ಬ್ರೇಕಿಂಗ್ ನ್ಯೂಸ್
15-05-22 07:07 pm Mangalore Correspondent ಕ್ರೈಂ
ಉಳ್ಳಾಲ, ಮೇ 15: ಪತ್ನಿಯ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಪತಿರಾಯನು ಆತ್ಮಹತ್ಯೆ ಎಂದು ಬಿಂಬಿಸಿದ್ದು, ಶವ ಮಹಜರು ಪರೀಕ್ಷೆಯ ವರದಿಯಲ್ಲಿ ಕೊಲೆ ಕೃತ್ಯ ಸಾಬೀತುಗೊಂಡ ಹಿನ್ನೆಲೆಯಲ್ಲಿ ಆರೋಪಿ ಪತಿ ಜೈಲು ಪಾಲಾದ ಘಟನೆ ಕುಂಪಲದ ಚೇತನ ನಗರದಲ್ಲಿ ನಡೆದಿದೆ.
ಜೋಸೆಫ್ ಫ್ರಾನ್ಸಿಸ್ (54) ಎಂಬಾತನೇ ಪತ್ನಿಯ ಕೊಲೆ ಆರೋಪದಲ್ಲಿ ಬಂಧಿತ ವ್ಯಕ್ತಿ. ಕೇರಳದ ಕೊಚ್ಚಿ ನಿವಾಸಿ ಜೋಸೆಫ್ ಎಂಬವರ ಪುತ್ರಿ ಶೈಮಾ(44) ಎಂಬಾಕೆಯನ್ನು ಜೋಸೆಫ್ ಫ್ರಾನ್ಸಿಸ್ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿದ್ದು, ದಂಪತಿ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ, ಚೇತನ ನಗರ ಎಂಬಲ್ಲಿ ವಾಸವಾಗಿದ್ದರು. ಮೇ 11 ರ ಬುಧವಾರ ಸಂಜೆ ಕ್ಷುಲ್ಲಕ ವಿಚಾರವೊಂದಕ್ಕೆ ಪತಿ, ಪತ್ನಿಯರ ನಡುವೆ ಜಗಳ ನಡೆದಿತ್ತು.

ಈ ಸಂದರ್ಭ ಜೋಸೆಫ್ ಫ್ರಾನ್ಸಿಸ್ ತನ್ನ ಪತ್ನಿ ಶೈಮಾಳಿಗೆ ದೊಣ್ಣೆಯಿಂದ ತಲೆಗೆ ಹೊಡೆದಿದ್ದ. ಗಂಭೀರ ಸ್ಥಿತಿಯಲ್ಲಿದ್ದ ಶೈಮಾಲಿಗೆ ಜೋಸೆಫ್ ವಿಷವನ್ನು ಕುಡಿಸಿದ್ದನಂತೆ. ತಕ್ಷಣ ಶೈಮಾಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅದೇ ದಿನ ರಾತ್ರಿ ಅವರು ಮೃತಪಟ್ಟಿದ್ದರು. ಈ ಬಗ್ಗೆ ಅನುಮಾನಗೊಂಡ ಶೈಮಾ ಅವರ ತಂದೆ ಕೊಚ್ಚಿ ನಿವಾಸಿ ಜೋಸೆಫ್ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಜೋಸೆಫ್ ಫ್ರಾನ್ಸಿಸ್ನನ್ನು ಬಂಧಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಆರೋಪಿ ಜೋಸೆಫ್ ಆಕೆ ವಿಷ ಕುಡಿದು ಗಂಭೀರ ಸ್ಥಿತಿಯಲ್ಲಿದ್ದಳು ಎಂದು ಬಿಂಬಿಸಿದರೂ ಸಾವಿನ ಬಗ್ಗೆ ಪೊಲೀಸರಿಗೆ ಸಂಶಯ ಉಂಟಾಗಿತ್ತು.

ಶನಿವಾರ ಶವ ಮಹಜರು ಪರೀಕ್ಷೆಯ ವರದಿ ಬಂದಿದ್ದು, ಇದರಿಂದ ಕೊಲೆ ಕೃತ್ಯ ಬಹಿರಂಗಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜೋಸೆಫ್ ಫ್ರಾನ್ಸಿಸ್ನನ್ನು ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚುವರಿ ತನಿಖೆಗೆ ಉಳ್ಳಾಲ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಜೋಸೆಫ್ , ಶೈಮಾ ದಂಪತಿಯ ಇಬ್ಬರು ಪುತ್ರರು ವ್ಯಾಸಂಗ ನಡೆಸುತ್ತಿದ್ದು, ಕೊಲೆ ನಡೆದ ವೇಳೆ ಮನೆಯಲ್ಲೇ ಇದ್ದರಂತೆ. ತಂದೆಯನ್ನ ರಕ್ಷಿಸಲಿಕ್ಕಾಗಿ ಪೊಲೀಸರಲ್ಲಿ ಮಕ್ಕಳು ಸತ್ಯ ಮರೆಮಾಚಿದ್ದರೆಂದು ತಿಳಿದುಬಂದಿದೆ. ತಂದೆ, ತಾಯಿಯ ಜಗಳದಲ್ಲೀಗ ಇಬ್ಬರು ಗಂಡು ಮಕ್ಕಳು ಅನಾಥರಾಗಿದ್ದಾರೆ.
Mangalore murder Husband arrested for killing wife by beating her with cane in Kumpala. The deceased has been identified as Shaima(44). The arrested has been identified as Joseph. Husband tired to convince the police that it was a suicide by finally was caught by Ullal police.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am