ಬ್ರೇಕಿಂಗ್ ನ್ಯೂಸ್
09-05-22 10:30 pm Udupi Correspondent ಕ್ರೈಂ
ಉಡುಪಿ, ಮೇ 9 : ತಾಯಿ ಮತ್ತು ಆಕೆಯ ಹತ್ತು ವರ್ಷದ ಮಗು ಸಂಶಯಾಸ್ಪದ ನೆಲೆಯಲ್ಲಿ ಸಾವನ್ನಪ್ಪಿದ ಘಟನೆ ಹಿರಿಯಡ್ಕ ಬಳಿಯ ಆತ್ರಾಡಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಆತ್ರಾಡಿ ಗ್ರಾಮದ ಮದಗ ನಿವಾಸಿಗಳಾದ ಚೆಲುವಿ (28) ಮತ್ತು ಆಕೆಯ ಮಗಳು ಪ್ರಿಯಾ (10) ಮೃತರು. ಚೆಲುವಿ ಮಣಿಪಾಲದ ಖಾಸಗಿ ಕಂಪನಿ ಒಂದರಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದು ಇಬ್ಬರು ಮಕ್ಕಳೊಂದಿಗೆ ಮದಗದಲ್ಲಿ ನೆಲೆಸಿದ್ದಳು.
ಮೇ 8 ರ ಭಾನುವಾರ ಚೆಲುವಿಯ ತಾಯಿ ಮದಗದ ಮನೆಗೆ ಬಂದಿದ್ದು ಅಜ್ಜಿಯ ಜೊತೆಗೆ ಈಕೆಯ ಮಗನೂ ಅಜ್ಜಿ ಮನೆಗೆ ತೆರಳಿದ್ದ. ಹೀಗಾಗಿ ಭಾನುವಾರ ರಾತ್ರಿ ಚೆಲುವಿ ಮತ್ತು ಆಕೆಯ ಮಗಳು ಮಾತ್ರ ಮನೆಯಲ್ಲಿದ್ದರು. ಸೋಮವಾರ ಬೆಳಗ್ಗೆ ಅಜ್ಜಿ ಚೆಲುವಿಗೆ ಫೋನ್ ಮಾಡಿದಾಗ, ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಏನೋ ಡೌಟ್ ಬಂದು ಚೆಲುವಿಯ ನೆರೆಮನೆಯ ನಿವಾಸಿಗಳಿಗೆ ಮಾಹಿತಿ ನೀಡಿದ್ದರು. ಅವರು ಚೆಲುವಿ ಮನೆಗೆ ತೆರಳಿ ನೋಡಿದಾಗ, ತಾಯಿ, ಮಗಳು ಸಂಶಯಾಸ್ಪದವಾಗಿ ಸಾವು ಕಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಚೆಲುವಿ ಶವ ಮನೆ ಬಾಗಿಲ ಬಳಿ ಇದ್ದರೆ, ಮಗಳು ಪ್ರಿಯಾ ಕೊಠಡಿ ಒಳಗೆ ಸಾವನ್ನಪ್ಪಿದ್ದಳು. ಸ್ಥಳೀಯರು ಕೊಲೆ ನಡೆದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ. ಎಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಸಿಪಿಐ ಅನಂತ ಪದ್ಮನಾಭ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi: In a Suspicious manner, a mother and her 10-year-old daughter were found dead in the house on Monday, May 9 at Madaga near Atradi under the Hiriyadka Police Station Limits. The deceased have been identified as Cheluvi (28) and her daughter Priya (10), residents of Madaga near Atradi.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm