ಬ್ರೇಕಿಂಗ್ ನ್ಯೂಸ್
20-05-22 09:43 pm HK Desk News ಕ್ರೈಂ
ಮಂಜೇಶ್ವರ, ಮೇ 20: ಹಾಡಹಗಲೇ ಇಬ್ಬರು ಆಗಂತುಕರು ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಯನ್ನು ಬೆದರಿಸಿ ಚೂರಿ ತೋರಿಸಿ ಆಕೆಯ ಬಳಿಯಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಉಪ್ಪಳದಲ್ಲಿ ನಡೆದಿದೆ.
ಉಪ್ಪಳ ಅಂಚಿಕಟ್ಟೆಯ ಶಾಲೆ ಬಳಿಯ ನಿವಾಸಿ ಬಶೀರ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಇಬ್ಬರು ಯುವಕರು ಸ್ಕೂಟರಿನಲ್ಲಿ ಮನೆಯ ಆವರಣಕ್ಕೆ ಬಂದಿದ್ದು, ಮನೆಯಾಕೆಯಲ್ಲಿ ಮಾತನಾಡಿಸುವ ನೆಪದಲ್ಲಿ ಮನೆ ಒಳಗೆ ಬಂದಿದ್ದಾರೆ. ಈ ವೇಳೆ, ಚೂರಿ ತೋರಿಸಿ ಕೊಲ್ಲುವುದಾಗಿ ಬೆದರಿಸಿದ್ದಾರೆ. ಕೈ ಮತ್ತು ಕುತ್ತಿಗೆಯಲ್ಲಿದ್ದ ಚಿನ್ನದ ಆಭರಣಗಳನ್ನು ತೆಗೆದು ನೀಡುವಂತೆ ಸೂಚಿಸಿದ್ದಾರೆ.
ಬೆದರಿದ ಮಹಿಳೆ ಕೂಡಲೇ ತನ್ನ ಕೈಯಲ್ಲಿದ್ದ ಬಳೆ ಮತ್ತು ಕುತ್ತಿಗೆಯಲ್ಲಿದ್ದ ಸರವನ್ನು ತೆಗೆದು ಯುವಕರ ಕೈಗೆ ನೀಡಿದ್ದಾರೆ. ಆಗಂತುಕರು ಕೆಲವೇ ಕ್ಷಣದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಮಧ್ಯಾಹ್ನ ಹೊತ್ತಿಗೆ ಘಟನೆ ನಡೆದಿದ್ದು ಮನೆಯಲ್ಲಿದ್ದ ಪುರುಷರು ಮಸೀದಿಗೆ ಪ್ರಾರ್ಥನೆಗೆ ತೆರಳಿದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ಖಚಿತಪಡಿಸಿಕೊಂಡೇ ಆಗಂತುಕರು ಬಂದಿದ್ದರು ಎನ್ನಲಾಗುತ್ತಿದ್ದು ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ. ಮನೆಯ ಬಗ್ಗೆ ತಿಳಿದಿರುವ ಮಂದಿಯೇ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Two robbers entered a house and brandished a knife at a housewife during broad daylight and escaped with gold bangles from her. The incident happened near Uppala school at Uppala Anchikatte resident Bashir’s house. The robbers arrived in a scooter and entered the house and threatened the housewife with a knife ordering her to handover all the gold jewels that were with her. The woman who got scared removed the gold bangles from her hand and handed them over to the robbers.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm