ಬ್ರೇಕಿಂಗ್ ನ್ಯೂಸ್
15-05-22 06:09 pm Mangalore Correspondent ಕ್ರೈಂ
ಬಂಟ್ವಾಳ, ಮೇ 15: ಜಾನುವಾರು ಸಾಗಿಸುತ್ತಿದ್ದ ಗೂಡ್ಸ್ ಟೆಂಪೋ ವಾಹನವನ್ನು ಅಡ್ಡಗಟ್ಟಿದ ಪೊಲೀಸರಿಗೆ ಅದರಲ್ಲಿದ್ದ ಆರೋಪಿಗಳು ದೂಡಿ ಹಾಕಿ, ಹಲ್ಲೆಗೈದು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಕುದ್ಕೋಳಿ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ಸುತೇಶ್ ಕೆ.ಪಿ. ಅವರು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ವಾಮದಪದವು ಕಡೆಯಿಂದ ಕುದ್ಕೋಳಿ ಕಡೆಗೆ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದಾರೆಂಬ ಮಾಹಿತಿ ತಿಳಿದುಬಂದಿತ್ತು. ಇದಕ್ಕಾಗಿ ಠಾಣೆಯಲ್ಲಿ ವಿಶ್ರಾಂತಿಯಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ನವೀನ ಮತ್ತು ಪ್ರಭಾಕರ ಮೋರೆ ಎಂಬವರನ್ನು ಕರೆಸಿಕೊಂಡು ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಎಲ್ಪೇಲು ಎಂಬಲ್ಲಿ ವಾಹನ ತಪಾಸಣೆ ಕಾರ್ಯ ಆರಂಭಿಸಿದ್ದರು.
ಈ ವೇಳೆ, ನಸುಕಿನ 4.15ರ ವೇಳೆಗೆ ವಾಮದಪದವು ಕಡೆಯಿಂದ ಕುದ್ಕೋಳಿ ಕಡೆಗೆ ಕೆಎ 70 -3124 ಸಂಖ್ಯೆಯ ಟಾಟಾ ಇಂಟ್ರಾ ವಿ 10 ಗೂಡ್ಸ್ ಮಿನಿ ಟೆಂಪೋ ಅತಿ ವೇಗವಾಗಿ ಬರುತ್ತಿದ್ದುದನ್ನು ನೋಡಿ ಪೊಲೀಸರು ನಿಲ್ಲಿಸಲು ಸೂಚಿಸಿದ್ದಾರೆ. ಆದರೆ ವಾಹನ ನಿಲ್ಲಿಸದೆ ಪರಾರಿಯಾಗಿದ್ದು ಪೊಲೀಸರು ಇಲಾಖಾ ಜೀಪಿನಲ್ಲಿ ಬೆನ್ನಟ್ಟಿ ಕುದ್ಕೋಳಿ ಜಂಕ್ಷನ್ ಎಂಬಲ್ಲಿ ತಡೆ ಹಾಕಿದ್ದಾರೆ. ಆರೋಪಿಗಳು ವಾಹನದಿಂದ ಇಳಿದು ಓಡಲು ಯತ್ನಿಸಿದಾಗ, ಪೊಲೀಸರು ಅವರನ್ನು ಹಿಡಿಯಲು ಯತ್ನಿಸಿದ್ದು ಪಿಎಸ್ಐ ಸುತೇಶ್ ಅವರಿಗೆ ಕೈಯಿಂದ ನೆಲಕ್ಕೆ ದೂಡಿ ಹಾಕಿ ಓಡಿದ್ದಾರೆ. ಇದರಿಂದ ಪುಂಜಾಲಕಟ್ಟೆ ಠಾಣೆ ಪಿಎಸ್ಐ ಸುತೇಶ್ ಅವರ ಭುಜಕ್ಕೆ ಗಾಯವಾಗಿದೆ.
ಸದ್ರಿ ವಾಹನದಲ್ಲಿ ಪರಿಶೀಲಿಸಿದಾಗ ಯಾವುದೇ ಪರವಾನಿಗೆ ಇಲ್ಲದೇ ಹಿಂಸಾತ್ಮಕವಾಗಿ ಮೂರು ದನಗಳನ್ನು ಹಿಡಿದು ಕೂಡಿಹಾಕಿದ್ದು ಕಂಡುಬಂದಿದೆ. ಅವು ಎಲ್ಲಿಂದಲೋ ಕದ್ದು ತಂದಿರುವ ದನಗಳು ಎನ್ನುವ ಶಂಕೆಯನ್ನು ಪೊಲೀಸರು ಹೊಂದಿದ್ದಾರೆ. ದನ ಮತ್ತು ಗೂಡ್ಸ್ ಟೆಂಪೋವನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಾಹನದ ಒಳಗಿದ್ದ ಎರಡು ಮೊಬೈಲನ್ನು ಪತ್ತೆ ಮಾಡಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೈದು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಜರುಗಿಸಿದ್ದಾರೆ. ಪಿಎಸ್ಐ ಸುತೇಶ್ ಅವರ ದೂರಿನಂತೆ ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಹಲ್ಲೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Illegal cattle trafficking SI pushed by miscreants and flee from spot at Punjalkatte in Mangalore.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm