ಬ್ರೇಕಿಂಗ್ ನ್ಯೂಸ್
18-05-22 10:28 pm Mangaluru Correspondent ಕ್ರೈಂ
Photo credits : Representational Image
ಬೆಳ್ತಂಗಡಿ, ಮೇ 18: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ತುಂಬಿಸಿಕೊಂಡು ಚಿಕ್ಕಮಗಳೂರಿನ ಕಡೆಗೆ ಒಯ್ಯುತ್ತಿದ್ದಾಗ ಧರ್ಮಸ್ಥಳ ಪೊಲೀಸರು ತಡೆದು ವಶಕ್ಕೆ ಪಡೆದಿರುವ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಉಜಿರೆ ಕಡೆಯಿಂದ ತೆರಳುತ್ತಿದ್ದ ಕೆಎ 19ಸಿ 5086 ಸಂಖ್ಯೆಯ ಬೊಲೆರೋ ವಾಹನದಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಯಾವುದೇ ದಾಖಲಾತಿ ಇಲ್ಲದೆ 50 ಕೆಜಿ ಅಕ್ಕಿಯ 59 ಚೀಲಗಳು, 25 ಕೇಜಿಯ 14 ಗೋಣಿ ಚೀಲಗಳಲ್ಲಿ ಅಕ್ಕಿ ಪತ್ತೆಯಾಗಿದೆ. ಒಟ್ಟು 33 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದು, ಇದರ ಅಂದಾಜು ಮೌಲ್ಯ 49,500 ರೂ. ಆಗಿರುತ್ತದೆ.
ಈ ಬಗ್ಗೆ ಪೊಲೀಸರು ಬೆಳ್ತಂಗಡಿ ವಿಭಾಗದ ಆಹಾರ ನಿರೀಕ್ಷಕ ವಿಶ್ವ .ಕೆ , ಸಿಬಂದಿಯನ್ನು ಸ್ಥಳಕ್ಕೆ ಕರೆಸಿದ್ದು ಪಂಚನಾಮೆ ನಡೆಸಿದ್ದಾರೆ. ಆಹಾರ ನಿರೀಕ್ಷಕರ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೊಲೆರೊ ವಾಹನ ಚಾಲಕ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ನಿವಾಸಿ ವಿನಯ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ರಿ ಅಕ್ಕಿಯು ಮೇ ತಿಂಗಳಲ್ಲಿ ಪಡಿತರ ಅಂಗಡಿಗಳಿಗೆ ಪೂರೈಸಿದ ಅಕ್ಕಿಯೆಂದು ಆಹಾರ ಇಲಾಖೆಯ ಅಧಿಕಾರಿಗಳು ಗುರುತಿಸಿದ್ದಾರೆ.
ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಒಯ್ಯುತ್ತಿರುವ ಮಾಹಿತಿಯಿದ್ದು, ಚಾಲಕನಿಗೆ ಸಹಾಯ ಮಾಡಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಕಿ ಮತ್ತು ಬೊಲೆರೋ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
Mangalore Police seize 33 quintals of PDS rice at Charmadi Check Post
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm