ಬ್ರೇಕಿಂಗ್ ನ್ಯೂಸ್
04-12-20 04:59 pm Source: GIZBOT ಡಿಜಿಟಲ್ ಟೆಕ್
ವಾಟ್ಸಾಪ್ ವಿಶ್ವದಲ್ಲಿಯೇ ಅತಿ ಹೆಚ್ಚಿನ ಸಕ್ರಿಯ ಬಳಕೆದಾರರನ್ನು ಹೊಂದಿರುವ ಇನ್ಸಟಂಟ್ ಮೆಸೇಜಿಂಗ್ ಆಪ್ ಆಗಿದೆ. ಈಗಾಗಲೇ ತನ್ನ ಬಳಕೆದಾರರಿಗೆ ಹಲವು ಮಾದರಿಯ ಫೀಚರ್ಸ್ಗಳನ್ನ ಪರಿಚಯಿಸಿದೆ. ಅಲ್ಲದೆ ಕಾಲಕ್ಕೆ ಅನುಗುಣವಾಗಿ ಹೊಸ ಮಾದರಿಯ ಫೀಚರ್ಸ್ಗಳನ್ನ ಪರಿಚಯಿಸುತ್ತಾ ಬಂದಿದೆ. ಇನ್ನು ಬಳಕೆದಾರರ ಡೇಟಾ ಸುರಕ್ಷತೆಗಾಗಿ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಸದ್ಯ ಇದೀಗ ವಾಟ್ಸಾಪ್ ಹೊಸ ಸೇವಾ ನಿಯಮಗಳನ್ನು ಪರಿಚಯಿಸಲು ಮುಂದಾಗಿದ್ದು, ಈ ನಿಯಮಗಳನ್ನ ಪಾಲಿಸದಿದ್ದರೆ, ಬಳಕೆದಾರರು ವಾಟ್ಸಾಪ್ ಪ್ರವೇಶಿಸುವುದಕ್ಕೂ ಕಷ್ಟವಾಗಬಹುದು ಎನ್ನಲಾಗಿದೆ.
ಹೌದು, ವಾಟ್ಸಾಪ್ ಹೊಸ ಸೇವಾ ನಿಯಮ ಪರಿಚಯಿಸಲು ಮುಂದಾಗಿದ್ದು, ಇದನ್ನು ಪಾಲಿಸದಿದ್ದರೆ ನಿಮ್ಮ ವಾಟ್ಸಾಪ್ ಖಾತೆಗೆ ನಿಮಗೆ ಎಂಟ್ರಿ ಸಿಗುವುದು ಕೂಡ ಕಷ್ಟವಾಗಲಿದೆ. ನಿಮ್ಮ ವಾಟ್ಸಾಪ್ ಖಾತೆಯೆ ನಿರುಪಯುಕ್ತವಾಗಲಿದೆ. ಸದ್ಯ ವಾಟ್ಸಾಪ್ 2021ಕ್ಕೆ ತನ್ನ ಸೇವಾ ನಿಯಮಗಳನ್ನು ಅಪ್ಡೇಟ್ ಮಾಡಲಿದೆ ಎಂದು ವರದಿಯಾಗಿದೆ, ಅದು ಫೆಬ್ರವರಿ 8 ರಿಂದ ಜಾರಿಗೆ ಬರಲಿದೆ.

ಸದ್ಯ ವಾಟ್ಸಾಪ್ 2021ಕ್ಕೆ ಹೊಸ ನಿಯಮಗಳನ್ನು ಪರಿಸಯಿಲಿದ್ದು, ಇದು ಬಳಕೆದಾರರ ಗೌಪ್ಯತೆಯ ದೃಷ್ಟಿಯಿಂದ ಮಹತ್ವದಾಗಿದೆ ಎನ್ನಲಾಗಿದೆ. ಇನ್ನು ಬಳಕೆದಾರರು ಹೊಸ ಗೌಪ್ಯತೆ ನಿಯಮಗಳನ್ನು ಒಪ್ಪದಿದ್ದರೆ, ಅವರು ಮೆಸೇಜಿಂಗ್ ಅಪ್ಲಿಕೇಶನ್ಗೆ ಪ್ರವೇಶವನ್ನು ಕಳೆದುಕೊಳ್ಳಬಹುದು. ವಾಟ್ಸಾಪ್ ಬಳಕೆದಾರರು ಹೊಸ ನಿಯಮಗಳನ್ನು ಸ್ವೀಕರಿಸಬಹುದು ಅಥವಾ ಅವರ ಖಾತೆಗಳನ್ನು ‘ಅಳಿಸಬಹುದು' ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಎಲ್ಲಾ ಬಳಕೆದಾರರು ಒಪ್ಪಿಕೊಳ್ಳಬೇಕು ಅಥವಾ ಪ್ರವೇಶವನ್ನು ಕಳೆದುಕೊಳ್ಳಬೇಕು ಎಂದು ಫೇಸ್ಬುಕ್ ಒಡೆತನದ ವಾಟ್ಸಾಪ್ ಪ್ರತ್ಯೇಕವಾಗಿ ದೃಡಪಡಿಸಿದೆ.

ವಾಟ್ಸಾಪ್ ತನ್ನ ವರದಿಯಲ್ಲಿ, ನಿಯಮಗಳು ಮತ್ತು ಗೌಪ್ಯತೆ ನೀತಿಯನ್ನು ನವೀಕರಿಸಲಾಗುವುದು ಎಂದು ತೋರಿಸಿದ ಸ್ಕ್ರೀನ್ಶಾಟ್ಗಳನ್ನು WABetaInfo ಹಂಚಿಕೊಂಡಿದೆ. ಪ್ರಮುಖ ನವೀಕರಣಗಳು ವಾಟ್ಸಾಪ್ ಸೇವೆಯ ಬಗ್ಗೆ ಮತ್ತು ಬಳಕೆದಾರರ ಡೇಟಾವನ್ನು ಹೇಗೆ ಪ್ರಕ್ರಿಯೆಗೊಳಿಸುತ್ತವೆ ಎಂಬುದರ ಕುರಿತು ಹೆಚ್ಚಿನ ಮಾಹಿತಿಯನ್ನು ಒಳಗೊಂಡಿರುತ್ತದೆ ಎಂದು ಅದು ತೋರಿಸಿದೆ. ಚಾಟ್ಗಳನ್ನು ಸಂಗ್ರಹಿಸಲು ಮತ್ತು ನಿರ್ವಹಿಸಲು ವ್ಯವಹಾರಗಳು ಫೇಸ್ಬುಕ್ ಹೋಸ್ಟ್ ಮಾಡಿದ ಸೇವೆಗಳನ್ನು ಹೇಗೆ ಬಳಸಿಕೊಳ್ಳಬಹುದು ಎಂಬ ಮಾಹಿತಿಯನ್ನು ಸಹ ಇದು ಒಳಗೊಂಡಿರುತ್ತದೆ.

ಹೊಸ ನಿಯಮಗಳು ಫೆಬ್ರವರಿ 8, 2021 ರಿಂದ ಜಾರಿಗೆ ಬರಲಿವೆ ಎಂದು ಹೇಳಲಾಗಿದೆ. ಇನ್ನು ಈ disclaimer ಅನ್ನು ಬಳಕೆದಾರರಿಗೆ ಇನ್ನು ಹೆಚ್ಚಿನ ಉತ್ತಮ ಸೇವೆ ನೀಡಲಿದೆ ಎನ್ನಲಾಗಿದೆ. ನೀವು ಹೊಸ ಸೇವಾ ನಿಯಮವನ್ನು ಸ್ವೀಕರಿಸುವ ಅಗತ್ಯವಿದೆ, ಇಲ್ಲದೆ ಓದರೆ ವಾಟ್ಸಾಪ್ ಬಳಕೆಯನ್ನು ಮುಂದುವರಿಸಲು ಅಸಾಧ್ಯವಾಗಲಿದೆ. ಸದ್ಯ ಈ ಸೇವಾ ನಿಯಮಗಳು ಹೇಗಿರಲಿವೆ ಎನ್ನುವ ಹೆಚ್ಚಿನ ಮಾಹಿತಿ ಮುಂದಿನ ದಿನಗಳಲ್ಲಿ ತಿಳಿಯಲಿದೆ.
This News Article is a Copy of GIZBOT
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 06:28 pm
HK News Desk
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm