ಬ್ರೇಕಿಂಗ್ ನ್ಯೂಸ್
04-12-20 01:22 pm Source: GIZBOT ಡಿಜಿಟಲ್ ಟೆಕ್
ಆಗ್ಮೆಂಟೆಡ್-ರಿಯಾಲಿಟಿ ಮೊಬೈಲ್ ಗೇಮಿಂಗ್ ಸಂಸ್ಥೆ ಕ್ರಿಕಿ, 'ಯಾತ್ರಾ' ಎಂಬ ಹೊಸ ಆಗ್ಮೆಂಟೆಡ್ ರಿಯಾಲಿಟಿ ಗೇಮ್ ಅನ್ನು ಜಿಯೋ ಸಹಯೋಗದೊಡನೆ ಭಾರತದಲ್ಲಿ ಪರಿಚಯಿಸಿದೆ. ಸೀರೀಸ್ ಎ ಫಂಡಿಂಗ್ ಸುತ್ತನ್ನೂ ಮುನ್ನಡೆಸಿದ ಜಿಯೋ, ಕ್ರಿಕಿ ಪಡೆದ ಒಟ್ಟು ಹೂಡಿಕೆಯನ್ನು 22 ಮಿಲಿಯನ್ ಡಾಲರುಗಳಿಗೆ ಕೊಂಡೊಯ್ದಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕ್ರಿಕಿ ಸಂಸ್ಥಾಪಕರಾದ ಜಾಹ್ನವಿ ಮತ್ತು ಕೇತಕಿ ಶ್ರೀರಾಮ್, "ತಲ್ಲೀನಗೊಳಿಸುವ ರೀತಿಯಲ್ಲಿ ಸ್ಫೂರ್ತಿ ಮತ್ತು ವಾಸ್ತವವನ್ನು ಒಂದುಗೂಡಿಸುವುದು ಕ್ರಿಕಿಯೊಂದಿಗಿನ ನಮ್ಮ ದೃಷ್ಟಿಕೋನವಾಗಿದೆ. ಆಗ್ಮೆಂಟೆಡ್ ರಿಯಾಲಿಟಿಯೊಂದಿಗೆ, ನಿಮ್ಮ ಮೊಬೈಲ್ ಫೋನ್ನ ಕಿಟಕಿಯ ಮೂಲಕ ಫ್ಯಾಂಟಸಿ ಪ್ರಪಂಚಗಳನ್ನು ನೇರವಾಗಿ ನಿಮ್ಮ ಮನೆಗೆ ತರಲು ನಮಗೆ ಸಾಧ್ಯವಾಗುತ್ತದೆ." ಎಂದು ಹೇಳಿದ್ದಾರೆ.

ಕೇವಲ ತಮ್ಮ ಮೊಬೈಲ್ ಫೋನ್ ಕ್ಯಾಮೆರಾದೊಂದಿಗೆ, ಆಟಗಾರರು ಯಾತ್ರಾದ ಆಕ್ಷನ್-ಸಾಹಸಗಾಥೆಯನ್ನು ಪ್ರವೇಶಿಸಬಹುದು ಮತ್ತು ಮಾನ್ಸ್ಟರ್ಗಳ ಸೈನ್ಯವನ್ನು ಸೋಲಿಸುವ ಅನ್ವೇಷಣೆಗೆ ಸೇರಬಹುದು. ಬಿಲ್ಲು ಮತ್ತು ಬಾಣ, ಚಕ್ರ, ಮಿಂಚು ಮತ್ತು ಫೈರ್ ಬೋಲ್ಟ್ಗಳಂತಹ ಶಸ್ತ್ರಾಸ್ತ್ರಗಳನ್ನು ಬಳಸಿ, ಆಟಗಾರರು ವಿವಿಧ ಹಂತದ ಯುದ್ಧ ಮತ್ತು ಪಜಲ್ ಗೇಮ್ಗಳ ಮೂಲಕ ಹೋರಾಡಬಹುದು.
ಬಳಕೆದಾರರು ತಮ್ಮ ಆಟವನ್ನು ಪೂರ್ಣಗೊಳಿಸಿದ ನಂತರ, ವೈಯಕ್ತಿಕಗೊಳಿಸಿದ ವೀಡಿಯೊವನ್ನು ತಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಬಹುದು. ಇತರ ಬಳಕೆದಾರರು ಪೋಸ್ಟ್ ಮಾಡಿದ ಆಟದ ವೀಡಿಯೊಗಳನ್ನು ನೋಡಲು ವೀಡಿಯೊ ಫೀಡ್ಗಳು ಮತ್ತು ಡಿಜಿಟಲ್ ತರಬೇತಿ ಮೈದಾನ ಕೂಡ ಲಭ್ಯವಿದ್ದು, ಮತ್ತೆ ಆಡುವ ಮೊದಲು ಆಟಗಾರರು ಅಲ್ಲಿ ತಮ್ಮ ಬಿಲ್ಲು - ಬಾಣದ ಕೌಶಲವನ್ನು ಅಭ್ಯಾಸ ಮಾಡಬಹುದು. ಜಿಯೋ ಬಳಕೆದಾರರಿಗೆ ಈ ಕೆಳಗಿನ ವಿಶೇಷ ಸೌಲಭ್ಯಗಳು ದೊರಕುತ್ತಿವೆ:

3ಡಿ ಅವತಾರ್ ವೈಶಿಷ್ಟ್ಯ
ಹೆಚ್ಚುವರಿ ಶಸ್ತ್ರಾಸ್ತ್ರಗಳು ಮತ್ತು ಪವರ್ಗಳನ್ನು ಅನ್ಲಾಕ್ ಮಾಡಲು ಗೇಮ್ಪ್ಲೇ ಟೋಕನ್ಗಳು
ಗೇಮ್ ಲೆವೆಲ್ಗಳು
ಈ ಸಂದರ್ಭದಲ್ಲಿ ಮಾತನಾಡಿದ ಜಿಯೋ ನಿರ್ದೇಶಕ ಆಕಾಶ್ ಅಂಬಾನಿ, "ಆಗ್ಮೆಂಟೆಡ್ ರಿಯಾಲಿಟಿಯನ್ನು ಅಂಗೀಕರಿಸಲು ಕ್ರಿಕಿ ಒಂದು ಇಡೀ ಪೀಳಿಗೆಯ ಭಾರತೀಯರನ್ನು ಪ್ರೇರೇಪಿಸಲಿದೆ. ಪ್ರಪಂಚದೆಲ್ಲೆಡೆಯ ಅತ್ಯುತ್ತಮ ಅನುಭವಗಳನ್ನು ಭಾರತಕ್ಕೆ ತರುವುದು ನಮ್ಮ ದೃಷ್ಟಿಕೋನವಾಗಿದೆ ಮತ್ತು ಯಾತ್ರಾದ ಪರಿಚಯವು ಆ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ.

ಆಗ್ಮೆಂಟೆಡ್ ರಿಯಾಲಿಟಿ ಗೇಮಿಂಗ್ ಬಳಕೆದಾರರನ್ನು ತನ್ನದೇ ಆದ ಜಗತ್ತಿನೊಳಕ್ಕೆ ಕರೆದೊಯ್ಯುತ್ತದೆ, ಮತ್ತು ಯಾತ್ರಾ ಮೂಲಕ ಆಗ್ಮೆಂಟೆಡ್ ರಿಯಾಲಿಟಿಯನ್ನು (AR) ಅನುಭವಿಸಲು ನಾವು ಜಿಯೋ ಮತ್ತು ಬೇರೆಲ್ಲ ಸೇವೆಗಳ ಪ್ರತಿಯೊಬ್ಬ ಬಳಕೆದಾರರನ್ನೂ ಆಹ್ವಾನಿಸುತ್ತೇವೆ." ಎಂದು ಹೇಳಿದ್ದಾರೆ. ಕ್ರಿಕಿ ಈಗ ಐಒಎಸ್ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇ ಸ್ಟೋರ್ಗಳಲ್ಲಿ ಉಚಿತವಾಗಿ ಲಭ್ಯವಿದೆ.
This News Article is a Copy of GIZBOT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am