ಬ್ರೇಕಿಂಗ್ ನ್ಯೂಸ್
07-10-22 07:21 pm Source: Vijayakarnataka ಡಿಜಿಟಲ್ ಟೆಕ್
ಆನ್ಲೈನಿನಲ್ಲಿ ಸ್ಮಾರ್ಟ್ಫೋನ್ ಬುಕ್ ಮಾಡಿದ ಗ್ರಾಹಕ ಸೋಪ್ ಬಾಕ್ಸ್ ಅಥವಾ ಇಟ್ಟಿಗೆಯಂತಹ ವಸ್ತುಗಳನ್ನು ಪಡೆದ ಟ್ರಾಜಿಡಿ ಕಥೆಗಳನ್ನು ನೀವು ಕೇಳಿರುತ್ತೀರಾ. ಆದರೆ, ಇಲ್ಲೋರ್ವ ವ್ಯಕ್ತಿ ಐಫೋನ್ 13 ಬುಕ್ ಮಾಡಿ ಹೊಚ್ಚ ಹೊಸ ಐಫೋನ್ 14 ಸಾಧನವನ್ನು ಪಡೆದಿದ್ದಾರೆ. ಹೌದು, ಇತ್ತೀಚಿಗಷ್ಟೆ ಫ್ಲಿಪ್ಕಾರ್ಟ್ ಆಯೋಜಿಸಿದ್ದ 'ಬಿಗ್ ದಸರಾ ಸೇಲ್'ನಲ್ಲಿ 49 ಸಾವಿರ ರೂ.ಪಾವತಿಸಿ ಐಫೋನ್ 13 ಪೋನನ್ನು ಬುಕ್ ಮಾಡಿರುವ ಗ್ರಾಹಕನಿಗೆ ಐಫೋನ್ 14 ಬಂದು ತಲುಪಿದೆ.
ಈ ಕುರಿತು ಜನಪ್ರಿಯ ಟ್ವಿಟರ್ ಬಳಕೆದಾರ ಅಶ್ವಿನ್ ಹೆಗ್ಡೆ ಎಂಬುವವರು ಟ್ವೀಟ್ ಮಾಡಿದ್ದು, ತಮ್ಮ ಸಾಮಾಜಿಕ ಮಾಧ್ಯಮವನ್ನು ಫಾಲೊ ಮಾಡುತ್ತಿರುವ ವ್ಯಕ್ತಿಯೋರ್ವರು ಐಫೋನ್ 13 ಸಾಧನವನ್ನು ಬುಕ್ ಮಾಡಿ ಐಫೋನ್ 14 ಸಾಧನವನ್ನು ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತಂತೆ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅಶ್ವಿನ್ ಹೆಗ್ಡೆ, ಐಫೋನ್ 13 ಸಾಧನವನ್ನು ಬುಕ್ ಮಾಡಿದ್ದ ವ್ಯಕ್ತಿಗೆ ಐಫೋನ್ 14 ಬಂದು ತಲುಪಿರುವ ಬಗ್ಗೆ ಸ್ಕ್ರೀನ್ಶಾಟ್ ಸಹ ಅಪ್ಲೋಡ್ ಮಾಡಿದ್ದಾರೆ.

ಫ್ಲಿಪ್ಕಾರ್ಟ್ ಬಿಗ್ ದಸರಾ ಸೇಲ್ನಲ್ಲಿ Apple iPhone 13 ಸಾಧನವು 50,000 ರೂ. ಕ್ಕಿಂತ ಕಡಿಮೆ ಬೆಲೆಗೆ ಖರೀದಿಗೆ ಲಭ್ಯವಿತ್ತು. ಆದರೆ, ಇತ್ತೀಚಿಗಷ್ಟೇ ಮೊಬೈಲ್ ಮಾರುಕಟ್ಟೆಗೆ ಬಿಡುಗಡೆಯಾಗಿರುವ ಐಫೋನ್ 14 ಸಾಧನದ ಮೂಲ ಬೆಲೆ 79,900 ರೂ.ಗಳಾಗಿವೆ. ಇದರಿಂದ ಐಫೋನ್ 13 ಸಾಧನವನ್ನು ಬುಕ್ ಮಾಡಿದ ವ್ಯಕ್ತಿಗೆ ಜಾಕ್ಪಾಟ್ ಹೊಡೆದಿದೆ ಎಂದು ಹಲವು ಟ್ವಿಟರ್ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ. ಇದು ನಿಜಕ್ಕೂ ಸಂತಸದ ವಿಷಯ ಎಂದು ಹಲವು ಹೇಳಿದ್ದಾರೆ.

ಇನ್ನು ಈ ಘಟನೆಯ ಬಗ್ಗೆ ಫ್ಲಿಪ್ಕಾರ್ಟ್ ಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಇದು ಮೊಬೈಲ್ ಪೂರೈಕೆದಾರರ ಕಣ್ತಪ್ಪಿನಿಂದಾಗಿರಬಹುದು ಎಂದು ಹೇಳಲಾಗುತ್ತಿದೆ. ಇತ್ತೀಚಿಗಷ್ಟೆ ಫ್ಲಿಪ್ಕಾರ್ಟ್ ನಲ್ಲಿ ಲ್ಯಾಪ್ಟಾಪ್ ಒಂದನ್ನು ಬುಕ್ ಮಾಡಿದ್ದ ವ್ಯಕ್ತಿಯು ಸೋಪ್ ಡಿಟರ್ಜೆಂಟ್ ಬಾಕ್ಸ್ ಇರುವ ಪ್ಯಾಕೇಜ್ ಒಂದನ್ನು ಪಡೆದಿದ್ದರು ಎಂಬ ಸುದ್ದಿ ವೈರಲ್ ಆಗಿತ್ತು. ಈ ಸುದ್ದಿ ಹೊರಬಿದ್ದ ಎರಡು ದಿನಗಳಲ್ಲೇ ಫ್ಲಿಪ್ಕಾರ್ಟ್ ಸಂಸ್ಥೆಯು ಆ ವ್ಯಕ್ತಿಗೆ ಸೂಕ್ತ ನ್ಯಾಯ ಒದಗಿಸಿರುವುದಾಗಿ ತಿಳಿಸಿತ್ತು.
Flipkart Delivers Iphone 14 To Customer Who Ordered Iphone 13.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm