ಬ್ರೇಕಿಂಗ್ ನ್ಯೂಸ್
03-06-22 08:42 pm Source: Vijayakarnataka ಡಿಜಿಟಲ್ ಟೆಕ್
ವಿಶ್ವ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಏಪ್ರಿಲ್ 2022ರ ವೇಳೆಗೆ ಶೇ.24% ರಷ್ಟು ಮಾರುಕಟ್ಟೆ ಪಾಲನ್ನು ಹೊಂದುವ ಮೂಲಕ ಸ್ಯಾಮ್ಸಂಗ್ ಮತ್ತೆ ಮಾರುಕಟ್ಟೆಯ ದಿಗ್ಗಜನಾಗಿ ಹೊರಹೊಮ್ಮಿದೆ. ಟೆಕ್ ದೈತ್ಯ ಆಪಲ್ ಹಾಗೂ ಚೀನಾದ ಸ್ಮಾರ್ಟ್ಫೋನ್ ಕಂಪೆನಿಗಳ ವಿರುದ್ಧ ಸೆಣೆಸಾಡುತ್ತಿರುವ ಸ್ಯಾಮ್ಸಂಗ್ ಕಳೆದ ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಶೇ. 24% ಮಾರುಕಟ್ಟೆ ಪಾಲನ್ನು ಪಡೆದುಕೊಂಡಿದ್ದು, ಜೂನ್ 2017ರ ನಂತರ ಮೊದಲ ಬಾರಿಗೆ ಸ್ಯಾಮ್ಸಂಗ್ ಮತ್ತೆ ಪುಟಿದೆದ್ದಿದೆ.
ಕೌಂಟರ್ಪಾಯಿಂಟ್ ರಿಸರ್ಚ್ ಪ್ರಕಾರ, 2022 ರ ಮೊದಲ ತ್ರೈಮಾಸಿಕದಲ್ಲಿ ಸುಮಾರು 24 ಪ್ರತಿಶತದಷ್ಟು ವಿಶ್ವ ಸ್ಮಾರ್ಟ್ಫೋನ್ ಮಾರುಕಟ್ಟೆ ಪಾಲನ್ನು ಹೊಂದಿರುವ ಅತ್ಯುತ್ತಮ-ಮಾರಾಟದ ಸ್ಮಾರ್ಟ್ಫೋನ್ ಬ್ರ್ಯಾಂಡ್ ಆಗಿ ಹೊರಹೊಮ್ಮಿದ್ದರೆ, ಎರಡನೇ ಸ್ಥಾನವನ್ನು ಪಡೆದುಕೊಂಡಿರುವ ಟೆಕ್ ದೈತ್ಯ ಆಪಲ್ ಶೇ. 15% ರಷ್ಟು ಮಾರುಕಟ್ಟೆಯ ಪಾಲನ್ನು ಹೊಂದಿದೆ. ಇನ್ನು ಮೂರನೇ ಸ್ಥಾನದಲ್ಲಿರುವ ಚೀನಾ ಮೂಲದ ಸ್ಮಾರ್ಟ್ಫೋನ್ ಬ್ರ್ಯಾಂಡ್ ಶಿಯೋಮಿ ಕಂಪೆನಿ ಶೇ.12 ರಷ್ಟು ಪಾಲನ್ನು ಪಡೆದಿದೆ.
ವಿಶ್ವ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಏಪ್ರಿಲ್ 2017 ರ ನಂತರ ಸ್ಯಾಮ್ಸಂಗ್ ಜಾಗತಿಕ ಪ್ರಾಬಲ್ಯದ ಈ ಮಟ್ಟವನ್ನು ತಲುಪಿಲ್ಲ. ಆಗ, ಸ್ಯಾಮ್ಸಂಗ್ ಕಂಪೆನಿಯು ಶೇ.25% ಮಾರುಕಟ್ಟೆ ಪಾಲನ್ನು ಹೊಂದಿತ್ತು. ಇದೀಗ ಏಪ್ರಿಲ್ 2022 ರಲ್ಲಿ ಸ್ಯಾಮ್ಸಂಗ್ ಆ ದಾಖಲೆಯನ್ನು ಸರಿಗಟ್ಟಲು ಕೇವಲ 1% ರಷ್ಟು ಹಿಂದುಳಿದಿದೆ. ಆದರೆ, ಸ್ಯಾಮ್ಸಂಗ್ ತನ್ನ ಬಜೆಟ್ ಸ್ಮಾರ್ಟ್ಫೋನ್ಗಳ ಮೂಲಕ ಇದನ್ನು ಕೂಡ ಸಾಧಿಸಬಹುದು ಎಂದು ಕೌಂಟರ್ಪಾಯಿಂಟ್ ರಿಸರ್ಚ್ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಸ್ಯಾಮ್ಸಂಗ್ ಕಂಪೆನಿಯ ಈ ಯಶಸ್ಸಿನ ಹಿಂದಿನ ಮೂಲ ಕಾರಣ Galaxy S22 ಸರಣಿ ಮತ್ತು Galaxy A ಸ್ಮಾರ್ಟ್ಫೋನ್ಗಳು ಎಂದು ಕೌಂಟರ್ಪಾಯಿಂಟ್ ರಿಸರ್ಚ್ ತಿಳಿಸಿದೆ. ಮಧ್ಯಮ ಶ್ರೇಣಿ ಹಾಗೂ ಕಡಿಮೆ ಬೆಲೆಯ Galaxy S22 ಮತ್ತು Galaxy A ಸ್ಮಾರ್ಟ್ಫೋನ್ಗಳು ಕಂಪೆನಿ ಉತ್ತಮ ಉತ್ಪನ್ನಗಳಾಗಿರುವುದರಿಂದ ಸ್ಯಾಮ್ಸಂಗ್ ಕಂಪೆನಿಯು ಧನಾತ್ಮಕ ಫಲಿತಾಂಶವನ್ನು ಕಂಡಿದೆ. ಈ ಪ್ರಾಬಲ್ಯ ಮತ್ತಷ್ಟು ಮುಂದುವರೆಯಬಹುದು ಎಂದು ಮಾರುಕಟ್ಟೆ ವಿಶ್ಲೇಷಕರು ತಿಳಿಸಿದ್ದಾರೆ.
ಹಲವು ವರ್ಷಗಳ ನಂತರ ಸ್ಯಾಮ್ಸಂಗ್ ಇಂತಹ ಯಶಸ್ಸನ್ನು ಪಡೆಯಲು ಭಾರತದ ಮೊಬೈಲ್ ಮಾರುಕಟ್ಟೆಯು ಹೆಚ್ಚು ಪ್ರಭಾವ ಬೀರಿದೆ. ಭಾರತ, ಲ್ಯಾಟಿನ್ ಅಮೇರಿಕಾ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ಸ್ಯಾಮ್ಸಂಗ್ನ ಕೊಡುಗೆಗಳು ಕಂಪೆನಿ ಅಸ್ತಿತ್ವವನ್ನು ವಿಸ್ತರಿಸಲು ಸಹಾಯ ಮಾಡಿದೆ. 2022 ರ ಅಂತ್ಯದ ವೇಳೆಗೆ ಫೀಚರ್ ಫೋನ್ ಮಾರುಕಟ್ಟೆಯನ್ನು ತ್ಯಜಿಸುವ ಉದ್ದೇಶವನ್ನು ಹೊಂದಿರುವುದಾಗಿ ಸ್ಯಾಮ್ಸಂಗ್ ಸಮೂಹವು ಘೋಷಿಸಿದ ಸ್ವಲ್ಪ ಸಮಯದಲ್ಲಿ ಇಂತಹದೊಂದು ಸಿಹಿಸುದ್ದಿ ಸಿಕ್ಕಿದೆ.
Samsung Tops Its Highest Global Smartphone Market Share In 5 Years.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm