ಬ್ರೇಕಿಂಗ್ ನ್ಯೂಸ್
04-12-20 01:22 pm Source: GIZBOT ಡಿಜಿಟಲ್ ಟೆಕ್
ಆಗ್ಮೆಂಟೆಡ್-ರಿಯಾಲಿಟಿ ಮೊಬೈಲ್ ಗೇಮಿಂಗ್ ಸಂಸ್ಥೆ ಕ್ರಿಕಿ, 'ಯಾತ್ರಾ' ಎಂಬ ಹೊಸ ಆಗ್ಮೆಂಟೆಡ್ ರಿಯಾಲಿಟಿ ಗೇಮ್ ಅನ್ನು ಜಿಯೋ ಸಹಯೋಗದೊಡನೆ ಭಾರತದಲ್ಲಿ ಪರಿಚಯಿಸಿದೆ. ಸೀರೀಸ್ ಎ ಫಂಡಿಂಗ್ ಸುತ್ತನ್ನೂ ಮುನ್ನಡೆಸಿದ ಜಿಯೋ, ಕ್ರಿಕಿ ಪಡೆದ ಒಟ್ಟು ಹೂಡಿಕೆಯನ್ನು 22 ಮಿಲಿಯನ್ ಡಾಲರುಗಳಿಗೆ ಕೊಂಡೊಯ್ದಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕ್ರಿಕಿ ಸಂಸ್ಥಾಪಕರಾದ ಜಾಹ್ನವಿ ಮತ್ತು ಕೇತಕಿ ಶ್ರೀರಾಮ್, "ತಲ್ಲೀನಗೊಳಿಸುವ ರೀತಿಯಲ್ಲಿ ಸ್ಫೂರ್ತಿ ಮತ್ತು ವಾಸ್ತವವನ್ನು ಒಂದುಗೂಡಿಸುವುದು ಕ್ರಿಕಿಯೊಂದಿಗಿನ ನಮ್ಮ ದೃಷ್ಟಿಕೋನವಾಗಿದೆ. ಆಗ್ಮೆಂಟೆಡ್ ರಿಯಾಲಿಟಿಯೊಂದಿಗೆ, ನಿಮ್ಮ ಮೊಬೈಲ್ ಫೋನ್ನ ಕಿಟಕಿಯ ಮೂಲಕ ಫ್ಯಾಂಟಸಿ ಪ್ರಪಂಚಗಳನ್ನು ನೇರವಾಗಿ ನಿಮ್ಮ ಮನೆಗೆ ತರಲು ನಮಗೆ ಸಾಧ್ಯವಾಗುತ್ತದೆ." ಎಂದು ಹೇಳಿದ್ದಾರೆ.

ಕೇವಲ ತಮ್ಮ ಮೊಬೈಲ್ ಫೋನ್ ಕ್ಯಾಮೆರಾದೊಂದಿಗೆ, ಆಟಗಾರರು ಯಾತ್ರಾದ ಆಕ್ಷನ್-ಸಾಹಸಗಾಥೆಯನ್ನು ಪ್ರವೇಶಿಸಬಹುದು ಮತ್ತು ಮಾನ್ಸ್ಟರ್ಗಳ ಸೈನ್ಯವನ್ನು ಸೋಲಿಸುವ ಅನ್ವೇಷಣೆಗೆ ಸೇರಬಹುದು. ಬಿಲ್ಲು ಮತ್ತು ಬಾಣ, ಚಕ್ರ, ಮಿಂಚು ಮತ್ತು ಫೈರ್ ಬೋಲ್ಟ್ಗಳಂತಹ ಶಸ್ತ್ರಾಸ್ತ್ರಗಳನ್ನು ಬಳಸಿ, ಆಟಗಾರರು ವಿವಿಧ ಹಂತದ ಯುದ್ಧ ಮತ್ತು ಪಜಲ್ ಗೇಮ್ಗಳ ಮೂಲಕ ಹೋರಾಡಬಹುದು.
ಬಳಕೆದಾರರು ತಮ್ಮ ಆಟವನ್ನು ಪೂರ್ಣಗೊಳಿಸಿದ ನಂತರ, ವೈಯಕ್ತಿಕಗೊಳಿಸಿದ ವೀಡಿಯೊವನ್ನು ತಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಬಹುದು. ಇತರ ಬಳಕೆದಾರರು ಪೋಸ್ಟ್ ಮಾಡಿದ ಆಟದ ವೀಡಿಯೊಗಳನ್ನು ನೋಡಲು ವೀಡಿಯೊ ಫೀಡ್ಗಳು ಮತ್ತು ಡಿಜಿಟಲ್ ತರಬೇತಿ ಮೈದಾನ ಕೂಡ ಲಭ್ಯವಿದ್ದು, ಮತ್ತೆ ಆಡುವ ಮೊದಲು ಆಟಗಾರರು ಅಲ್ಲಿ ತಮ್ಮ ಬಿಲ್ಲು - ಬಾಣದ ಕೌಶಲವನ್ನು ಅಭ್ಯಾಸ ಮಾಡಬಹುದು. ಜಿಯೋ ಬಳಕೆದಾರರಿಗೆ ಈ ಕೆಳಗಿನ ವಿಶೇಷ ಸೌಲಭ್ಯಗಳು ದೊರಕುತ್ತಿವೆ:

3ಡಿ ಅವತಾರ್ ವೈಶಿಷ್ಟ್ಯ
ಹೆಚ್ಚುವರಿ ಶಸ್ತ್ರಾಸ್ತ್ರಗಳು ಮತ್ತು ಪವರ್ಗಳನ್ನು ಅನ್ಲಾಕ್ ಮಾಡಲು ಗೇಮ್ಪ್ಲೇ ಟೋಕನ್ಗಳು
ಗೇಮ್ ಲೆವೆಲ್ಗಳು
ಈ ಸಂದರ್ಭದಲ್ಲಿ ಮಾತನಾಡಿದ ಜಿಯೋ ನಿರ್ದೇಶಕ ಆಕಾಶ್ ಅಂಬಾನಿ, "ಆಗ್ಮೆಂಟೆಡ್ ರಿಯಾಲಿಟಿಯನ್ನು ಅಂಗೀಕರಿಸಲು ಕ್ರಿಕಿ ಒಂದು ಇಡೀ ಪೀಳಿಗೆಯ ಭಾರತೀಯರನ್ನು ಪ್ರೇರೇಪಿಸಲಿದೆ. ಪ್ರಪಂಚದೆಲ್ಲೆಡೆಯ ಅತ್ಯುತ್ತಮ ಅನುಭವಗಳನ್ನು ಭಾರತಕ್ಕೆ ತರುವುದು ನಮ್ಮ ದೃಷ್ಟಿಕೋನವಾಗಿದೆ ಮತ್ತು ಯಾತ್ರಾದ ಪರಿಚಯವು ಆ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ.

ಆಗ್ಮೆಂಟೆಡ್ ರಿಯಾಲಿಟಿ ಗೇಮಿಂಗ್ ಬಳಕೆದಾರರನ್ನು ತನ್ನದೇ ಆದ ಜಗತ್ತಿನೊಳಕ್ಕೆ ಕರೆದೊಯ್ಯುತ್ತದೆ, ಮತ್ತು ಯಾತ್ರಾ ಮೂಲಕ ಆಗ್ಮೆಂಟೆಡ್ ರಿಯಾಲಿಟಿಯನ್ನು (AR) ಅನುಭವಿಸಲು ನಾವು ಜಿಯೋ ಮತ್ತು ಬೇರೆಲ್ಲ ಸೇವೆಗಳ ಪ್ರತಿಯೊಬ್ಬ ಬಳಕೆದಾರರನ್ನೂ ಆಹ್ವಾನಿಸುತ್ತೇವೆ." ಎಂದು ಹೇಳಿದ್ದಾರೆ. ಕ್ರಿಕಿ ಈಗ ಐಒಎಸ್ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇ ಸ್ಟೋರ್ಗಳಲ್ಲಿ ಉಚಿತವಾಗಿ ಲಭ್ಯವಿದೆ.
This News Article is a Copy of GIZBOT
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm