ಬ್ರೇಕಿಂಗ್ ನ್ಯೂಸ್
04-12-20 01:22 pm Source: GIZBOT ಡಿಜಿಟಲ್ ಟೆಕ್
ಆಗ್ಮೆಂಟೆಡ್-ರಿಯಾಲಿಟಿ ಮೊಬೈಲ್ ಗೇಮಿಂಗ್ ಸಂಸ್ಥೆ ಕ್ರಿಕಿ, 'ಯಾತ್ರಾ' ಎಂಬ ಹೊಸ ಆಗ್ಮೆಂಟೆಡ್ ರಿಯಾಲಿಟಿ ಗೇಮ್ ಅನ್ನು ಜಿಯೋ ಸಹಯೋಗದೊಡನೆ ಭಾರತದಲ್ಲಿ ಪರಿಚಯಿಸಿದೆ. ಸೀರೀಸ್ ಎ ಫಂಡಿಂಗ್ ಸುತ್ತನ್ನೂ ಮುನ್ನಡೆಸಿದ ಜಿಯೋ, ಕ್ರಿಕಿ ಪಡೆದ ಒಟ್ಟು ಹೂಡಿಕೆಯನ್ನು 22 ಮಿಲಿಯನ್ ಡಾಲರುಗಳಿಗೆ ಕೊಂಡೊಯ್ದಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕ್ರಿಕಿ ಸಂಸ್ಥಾಪಕರಾದ ಜಾಹ್ನವಿ ಮತ್ತು ಕೇತಕಿ ಶ್ರೀರಾಮ್, "ತಲ್ಲೀನಗೊಳಿಸುವ ರೀತಿಯಲ್ಲಿ ಸ್ಫೂರ್ತಿ ಮತ್ತು ವಾಸ್ತವವನ್ನು ಒಂದುಗೂಡಿಸುವುದು ಕ್ರಿಕಿಯೊಂದಿಗಿನ ನಮ್ಮ ದೃಷ್ಟಿಕೋನವಾಗಿದೆ. ಆಗ್ಮೆಂಟೆಡ್ ರಿಯಾಲಿಟಿಯೊಂದಿಗೆ, ನಿಮ್ಮ ಮೊಬೈಲ್ ಫೋನ್ನ ಕಿಟಕಿಯ ಮೂಲಕ ಫ್ಯಾಂಟಸಿ ಪ್ರಪಂಚಗಳನ್ನು ನೇರವಾಗಿ ನಿಮ್ಮ ಮನೆಗೆ ತರಲು ನಮಗೆ ಸಾಧ್ಯವಾಗುತ್ತದೆ." ಎಂದು ಹೇಳಿದ್ದಾರೆ.

ಕೇವಲ ತಮ್ಮ ಮೊಬೈಲ್ ಫೋನ್ ಕ್ಯಾಮೆರಾದೊಂದಿಗೆ, ಆಟಗಾರರು ಯಾತ್ರಾದ ಆಕ್ಷನ್-ಸಾಹಸಗಾಥೆಯನ್ನು ಪ್ರವೇಶಿಸಬಹುದು ಮತ್ತು ಮಾನ್ಸ್ಟರ್ಗಳ ಸೈನ್ಯವನ್ನು ಸೋಲಿಸುವ ಅನ್ವೇಷಣೆಗೆ ಸೇರಬಹುದು. ಬಿಲ್ಲು ಮತ್ತು ಬಾಣ, ಚಕ್ರ, ಮಿಂಚು ಮತ್ತು ಫೈರ್ ಬೋಲ್ಟ್ಗಳಂತಹ ಶಸ್ತ್ರಾಸ್ತ್ರಗಳನ್ನು ಬಳಸಿ, ಆಟಗಾರರು ವಿವಿಧ ಹಂತದ ಯುದ್ಧ ಮತ್ತು ಪಜಲ್ ಗೇಮ್ಗಳ ಮೂಲಕ ಹೋರಾಡಬಹುದು.
ಬಳಕೆದಾರರು ತಮ್ಮ ಆಟವನ್ನು ಪೂರ್ಣಗೊಳಿಸಿದ ನಂತರ, ವೈಯಕ್ತಿಕಗೊಳಿಸಿದ ವೀಡಿಯೊವನ್ನು ತಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಬಹುದು. ಇತರ ಬಳಕೆದಾರರು ಪೋಸ್ಟ್ ಮಾಡಿದ ಆಟದ ವೀಡಿಯೊಗಳನ್ನು ನೋಡಲು ವೀಡಿಯೊ ಫೀಡ್ಗಳು ಮತ್ತು ಡಿಜಿಟಲ್ ತರಬೇತಿ ಮೈದಾನ ಕೂಡ ಲಭ್ಯವಿದ್ದು, ಮತ್ತೆ ಆಡುವ ಮೊದಲು ಆಟಗಾರರು ಅಲ್ಲಿ ತಮ್ಮ ಬಿಲ್ಲು - ಬಾಣದ ಕೌಶಲವನ್ನು ಅಭ್ಯಾಸ ಮಾಡಬಹುದು. ಜಿಯೋ ಬಳಕೆದಾರರಿಗೆ ಈ ಕೆಳಗಿನ ವಿಶೇಷ ಸೌಲಭ್ಯಗಳು ದೊರಕುತ್ತಿವೆ:

3ಡಿ ಅವತಾರ್ ವೈಶಿಷ್ಟ್ಯ
ಹೆಚ್ಚುವರಿ ಶಸ್ತ್ರಾಸ್ತ್ರಗಳು ಮತ್ತು ಪವರ್ಗಳನ್ನು ಅನ್ಲಾಕ್ ಮಾಡಲು ಗೇಮ್ಪ್ಲೇ ಟೋಕನ್ಗಳು
ಗೇಮ್ ಲೆವೆಲ್ಗಳು
ಈ ಸಂದರ್ಭದಲ್ಲಿ ಮಾತನಾಡಿದ ಜಿಯೋ ನಿರ್ದೇಶಕ ಆಕಾಶ್ ಅಂಬಾನಿ, "ಆಗ್ಮೆಂಟೆಡ್ ರಿಯಾಲಿಟಿಯನ್ನು ಅಂಗೀಕರಿಸಲು ಕ್ರಿಕಿ ಒಂದು ಇಡೀ ಪೀಳಿಗೆಯ ಭಾರತೀಯರನ್ನು ಪ್ರೇರೇಪಿಸಲಿದೆ. ಪ್ರಪಂಚದೆಲ್ಲೆಡೆಯ ಅತ್ಯುತ್ತಮ ಅನುಭವಗಳನ್ನು ಭಾರತಕ್ಕೆ ತರುವುದು ನಮ್ಮ ದೃಷ್ಟಿಕೋನವಾಗಿದೆ ಮತ್ತು ಯಾತ್ರಾದ ಪರಿಚಯವು ಆ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ.

ಆಗ್ಮೆಂಟೆಡ್ ರಿಯಾಲಿಟಿ ಗೇಮಿಂಗ್ ಬಳಕೆದಾರರನ್ನು ತನ್ನದೇ ಆದ ಜಗತ್ತಿನೊಳಕ್ಕೆ ಕರೆದೊಯ್ಯುತ್ತದೆ, ಮತ್ತು ಯಾತ್ರಾ ಮೂಲಕ ಆಗ್ಮೆಂಟೆಡ್ ರಿಯಾಲಿಟಿಯನ್ನು (AR) ಅನುಭವಿಸಲು ನಾವು ಜಿಯೋ ಮತ್ತು ಬೇರೆಲ್ಲ ಸೇವೆಗಳ ಪ್ರತಿಯೊಬ್ಬ ಬಳಕೆದಾರರನ್ನೂ ಆಹ್ವಾನಿಸುತ್ತೇವೆ." ಎಂದು ಹೇಳಿದ್ದಾರೆ. ಕ್ರಿಕಿ ಈಗ ಐಒಎಸ್ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇ ಸ್ಟೋರ್ಗಳಲ್ಲಿ ಉಚಿತವಾಗಿ ಲಭ್ಯವಿದೆ.
This News Article is a Copy of GIZBOT
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm