ಬ್ರೇಕಿಂಗ್ ನ್ಯೂಸ್
21-10-22 08:04 pm Source: Vijayakarnataka ಡಿಜಿಟಲ್ ಟೆಕ್
ಭಾರತದ ಲ್ಯಾಪ್ಟಾಪ್ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಕಾತುರವಾಗಿರುವ ಜಿಯೋವಿನ ಮೊಟ್ಟ ಮೊದಲ ಲ್ಯಾಪ್ಟಾಪ್ 'ಜಿಯೋಬುಕ್' (JioBook) ದೇಶದಲ್ಲಿ ಇಂದಿನಿಂದ ಮಾರಾಟಕ್ಕೆ ಬಂದಿದೆ. ದೇಶದ ಜನಪ್ರಿಯ ಇ-ಕಾಮರ್ಸ್ ಮಾರುಕಟ್ಟೆಗಳಲ್ಲಿ ಒಂದಾದ ರಿಲಯನ್ಸ್ ಡಿಜಿಟಲ್ ವೆಬ್ಸೈಟ್ನಲ್ಲಿ ಜಿಯೋಬುಕ್ ಲ್ಯಾಪ್ಟಾಪನ್ನು ಮಾರಾಟಕ್ಕಿಡಲಾಗಿದ್ದು, 15,000 ರೂ. ಬೆಲೆಯಲ್ಲಿ ಜಿಯೋಬುಕ್ ಸಾಧನವನ್ನು ಖರೀದಿಸಬಹುದು ಎಂದು ರಿಲಯನ್ಸ್ ಜಿಯೋ ಸಂಸ್ಥೆ ತಿಳಿಸಿದೆ.
ಇದೇ ತಿಂಗಳ ಆರಂಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನಲ್ಲಿ ಜಿಯೋ ತನ್ನ ಮೊಟ್ಟ ಮೊದಲ ಲ್ಯಾಪ್ಟಾಪ್ ಜಿಯೋಬುಕ್ ಸಾಧನವನ್ನು ಬಿಡುಗಡೆಗೊಳಿಸಿತ್ತು. ಇದೀಗ ರಿಲಯನ್ಸ್ ಡಿಜಿಟಲ್ನ ವೆಬ್ಸೈಟ್ ಮೂಲಕ ಭಾರತೀಯ ಗ್ರಾಹಕರಿಗೆ ಲಭ್ಯವಾಗುವಂತೆ ಜಿಯೋಬುಕ್ ಸಾಧನವನ್ನು ಲೈವ್ನಲ್ಲಿ ಇಡಲಾಗಿದ್ದು, 19,500 ರೂ. ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದ್ದ ಈ ಲ್ಯಾಪ್ಟಾಪ್ ಅನ್ನು ಗ್ರಾಹಕರು ಇದೀಗ 15,799 ರೂ. ಗಳ ಬೆಲೆಯಲ್ಲಿ ಖರೀದಿಸಬಹುದಾಗಿದೆ.

ಜಿಯೋಬುಕ್ ಲ್ಯಾಪ್ಟಾಪ್ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯುಕ್ತ ಎನಿಸುವ ಬಜೆಟ್ ಪ್ರೈಸ್ನ ಒಂದು ಲ್ಯಾಪ್ಟಾಪ್ ಆಗಿದ್ದು, ಜಾಗತಿಕ ಟೆಕ್ ದೈತ್ಯ ಕಂಪೆನಿಗಳಾದ Qualcomm ಮತ್ತು Microsoft ಸಹಭಾಗಿತ್ವದಲ್ಲಿ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಸಂಸ್ಥೆಯು ಈ ಜಿಯೋ ಲ್ಯಾಪ್ಟಾಪ್ ಅನ್ನು ಅಭಿವೃದ್ಧಿಪಡಿಸಿದೆ. ಹಾಗಾದರೆ ನೂತನ ಜಿಯೋ ಲ್ಯಾಪ್ಟಾಪ್ ಹೇಗಿದೆ?, ಈ ಲ್ಯಾಪ್ಟಾಪ್ ಮೇಲೆ ಏನೆಲ್ಲಾ ಕೊಡುಗೆಗಳನ್ನು ನೀಡಲಾಗಿದೆ ಎಂಬುದನ್ನು ನೋಡೋಣ ಬನ್ನಿ.

ಜಿಯೋಬುಕ್ ಲ್ಯಾಪ್ಟಾಪ್ನ ವೈಶಿಷ್ಟ್ಯಗಳು
ಭಾರತದಲ್ಲಿ ಜಿಯೋಬುಕ್ ಸಾಧನದ ಬೆಲೆ ಮತ್ತು ಲಭ್ಯತೆ
ಮೊದಲೇ ಹೇಳಿದಂತೆ, ದೇಶದಲ್ಲಿ ಜಿಯೋಬುಕ್ ಲ್ಯಾಪ್ಟಾಪ್ ಅನ್ನು ಇದೀಗ 15,799 ರೂ. ಗಳ ಬೆಲೆಯಲ್ಲಿ ಮಾರಾಟಕ್ಕಿಡಲಾಗಿದೆ. ಈ ಸಾಧನದ ಮೇಲೆ Axis, Kotak, ICICI, HDFC, AU, INDUSIND, DB ಮತ್ತು ಇತರ ಪ್ರಮುಖ ಬ್ಯಾಂಕ್ ಕ್ರೆಡಿಟ್ ಕಾರ್ಡ್ಗಳೊಂದಿಗೆ 10 ಪ್ರತಿಶತ ತ್ವರಿತ ರಿಯಾಯಿತಿಯನ್ನು ಸಹ ಒದಗಿಸಲಾಗಿದೆ. ಗ್ರಾಹಕರು ರಿಲಯನ್ಸ್ ಡಿಜಿಟಲ್ ಸ್ಟೋರ್ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಜಿಯೋಬುಕ್ ಲ್ಯಾಪ್ಟಾಪ್ ಅನ್ನು ಖರೀದಿಸಬಹುದು. ನಂತರ ಹತ್ತಿರದ Jio ಸ್ಟೋರ್ಗೆ ಭೇಟಿ ನೀಡಿ, ಜಿಯೋಬುಕ್ ಲ್ಯಾಪ್ಟಾಪ್ನಲ್ಲಿ ಇರುವ ಅಂತರ್ಗತ SIM ಕಾರ್ಡ್ ಅನ್ನು ಸಕ್ರಿಯಗೊಳಿಸಿಕೊಳ್ಳಬೇಕು ಎಂದು ಜಿಯೋ ಸಂಸ್ಥೆ ತಿಳಿಸಿದೆ.
Jiobook Laptop Now Available For Sale In India All Details Here.
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
ಹೆಸರಿನಲ್ಲಿ ತಪ್ಪಿದೆ ಎಂದು ದಕ್ಷಿಣ ಕನ್ನಡ ಮಾಜಿ ಜಿಲ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm