ಬ್ರೇಕಿಂಗ್ ನ್ಯೂಸ್
15-05-22 07:07 pm Mangalore Correspondent ಕ್ರೈಂ
ಉಳ್ಳಾಲ, ಮೇ 15: ಪತ್ನಿಯ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಪತಿರಾಯನು ಆತ್ಮಹತ್ಯೆ ಎಂದು ಬಿಂಬಿಸಿದ್ದು, ಶವ ಮಹಜರು ಪರೀಕ್ಷೆಯ ವರದಿಯಲ್ಲಿ ಕೊಲೆ ಕೃತ್ಯ ಸಾಬೀತುಗೊಂಡ ಹಿನ್ನೆಲೆಯಲ್ಲಿ ಆರೋಪಿ ಪತಿ ಜೈಲು ಪಾಲಾದ ಘಟನೆ ಕುಂಪಲದ ಚೇತನ ನಗರದಲ್ಲಿ ನಡೆದಿದೆ.
ಜೋಸೆಫ್ ಫ್ರಾನ್ಸಿಸ್ (54) ಎಂಬಾತನೇ ಪತ್ನಿಯ ಕೊಲೆ ಆರೋಪದಲ್ಲಿ ಬಂಧಿತ ವ್ಯಕ್ತಿ. ಕೇರಳದ ಕೊಚ್ಚಿ ನಿವಾಸಿ ಜೋಸೆಫ್ ಎಂಬವರ ಪುತ್ರಿ ಶೈಮಾ(44) ಎಂಬಾಕೆಯನ್ನು ಜೋಸೆಫ್ ಫ್ರಾನ್ಸಿಸ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿದ್ದು, ದಂಪತಿ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ, ಚೇತನ ನಗರ ಎಂಬಲ್ಲಿ ವಾಸವಾಗಿದ್ದರು. ಮೇ 11 ರ ಬುಧವಾರ ಸಂಜೆ ಕ್ಷುಲ್ಲಕ ವಿಚಾರವೊಂದಕ್ಕೆ ಪತಿ, ಪತ್ನಿಯರ ನಡುವೆ ಜಗಳ ನಡೆದಿತ್ತು.
ಈ ಸಂದರ್ಭ ಜೋಸೆಫ್ ಫ್ರಾನ್ಸಿಸ್ ತನ್ನ ಪತ್ನಿ ಶೈಮಾಳಿಗೆ ದೊಣ್ಣೆಯಿಂದ ತಲೆಗೆ ಹೊಡೆದಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಶೈಮಾಲಿಗೆ ಜೋಸೆಫ್ ವಿಷವನ್ನು ಕುಡಿಸಿದ್ದನಂತೆ. ತಕ್ಷಣ ಶೈಮಾಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅದೇ ದಿನ ರಾತ್ರಿ ಅವರು ಮೃತಪಟ್ಟಿದ್ದರು. ಈ ಬಗ್ಗೆ ಅನುಮಾನಗೊಂಡ ಶೈಮಾ ಅವರ ತಂದೆ ಕೊಚ್ಚಿ ನಿವಾಸಿ ಜೋಸೆಫ್ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಜೋಸೆಫ್ ಫ್ರಾನ್ಸಿಸ್ನನ್ನು ಬಂಧಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಆರೋಪಿ ಜೋಸೆಫ್ ಆಕೆ ವಿಷ ಕುಡಿದು ಗಂಭೀರ ಸ್ಥಿತಿಯಲ್ಲಿದ್ದಳು ಎಂದು ಬಿಂಬಿಸಿದರೂ ಸಾವಿನ ಬಗ್ಗೆ ಪೊಲೀಸರಿಗೆ ಸಂಶಯ ಉಂಟಾಗಿತ್ತು.
ಶನಿವಾರ ಶವ ಮಹಜರು ಪರೀಕ್ಷೆಯ ವರದಿ ಬಂದಿದ್ದು, ಇದರಿಂದ ಕೊಲೆ ಕೃತ್ಯ ಬಹಿರಂಗಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜೋಸೆಫ್ ಫ್ರಾನ್ಸಿಸ್ನನ್ನು ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚುವರಿ ತನಿಖೆಗೆ ಉಳ್ಳಾಲ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಜೋಸೆಫ್ , ಶೈಮಾ ದಂಪತಿಯ ಇಬ್ಬರು ಪುತ್ರರು ವ್ಯಾಸಂಗ ನಡೆಸುತ್ತಿದ್ದು, ಕೊಲೆ ನಡೆದ ವೇಳೆ ಮನೆಯಲ್ಲೇ ಇದ್ದರಂತೆ. ತಂದೆಯನ್ನ ರಕ್ಷಿಸಲಿಕ್ಕಾಗಿ ಪೊಲೀಸರಲ್ಲಿ ಮಕ್ಕಳು ಸತ್ಯ ಮರೆಮಾಚಿದ್ದರೆಂದು ತಿಳಿದುಬಂದಿದೆ. ತಂದೆ, ತಾಯಿಯ ಜಗಳದಲ್ಲೀಗ ಇಬ್ಬರು ಗಂಡು ಮಕ್ಕಳು ಅನಾಥರಾಗಿದ್ದಾರೆ.
Mangalore murder Husband arrested for killing wife by beating her with cane in Kumpala. The deceased has been identified as Shaima(44). The arrested has been identified as Joseph. Husband tired to convince the police that it was a suicide by finally was caught by Ullal police.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 07:25 pm
HK News Desk
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm