ಬ್ರೇಕಿಂಗ್ ನ್ಯೂಸ್
15-05-22 06:09 pm Mangalore Correspondent ಕ್ರೈಂ
ಬಂಟ್ವಾಳ, ಮೇ 15: ಜಾನುವಾರು ಸಾಗಿಸುತ್ತಿದ್ದ ಗೂಡ್ಸ್ ಟೆಂಪೋ ವಾಹನವನ್ನು ಅಡ್ಡಗಟ್ಟಿದ ಪೊಲೀಸರಿಗೆ ಅದರಲ್ಲಿದ್ದ ಆರೋಪಿಗಳು ದೂಡಿ ಹಾಕಿ, ಹಲ್ಲೆಗೈದು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಕುದ್ಕೋಳಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ಸುತೇಶ್ ಕೆ.ಪಿ. ಅವರು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ವಾಮದಪದವು ಕಡೆಯಿಂದ ಕುದ್ಕೋಳಿ ಕಡೆಗೆ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆಂಬ ಮಾಹಿತಿ ತಿಳಿದುಬಂದಿತ್ತು. ಇದಕ್ಕಾಗಿ ಠಾಣೆಯಲ್ಲಿ ವಿಶ್ರಾಂತಿಯಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ನವೀನ ಮತ್ತು ಪ್ರಭಾಕರ ಮೋರೆ ಎಂಬವರನ್ನು ಕರೆಸಿಕೊಂಡು ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಎಲ್ಪೇಲು ಎಂಬಲ್ಲಿ ವಾಹನ ತಪಾಸಣೆ ಕಾರ್ಯ ಆರಂಭಿಸಿದ್ದರು.
ಈ ವೇಳೆ, ನಸುಕಿನ 4.15ರ ವೇಳೆಗೆ ವಾಮದಪದವು ಕಡೆಯಿಂದ ಕುದ್ಕೋಳಿ ಕಡೆಗೆ ಕೆಎ 70 -3124 ಸಂಖ್ಯೆಯ ಟಾಟಾ ಇಂಟ್ರಾ ವಿ 10 ಗೂಡ್ಸ್ ಮಿನಿ ಟೆಂಪೋ ಅತಿ ವೇಗವಾಗಿ ಬರುತ್ತಿದ್ದುದನ್ನು ನೋಡಿ ಪೊಲೀಸರು ನಿಲ್ಲಿಸಲು ಸೂಚಿಸಿದ್ದಾರೆ. ಆದರೆ ವಾಹನ ನಿಲ್ಲಿಸದೆ ಪರಾರಿಯಾಗಿದ್ದು ಪೊಲೀಸರು ಇಲಾಖಾ ಜೀಪಿನಲ್ಲಿ ಬೆನ್ನಟ್ಟಿ ಕುದ್ಕೋಳಿ ಜಂಕ್ಷನ್ ಎಂಬಲ್ಲಿ ತಡೆ ಹಾಕಿದ್ದಾರೆ. ಆರೋಪಿಗಳು ವಾಹನದಿಂದ ಇಳಿದು ಓಡಲು ಯತ್ನಿಸಿದಾಗ, ಪೊಲೀಸರು ಅವರನ್ನು ಹಿಡಿಯಲು ಯತ್ನಿಸಿದ್ದು ಪಿಎಸ್ಐ ಸುತೇಶ್ ಅವರಿಗೆ ಕೈಯಿಂದ ನೆಲಕ್ಕೆ ದೂಡಿ ಹಾಕಿ ಓಡಿದ್ದಾರೆ. ಇದರಿಂದ ಪುಂಜಾಲಕಟ್ಟೆ ಠಾಣೆ ಪಿಎಸ್ಐ ಸುತೇಶ್ ಅವರ ಭುಜಕ್ಕೆ ಗಾಯವಾಗಿದೆ.
ಸದ್ರಿ ವಾಹನದಲ್ಲಿ ಪರಿಶೀಲಿಸಿದಾಗ ಯಾವುದೇ ಪರವಾನಿಗೆ ಇಲ್ಲದೇ ಹಿಂಸಾತ್ಮಕವಾಗಿ ಮೂರು ದನಗಳನ್ನು ಹಿಡಿದು ಕೂಡಿಹಾಕಿದ್ದು ಕಂಡುಬಂದಿದೆ. ಅವು ಎಲ್ಲಿಂದಲೋ ಕದ್ದು ತಂದಿರುವ ದನಗಳು ಎನ್ನುವ ಶಂಕೆಯನ್ನು ಪೊಲೀಸರು ಹೊಂದಿದ್ದಾರೆ. ದನ ಮತ್ತು ಗೂಡ್ಸ್ ಟೆಂಪೋವನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಾಹನದ ಒಳಗಿದ್ದ ಎರಡು ಮೊಬೈಲನ್ನು ಪತ್ತೆ ಮಾಡಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೈದು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಜರುಗಿಸಿದ್ದಾರೆ. ಪಿಎಸ್ಐ ಸುತೇಶ್ ಅವರ ದೂರಿನಂತೆ ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Illegal cattle trafficking SI pushed by miscreants and flee from spot at Punjalkatte in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm