ಸರ ಎಗರಿಸಿದ ಪ್ರಕರಣ ; ನಾಲ್ವರು ಆರೋಪಿಗಳ ಬಂಧನ

25-09-20 12:10 pm       Mangalore Correspondent   ಕ್ರೈಂ

ಚಕ್ರ ವಾಹನದಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಪುತ್ತೂರು, ಸೆಪ್ಟಂಬರ್ 25: ದ್ವಿಚಕ್ರ ವಾಹನದಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಪುತ್ತೂರು ತಾಲೂಕಿನ ಸವಣೂರು ನಿವಾಸಿಗಳಾದ ಮಹಮ್ಮದ್ ಶಾಕೀರ್(23), ಮಹಮ್ಮದ್ ಇಕ್ಬಾಲ್(24), ಕೆ.ಎ.ಮಹಮ್ಮದ್ ಯಾನೆ ಐಟಿ ಮಮ್ಮು(41) ಮತ್ತು ಆರೋಪಿಗಳಿಗೆ ಸಹಕರಿಸಿದ ತಿಂಗಳಾಡಿ ನಿವಾಸಿ ಹಾಜೀರಾ(44) ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 20,650 ನಗದು, ಕುಂಬ್ರದ ಬ್ಯಾಂಕ್ ನಲ್ಲಿ ಅಡವಿಟ್ಟ ಕಳವುಗೈದ ಚಿನ್ನ, ಆಕ್ಟೀವ್ ಹೋಂಡಾ ವಾಹನವನ್ನು ವಶಪಡಿಸಲಾಗಿದೆ.

ಸೆಪ್ಟೆಂಬರ್ 22ರಂದು ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ನಿವಾಸಿ ಥೋಮಸ್ ರೆಬೆಲ್ಲೋರವರ ಪತ್ನಿ ಮಿನೇಜಸ್ ಎಂಬವರು ಬೀಡಿಕೊಟ್ಟು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕರು ಕುತ್ತಿಗೆಯಲ್ಲಿದ್ದ 4 ಪವನ್ ತೂಕದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ವಿಟ್ಲ ಬಳಿಯ ಅಳಕೆಮಜಲು ಸಮೀಪ ಆರೋಪಿಗಳನ್ನು ಬಂಧಿಸಿದ್ದಾರೆ.

Join our WhatsApp group for latest news updates (2)