ಬ್ರೇಕಿಂಗ್ ನ್ಯೂಸ್
18-05-22 10:28 pm Mangaluru Correspondent ಕ್ರೈಂ
Photo credits : Representational Image
ಬೆಳ್ತಂಗಡಿ, ಮೇ 18: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ತುಂಬಿಸಿಕೊಂಡು ಚಿಕ್ಕಮಗಳೂರಿನ ಕಡೆಗೆ ಒಯ್ಯುತ್ತಿದ್ದಾಗ ಧರ್ಮಸ್ಥಳ ಪೊಲೀಸರು ತಡೆದು ವಶಕ್ಕೆ ಪಡೆದಿರುವ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಉಜಿರೆ ಕಡೆಯಿಂದ ತೆರಳುತ್ತಿದ್ದ ಕೆಎ 19ಸಿ 5086 ಸಂಖ್ಯೆಯ ಬೊಲೆರೋ ವಾಹನದಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಯಾವುದೇ ದಾಖಲಾತಿ ಇಲ್ಲದೆ 50 ಕೆಜಿ ಅಕ್ಕಿಯ 59 ಚೀಲಗಳು, 25 ಕೇಜಿಯ 14 ಗೋಣಿ ಚೀಲಗಳಲ್ಲಿ ಅಕ್ಕಿ ಪತ್ತೆಯಾಗಿದೆ. ಒಟ್ಟು 33 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದು, ಇದರ ಅಂದಾಜು ಮೌಲ್ಯ 49,500 ರೂ. ಆಗಿರುತ್ತದೆ.
ಈ ಬಗ್ಗೆ ಪೊಲೀಸರು ಬೆಳ್ತಂಗಡಿ ವಿಭಾಗದ ಆಹಾರ ನಿರೀಕ್ಷಕ ವಿಶ್ವ .ಕೆ , ಸಿಬಂದಿಯನ್ನು ಸ್ಥಳಕ್ಕೆ ಕರೆಸಿದ್ದು ಪಂಚನಾಮೆ ನಡೆಸಿದ್ದಾರೆ. ಆಹಾರ ನಿರೀಕ್ಷಕರ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೊಲೆರೊ ವಾಹನ ಚಾಲಕ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ನಿವಾಸಿ ವಿನಯ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ರಿ ಅಕ್ಕಿಯು ಮೇ ತಿಂಗಳಲ್ಲಿ ಪಡಿತರ ಅಂಗಡಿಗಳಿಗೆ ಪೂರೈಸಿದ ಅಕ್ಕಿಯೆಂದು ಆಹಾರ ಇಲಾಖೆಯ ಅಧಿಕಾರಿಗಳು ಗುರುತಿಸಿದ್ದಾರೆ.
ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಒಯ್ಯುತ್ತಿರುವ ಮಾಹಿತಿಯಿದ್ದು, ಚಾಲಕನಿಗೆ ಸಹಾಯ ಮಾಡಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಕಿ ಮತ್ತು ಬೊಲೆರೋ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
Mangalore Police seize 33 quintals of PDS rice at Charmadi Check Post
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm