ್ದ. ಅದರಂತೆ, ಅಶ್ವಿನ್ ಬಾಳಿಗಾ ಅವರು ತನ್ನ ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಮತ್ತು ಎಟಿಎಂ ಕಾರ್ಡ್ ವಿವರಗಳನ್ನು ಮೈ ಜಿಯೋ ಏಪ್ ನಲ್ಲಿ ದಾಖಲಿಸಿ, ಹತ್ತು ರೂ. ರಿಚಾರ್ಜ್ ಮಾಡಿದ್ದಾರೆ.

ಕೂಡಲೇ ವೈದ್ಯರ ಬ್ಯಾಂಕ್ ಖಾತೆಯುಳ್ಳ ಎಚ್ ಡಿಎಫ್ ಸಿ ಖಾತೆಯಿಂದ ಹತ್ತು ಸಾವಿರ ರೂ. ಮೂರು ಬಾರಿ ಕಟ್ ಆಗಿದೆ. ಆನಂತರ ರೂ.45 ಸಾವಿರದಂತೆ ಮೂರು ಬಾರಿ ಕಟ್ ಆಗಿದ್ದು ಅಪರಿಚಿತನ ಖಾತೆಗೆ ಹಣ ವರ್ಗಾವಣೆ ಆಗಿದೆ. ಒಟ್ಟು 1.65 ಲಕ್ಷ ರೂ. ಹಣ ಖಾತೆಯಿಂದ ಬೇರೆ ಖಾತೆಗೆ ಜಮಾ ಆಗಿದ್ದು ವೈದ್ಯರು ಮೋಸ ಹೋಗಿದ್ದಾರೆ. ಈ ಬಗ್ಗೆ ವೈದ್ಯ ಡಾ.ಅಶ್ವಿನ್ ಬಾಳಿಗಾ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of My Jio app update, doctor looted of 1.65 lakh in Bantwal.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm