ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣ ; ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

05-05-22 12:44 pm       Mangalore Correspondent   ಕ್ರೈಂ

ಟಾರ್ಗೆಟ್ ಗ್ಯಾಂಗ್ ರೂವಾರಿಯಾಗಿದ್ದ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು, ಮೇ 5: ಟಾರ್ಗೆಟ್ ಗ್ಯಾಂಗ್ ರೂವಾರಿಯಾಗಿದ್ದ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಕುಂದಾಪುರ ಮೂಲದ ಸಮೀರ್ (28) ಬಂಧಿತ ಆರೋಪಿ. ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಕಂಕನಾಡಿಯ ಜೆಪ್ಪು ಕುದ್ಪಾಡಿಯಲ್ಲಿ ಪತ್ನಿ ಮನೆಯಲ್ಲಿದ್ದಾಗಲೇ ರೌಡಿಗಳ ತಂಡ ಮನೆಗೆ ನುಗ್ಗಿ ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದರು. 2018ರ ಜನವರಿ 13ರಂದು ಘಟನೆ ನಡೆದಿತ್ತು. ಪ್ರಕರಣ ಸಂಬಂಧಿಸಿ ದಾವೂದ್, ರಿಯಾಜ್ ಮತ್ತು ನಾಸಿರ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದರು. ಇವರ ಜೊತೆಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಸಮೀರ್ ನಾಪತ್ತೆಯಾಗಿದ್ದ.

ಇತ್ತೀಚೆಗೆ ಉಳ್ಳಾಲ ಉರೂಸ್ ಸಂದರ್ಭದಲ್ಲಿ ಸಮೀರ್ ಬಂಧನಕ್ಕಾಗಿ ಉಳ್ಳಾಲ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ, ಸಮೀರ್ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದ. ಇದೀಗ ಮಂಗಳೂರಿನ ಪಂಪ್ವೆಲ್ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದಾನೆ ಎನ್ನುವ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Mangalore Target illyas Murder, accused absconding since four years arrested.