ಬ್ರೇಕಿಂಗ್ ನ್ಯೂಸ್
 
            
                        18-05-22 10:28 pm Mangaluru Correspondent ಕ್ರೈಂ
 
            Photo credits : Representational Image
ಬೆಳ್ತಂಗಡಿ, ಮೇ 18: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ತುಂಬಿಸಿಕೊಂಡು ಚಿಕ್ಕಮಗಳೂರಿನ ಕಡೆಗೆ ಒಯ್ಯುತ್ತಿದ್ದಾಗ ಧರ್ಮಸ್ಥಳ ಪೊಲೀಸರು ತಡೆದು ವಶಕ್ಕೆ ಪಡೆದಿರುವ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಉಜಿರೆ ಕಡೆಯಿಂದ ತೆರಳುತ್ತಿದ್ದ ಕೆಎ 19ಸಿ 5086 ಸಂಖ್ಯೆಯ ಬೊಲೆರೋ ವಾಹನದಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಯಾವುದೇ ದಾಖಲಾತಿ ಇಲ್ಲದೆ 50 ಕೆಜಿ ಅಕ್ಕಿಯ 59 ಚೀಲಗಳು, 25 ಕೇಜಿಯ 14 ಗೋಣಿ ಚೀಲಗಳಲ್ಲಿ ಅಕ್ಕಿ ಪತ್ತೆಯಾಗಿದೆ. ಒಟ್ಟು 33 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದು, ಇದರ ಅಂದಾಜು ಮೌಲ್ಯ 49,500 ರೂ. ಆಗಿರುತ್ತದೆ.
ಈ ಬಗ್ಗೆ ಪೊಲೀಸರು ಬೆಳ್ತಂಗಡಿ ವಿಭಾಗದ ಆಹಾರ ನಿರೀಕ್ಷಕ ವಿಶ್ವ .ಕೆ , ಸಿಬಂದಿಯನ್ನು ಸ್ಥಳಕ್ಕೆ ಕರೆಸಿದ್ದು ಪಂಚನಾಮೆ ನಡೆಸಿದ್ದಾರೆ. ಆಹಾರ ನಿರೀಕ್ಷಕರ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೊಲೆರೊ ವಾಹನ ಚಾಲಕ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ನಿವಾಸಿ ವಿನಯ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ರಿ ಅಕ್ಕಿಯು ಮೇ ತಿಂಗಳಲ್ಲಿ ಪಡಿತರ ಅಂಗಡಿಗಳಿಗೆ ಪೂರೈಸಿದ ಅಕ್ಕಿಯೆಂದು ಆಹಾರ ಇಲಾಖೆಯ ಅಧಿಕಾರಿಗಳು ಗುರುತಿಸಿದ್ದಾರೆ.
ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಒಯ್ಯುತ್ತಿರುವ ಮಾಹಿತಿಯಿದ್ದು, ಚಾಲಕನಿಗೆ ಸಹಾಯ ಮಾಡಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಕಿ ಮತ್ತು ಬೊಲೆರೋ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
 
            
            
            Mangalore Police seize 33 quintals of PDS rice at Charmadi Check Post
 
    
            
             29-10-25 09:12 pm
                        
            
                  
                Bangalore Correspondent    
            
                    
 
    ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
 
    ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
 
    ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
 
    ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
 
    
            
             28-10-25 10:23 pm
                        
            
                  
                HK News Desk    
            
                    
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
 
    
            
             30-10-25 11:28 am
                        
            
                  
                Udupi Correspondent    
            
                    
 
    ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
 
    ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
 
    ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
 
    ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm