ಬ್ರೇಕಿಂಗ್ ನ್ಯೂಸ್
08-07-22 08:06 pm Source: Vijayakarnataka ಡಿಜಿಟಲ್ ಟೆಕ್
ವಿಶ್ವದಾದ್ಯಂತ ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರನ್ನು ಸುರಕ್ಷಿತವಾಗಿಡಲು ಗೂಗಲ್ ಸಂಸ್ಥೆಯು ತೆಗೆದುಕೊಳ್ಳುವ ಪರಿಣಾಮಕಾರಿ ಕ್ರಮಗಳು ಸಹ ಸೈಬರ್ ಕ್ರಿಮಿಗಳನ್ನು ಹೊಸಕಿಹಾಕಲು ಸಾಧ್ಯವಾಗುತ್ತಿಲ್ಲ. ಸಾಮಾನ್ಯ ಡೆವಲಪರ್ಗಳ ರೂಪದಲ್ಲಿ ಗೂಗಲ್ ಪ್ಲೇ ಸ್ಟೋರ್ ಮೂಲಕ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳನ್ನು ತಲುಪುತ್ತಿರುವ ಹಾಗೂ ಬ್ಯಾಂಕ್ OTP ಸೇರಿದಂತೆ ಹಲವು ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿರುವ ಹೊಸ ನಾಲ್ಕು ಕಳ್ಳ ಅಪ್ಲಿಕೇಷನ್ಗಳನ್ನು ಗೂಗಲ್ ಪ್ಲೇ ಸ್ಟೋರ್ನಲ್ಲಿ ಗುರುತಿಸಲಾಗಿದ್ದು, ಈಗಾಗಲೇ 100,000+ ಬಳಕೆದಾರರಿಂದ ಡೌನ್ಲೋಡ್ ಮಾಡಲಾಗಿರುವ ನಾಲ್ಕು ಹೊಸ ದುರುದ್ದೇಶಪೂರಿತ ಅಪ್ಲಿಕೇಶನ್ಗಳನ್ನು ಈಗಲೇ ಡಿಲೀಟ್ ಮಾಡಿ ಎಂದು ಸೈಬರ್ ತಜ್ಞರು ಎಚ್ಚರಿಸಿದ್ದಾರೆ.
ಹೌದು, ಗೂಗಲ್ ಪ್ಲೇ ಸ್ಟೋರ್ನಲ್ಲಿ ನಾಲ್ಕು ಹೊಸ ದುರುದ್ದೇಶಪೂರಿತ ಅಪ್ಲಿಕೇಶನ್ಗಳನ್ನು ಕಂಡುಹಿಡಿಯಲಾಗಿದ್ದು, ಈ ಅಪ್ಲಿಕೇಶನ್ಗಳಲ್ಲಿ ಜೋಕರ್ ಎಂಬ ಮಾಲ್ವೇರ್ ಪತ್ತೆಯಾಗಿದೆ. ಜೋಕರ್ ಮಾಲ್ವೇರ್ ಸಹಾಯದಿಂದ ಬಳಕೆದಾರರ ಓಟಿಪಿ ಸೇರಿದಂತೆ ಹಲವು ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿರುವುದನ್ನು ಸೈಬರ್ ತಜ್ಷರು ಕಂಡುಹಿಡಿದಿದ್ದಾರೆ. ಇದಾದ ನಂತರ ಈ ಕಳ್ಳ ಅಪ್ಲಿಕೇಶನ್ಗಳ ಕುರಿತು Google ಸಂಸ್ಥೆಯು ಸಹ ತಿಳಿದು, ಈ ಎಲ್ಲಾ ನಾಲ್ಕು ಅಪ್ಲಿಕೇಷನ್ಗಳನ್ನು ತನ್ನ ಗೂಗಲ್ ಪ್ಲೇ ಸ್ಟೋರ್ನಿಂದ ತೆಗೆದುಹಾಕಿದೆ. ಆದರೆ, ಈಗಾಗಲೇ ಈ ನಾಲ್ಕು ಅಪ್ಲಿಕೇಷನ್ಗಳನ್ನು ಡೌನ್ಲೋಡ್ ಮಾಡಿ ಬಳಸುತ್ತಿರುವ ಗ್ರಾಹಕರು ಈ ಮಾಲ್ವೇರ್-ಸೋಂಕಿತ ಅಪ್ಲಿಕೇಶನ್ಗಳನ್ನು ಈಗಲೇ ಡಿಲೀಟ್ ಮಾಡಿ ಸುರಕ್ಷಿತರಾಗಿರಲು ಕೇಳಿಕೊಳ್ಳಲಾಗಿದೆ.

ಜೋಕರ್ ಮಾಲ್ವೇರ್ ಪತ್ತೆಯಾದ ನಾಲ್ಕು ಅಪ್ಲಿಕೇಶನ್ಗಳು ಇವು.
ಕೆಲವೊಂದು ದುರುದ್ದೇಶಪೂರಿತ ಅಪ್ಲಿಕೇಶನ್ಗಳನ್ನು Play Store ಸ್ಕ್ರೀನಿಂಗ್ ಪ್ರಕ್ರಿಯೆಯಲ್ಲಿ ಪತ್ತೆಹಚ್ಚಲು ಕಷ್ಟವಾಗುತ್ತದೆ. Google ನಿಂದ ಮಾಡಿದ ಅಪ್ಲಿಕೇಶನ್ಗಳ ಸಾಮಾನ್ಯ ಭದ್ರತಾ ಸ್ಕ್ರೀನಿಂಗ್ ಅನ್ನು ಬೈಪಾಸ್ ಮಾಡಲು ಹ್ಯಾಕರ್ಗಳು ಉತ್ತಮ ಮಾರ್ಗಗಳನ್ನು ಕಂಡುಕೊಂಡಿದ್ದಾರೆ ಎಂದು ಹೇಳಲಾಗಿದೆ. ಹಾಗಾಗಿ, ನಿಮ್ಮ Android ಸ್ಮಾರ್ಟ್ಫೋನ್ನಲ್ಲಿ ನೀವು ಈ ಮೇಲಿನ ನಾಲ್ಕು ಅಪ್ಲಿಕೇಶನ್ಗಳಲ್ಲಿ ಯಾವುದನ್ನಾದರೂ ಡೌನ್ಲೋಡ್ ಮಾಡಿದ್ದರೆ, ಕೂಡಲೇ ಡಿಲೀಟ್ ಮಾಡಿಬಿಡಿ. ಗೂಗಲ್ Play Store ನಿಂದಲೂ ಅಪರಿಚಿತ ಡೆವಲಪರ್ಗಳು ಹೋಸ್ಟ್ ಮಾಡಿರುವ ಅಪ್ಲಿಕೇಶನ್ಗಳನ್ನು ಡೌನ್ಲೋಡ್ ಮಾಡುವ ಮುನ್ನ ಎಚ್ಚರಿಕೆಯನ್ನು ವಹಿಸಿ. ವಿಶ್ವಾಸಾರ್ಹ ಮತ್ತು ಸುರಕ್ಷಿತ ಎಂದು ನಿಮಗೆ ತಿಳಿದಿರುವ ಕಂಪನಿಗಳು ಅಥವಾ ಸಾಕಷ್ಟು ಜನರು ರಿವ್ಯೂ ಮಾಡಿರುವ ಉತ್ತಮ ಅಪ್ಲಿಕೇಷನ್ಗಳನ್ನು ಮಾತ್ರ ಡೌನ್ಲೋಡ್ ಮಾಡಿ.
Four New Malicious Apps Have Been Discovered On The Google Play Store.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm