ಬ್ರೇಕಿಂಗ್ ನ್ಯೂಸ್
10-12-20 04:44 pm Source: GIZBOT Mutthuraju H M ಡಿಜಿಟಲ್ ಟೆಕ್
ಜನಪ್ರಿಯ ಸ್ಮಾರ್ಟ್ಫೋನ್ ತಯಾರಕ ಶಿಯೋಮಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್ಫೋನ್ಗಳ ಮೂಲಕ ಗುರುತಿಸಿಕೊಂಡಿದೆ. ಈಗಾಗಲೇ ತನ್ನ ರೆಡ್ಮಿ ಸರಣಿಯಲ್ಲಿ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ರೆಡ್ಮಿ 9 ಪವರ್ ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡುವುದಕ್ಕೆ ಸಿದ್ದತೆ ನಡೆಸಿದೆ. ಇನ್ನು ಈ ಸ್ಮಾರ್ಟ್ಫೋನ್ ಇದೇ ಡಿಸೆಂಬರ್ 17 ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ.
ಹೌದು, ಶಿಯೋಮಿ ತನ್ನ ರೆಡ್ಮಿ 9 ಪವರ್ ಸ್ಮಾರ್ಟ್ಫೋನ್ ಅನ್ನು ಡಿಸೆಂಬರ್ 15 ರಂದು ಭಾರತದಲ್ಲಿ ಪರಿಚಯಿಸುವುದಾಗಿ ಘೋಷಣೆ ಮಾಡಿದೆ. ಇನ್ನು ರೆಡ್ಮಿ 9 ಪವರ್ ಇತ್ತೀಚೆಗೆ ಚೀನಾದಲ್ಲಿ ಪರಿಚಯಿಸಲಾದ ರೆಡ್ಮಿ ನೋಟ್ 9 4G ಯ ಮರುಬ್ರಾಂಡೆಡ್ ಆವೃತ್ತಿಯಾಗಿದೆ ಎಂದು ಊಹಿಸಲಾಗಿದೆ. ಆದಾಗ್ಯೂ, ಭಾರತೀಯ ಗ್ರಾಹಕರ ಆದ್ಯತೆಗಳನ್ನು ಪೂರೈಸಲು ಸ್ಮಾರ್ಟ್ಫೋನ್ ಕೆಲವು ಬದಲಾವಣೆಗಳನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಡಿಸ್ಪ್ಲೇ ಹೇಗಿದೆ? ರೆಡ್ಮಿ 9 ಪವರ್ ಸ್ಮಾರ್ಟ್ಫೋನ್ 1,080x2,340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53-ಇಂಚಿನ ಫುಲ್ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 83.4% ಸ್ಕ್ರೀನ್-ಟು-ಬಾಡಿ ಅನುಪಾತ ಹಾಗೂ 19.5:9 ರಚನೆಯ ಅನುಪಾತವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಹೊಂದಿರಲಿದೆ.
ಪ್ರೊಸೆಸರ್ ಯಾವುದು? ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 4GB RAM + 64GB ಮತ್ತು 4GB RAM + 128GB ಇಂಟರ್ ಸ್ಟೋರೇಜ್ ರೂಪಾಂತರ ಸೇರಿದಂತೆ ಎರಡು ರೂಪಾಂತರಗಳಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

ಕ್ಯಾಮೆರಾ ವಿಶೇಷತೆ ರೆಡ್ಮಿ 9 ಪವರ್ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.
ಬೆಲೆ ಮತ್ತು ಲಭ್ಯತೆ ರೆಡ್ಮಿ 9 ಪವರ್ ಸ್ಮಾರ್ಟ್ಫೋನ್ ಭಾರತದಲ್ಲಿ ಡಿಸೆಂಬರ್ 17 ರಂದು ಬಿಡುಗಡೆ ಆಗಲಿದೆ. ಇನ್ನು ಭಾರತದಲ್ಲಿ 10,000 ರೂಗಳ ಬೆಲೆ ವಿಭಾಗದ ಅಡಿಯಲ್ಲಿ ಇದು ಲಭ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
This News Article is a Copy of GIZBOT
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
ಹೆಸರಿನಲ್ಲಿ ತಪ್ಪಿದೆ ಎಂದು ದಕ್ಷಿಣ ಕನ್ನಡ ಮಾಜಿ ಜಿಲ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm