ಬ್ರೇಕಿಂಗ್ ನ್ಯೂಸ್
08-07-22 08:06 pm Source: Vijayakarnataka ಡಿಜಿಟಲ್ ಟೆಕ್
ವಿಶ್ವದಾದ್ಯಂತ ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರನ್ನು ಸುರಕ್ಷಿತವಾಗಿಡಲು ಗೂಗಲ್ ಸಂಸ್ಥೆಯು ತೆಗೆದುಕೊಳ್ಳುವ ಪರಿಣಾಮಕಾರಿ ಕ್ರಮಗಳು ಸಹ ಸೈಬರ್ ಕ್ರಿಮಿಗಳನ್ನು ಹೊಸಕಿಹಾಕಲು ಸಾಧ್ಯವಾಗುತ್ತಿಲ್ಲ. ಸಾಮಾನ್ಯ ಡೆವಲಪರ್ಗಳ ರೂಪದಲ್ಲಿ ಗೂಗಲ್ ಪ್ಲೇ ಸ್ಟೋರ್ ಮೂಲಕ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳನ್ನು ತಲುಪುತ್ತಿರುವ ಹಾಗೂ ಬ್ಯಾಂಕ್ OTP ಸೇರಿದಂತೆ ಹಲವು ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿರುವ ಹೊಸ ನಾಲ್ಕು ಕಳ್ಳ ಅಪ್ಲಿಕೇಷನ್ಗಳನ್ನು ಗೂಗಲ್ ಪ್ಲೇ ಸ್ಟೋರ್ನಲ್ಲಿ ಗುರುತಿಸಲಾಗಿದ್ದು, ಈಗಾಗಲೇ 100,000+ ಬಳಕೆದಾರರಿಂದ ಡೌನ್ಲೋಡ್ ಮಾಡಲಾಗಿರುವ ನಾಲ್ಕು ಹೊಸ ದುರುದ್ದೇಶಪೂರಿತ ಅಪ್ಲಿಕೇಶನ್ಗಳನ್ನು ಈಗಲೇ ಡಿಲೀಟ್ ಮಾಡಿ ಎಂದು ಸೈಬರ್ ತಜ್ಞರು ಎಚ್ಚರಿಸಿದ್ದಾರೆ.
ಹೌದು, ಗೂಗಲ್ ಪ್ಲೇ ಸ್ಟೋರ್ನಲ್ಲಿ ನಾಲ್ಕು ಹೊಸ ದುರುದ್ದೇಶಪೂರಿತ ಅಪ್ಲಿಕೇಶನ್ಗಳನ್ನು ಕಂಡುಹಿಡಿಯಲಾಗಿದ್ದು, ಈ ಅಪ್ಲಿಕೇಶನ್ಗಳಲ್ಲಿ ಜೋಕರ್ ಎಂಬ ಮಾಲ್ವೇರ್ ಪತ್ತೆಯಾಗಿದೆ. ಜೋಕರ್ ಮಾಲ್ವೇರ್ ಸಹಾಯದಿಂದ ಬಳಕೆದಾರರ ಓಟಿಪಿ ಸೇರಿದಂತೆ ಹಲವು ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿರುವುದನ್ನು ಸೈಬರ್ ತಜ್ಷರು ಕಂಡುಹಿಡಿದಿದ್ದಾರೆ. ಇದಾದ ನಂತರ ಈ ಕಳ್ಳ ಅಪ್ಲಿಕೇಶನ್ಗಳ ಕುರಿತು Google ಸಂಸ್ಥೆಯು ಸಹ ತಿಳಿದು, ಈ ಎಲ್ಲಾ ನಾಲ್ಕು ಅಪ್ಲಿಕೇಷನ್ಗಳನ್ನು ತನ್ನ ಗೂಗಲ್ ಪ್ಲೇ ಸ್ಟೋರ್ನಿಂದ ತೆಗೆದುಹಾಕಿದೆ. ಆದರೆ, ಈಗಾಗಲೇ ಈ ನಾಲ್ಕು ಅಪ್ಲಿಕೇಷನ್ಗಳನ್ನು ಡೌನ್ಲೋಡ್ ಮಾಡಿ ಬಳಸುತ್ತಿರುವ ಗ್ರಾಹಕರು ಈ ಮಾಲ್ವೇರ್-ಸೋಂಕಿತ ಅಪ್ಲಿಕೇಶನ್ಗಳನ್ನು ಈಗಲೇ ಡಿಲೀಟ್ ಮಾಡಿ ಸುರಕ್ಷಿತರಾಗಿರಲು ಕೇಳಿಕೊಳ್ಳಲಾಗಿದೆ.
ಜೋಕರ್ ಮಾಲ್ವೇರ್ ಪತ್ತೆಯಾದ ನಾಲ್ಕು ಅಪ್ಲಿಕೇಶನ್ಗಳು ಇವು.
ಕೆಲವೊಂದು ದುರುದ್ದೇಶಪೂರಿತ ಅಪ್ಲಿಕೇಶನ್ಗಳನ್ನು Play Store ಸ್ಕ್ರೀನಿಂಗ್ ಪ್ರಕ್ರಿಯೆಯಲ್ಲಿ ಪತ್ತೆಹಚ್ಚಲು ಕಷ್ಟವಾಗುತ್ತದೆ. Google ನಿಂದ ಮಾಡಿದ ಅಪ್ಲಿಕೇಶನ್ಗಳ ಸಾಮಾನ್ಯ ಭದ್ರತಾ ಸ್ಕ್ರೀನಿಂಗ್ ಅನ್ನು ಬೈಪಾಸ್ ಮಾಡಲು ಹ್ಯಾಕರ್ಗಳು ಉತ್ತಮ ಮಾರ್ಗಗಳನ್ನು ಕಂಡುಕೊಂಡಿದ್ದಾರೆ ಎಂದು ಹೇಳಲಾಗಿದೆ. ಹಾಗಾಗಿ, ನಿಮ್ಮ Android ಸ್ಮಾರ್ಟ್ಫೋನ್ನಲ್ಲಿ ನೀವು ಈ ಮೇಲಿನ ನಾಲ್ಕು ಅಪ್ಲಿಕೇಶನ್ಗಳಲ್ಲಿ ಯಾವುದನ್ನಾದರೂ ಡೌನ್ಲೋಡ್ ಮಾಡಿದ್ದರೆ, ಕೂಡಲೇ ಡಿಲೀಟ್ ಮಾಡಿಬಿಡಿ. ಗೂಗಲ್ Play Store ನಿಂದಲೂ ಅಪರಿಚಿತ ಡೆವಲಪರ್ಗಳು ಹೋಸ್ಟ್ ಮಾಡಿರುವ ಅಪ್ಲಿಕೇಶನ್ಗಳನ್ನು ಡೌನ್ಲೋಡ್ ಮಾಡುವ ಮುನ್ನ ಎಚ್ಚರಿಕೆಯನ್ನು ವಹಿಸಿ. ವಿಶ್ವಾಸಾರ್ಹ ಮತ್ತು ಸುರಕ್ಷಿತ ಎಂದು ನಿಮಗೆ ತಿಳಿದಿರುವ ಕಂಪನಿಗಳು ಅಥವಾ ಸಾಕಷ್ಟು ಜನರು ರಿವ್ಯೂ ಮಾಡಿರುವ ಉತ್ತಮ ಅಪ್ಲಿಕೇಷನ್ಗಳನ್ನು ಮಾತ್ರ ಡೌನ್ಲೋಡ್ ಮಾಡಿ.
Four New Malicious Apps Have Been Discovered On The Google Play Store.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 09:12 pm
Mangalore Correspondent
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm