ಬ್ರೇಕಿಂಗ್ ನ್ಯೂಸ್
10-12-20 04:44 pm Source: GIZBOT Mutthuraju H M ಡಿಜಿಟಲ್ ಟೆಕ್
ಜನಪ್ರಿಯ ಸ್ಮಾರ್ಟ್ಫೋನ್ ತಯಾರಕ ಶಿಯೋಮಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್ಫೋನ್ಗಳ ಮೂಲಕ ಗುರುತಿಸಿಕೊಂಡಿದೆ. ಈಗಾಗಲೇ ತನ್ನ ರೆಡ್ಮಿ ಸರಣಿಯಲ್ಲಿ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರೆಡ್ಮಿ 9 ಪವರ್ ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡುವುದಕ್ಕೆ ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್ಫೋನ್ ಇದೇ ಡಿಸೆಂಬರ್ 17 ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ.
ಹೌದು, ಶಿಯೋಮಿ ತನ್ನ ರೆಡ್ಮಿ 9 ಪವರ್ ಸ್ಮಾರ್ಟ್ಫೋನ್ ಅನ್ನು ಡಿಸೆಂಬರ್ 15 ರಂದು ಭಾರತದಲ್ಲಿ ಪರಿಚಯಿಸುವುದಾಗಿ ಘೋಷಣೆ ಮಾಡಿದೆ. ಇನ್ನು ರೆಡ್ಮಿ 9 ಪವರ್ ಇತ್ತೀಚೆಗೆ ಚೀನಾದಲ್ಲಿ ಪರಿಚಯಿಸಲಾದ ರೆಡ್ಮಿ ನೋಟ್ 9 4G ಯ ಮರುಬ್ರಾಂಡೆಡ್ ಆವೃತ್ತಿಯಾಗಿದೆ ಎಂದು ಊಹಿಸಲಾಗಿದೆ. ಆದಾಗ್ಯೂ, ಭಾರತೀಯ ಗ್ರಾಹಕರ ಆದ್ಯತೆಗಳನ್ನು ಪೂರೈಸಲು ಸ್ಮಾರ್ಟ್ಫೋನ್ ಕೆಲವು ಬದಲಾವಣೆಗಳನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಡಿಸ್ಪ್ಲೇ ಹೇಗಿದೆ? ರೆಡ್ಮಿ 9 ಪವರ್ ಸ್ಮಾರ್ಟ್ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 83.4% ಸ್ಕ್ರೀನ್-ಟು-ಬಾಡಿ ಅನುಪಾತ ಹಾಗೂ 19.5:9 ರಚನೆಯ ಅನುಪಾತವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಹೊಂದಿರಲಿದೆ.
ಪ್ರೊಸೆಸರ್ ಯಾವುದು? ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM + 64GB ಮತ್ತು 4GB RAM + 128GB ಇಂಟರ್ ಸ್ಟೋರೇಜ್ ರೂಪಾಂತರ ಸೇರಿದಂತೆ ಎರಡು ರೂಪಾಂತರಗಳಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

ಕ್ಯಾಮೆರಾ ವಿಶೇಷತೆ ರೆಡ್ಮಿ 9 ಪವರ್ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.
ಬೆಲೆ ಮತ್ತು ಲಭ್ಯತೆ ರೆಡ್ಮಿ 9 ಪವರ್ ಸ್ಮಾರ್ಟ್ಫೋನ್ ಭಾರತದಲ್ಲಿ ಡಿಸೆಂಬರ್ 17 ರಂದು ಬಿಡುಗಡೆ ಆಗಲಿದೆ. ಇನ್ನು ಭಾರತದಲ್ಲಿ 10,000 ರೂಗಳ ಬೆಲೆ ವಿಭಾಗದ ಅಡಿಯಲ್ಲಿ ಇದು ಲಭ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
This News Article is a Copy of GIZBOT
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am