ಬ್ರೇಕಿಂಗ್ ನ್ಯೂಸ್
30-11-24 09:52 pm HK News Desk ಡಿಜಿಟಲ್ ಟೆಕ್
ತಂತ್ರಜ್ಞಾನ ಕ್ಷೇತ್ರದಲ್ಲಿಯ ಹೊಸ ಹೊಸ ಆವಿಷ್ಕಾರಗಳೊಂದಿಗೆ, ಸೈಬರ್ ವಂಚನೆಯೂ ಸಹ ಅಷ್ಟೆ ಮಿತಿ ಮೀರುತ್ತಿದೆ. ಒಂದು ವಿಧಾನದ ಕಳ್ಳತನಕ್ಕೆ ಬ್ರೇಕ್ ಹಾಕುವಷ್ಟರಲ್ಲಿ ಮತ್ತೊಂದು ವಿಧಾನವನ್ನು ಈ ಸೈಬರ್ ವಂಚಕರು ಕಂಡುಕೊಳ್ಳುತ್ತಿದ್ದಾರೆ. ಇದು ಈಗ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಚ್ಚಾಗಿದ್ದು, ಸಾರ್ವಜನಿಕರ ಹಣಕ್ಕೆ ಕನ್ನ ಹಾಕುವ ಹಲವು ಮಾರ್ಗಗಳನ್ನು ಸೈಬರ್ ವಂಚಕರು ಕಂಡುಕೊಂಡಿದ್ದಾರೆ. ಆತಂಕಕಾರಿ ವಿಷಯವೆಂದರೆ ಕಳೆದ ಮೂರು ವರ್ಷಗಳ ಅವಧಿಯಲ್ಲಿಯೇ ಸುಮಾರು 10,300 ಕೋಟಿ ರೂ ಅನ್ನು ಸೈಬರ್ ಖದೀಮರು ಬ್ಯಾಂಕ್ ಖಾತೆಗೆ ಖನ್ನ ಹಾಕಿ ದೋಚಿದ್ದಾರೆ ಎಂದು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ವರದಿ ನೀಡಿದೆ.
ಜನರ ಬ್ಯಾಂಕ್ ಹಣ ಕದಿಯುವಲ್ಲಿ ಸೈಬರ್ ವಂಚಕರು ಈಗ ಹೆಚ್ಚಾಗಿ ಬಳಸುತ್ತಿರುವ ವಿಧಾನದಲ್ಲಿ - ಕೆವೈಸಿ ಅಪ್ಡೇಟ್ ಮಾಡುವುದಾಗಿ ಹೇಳಿ ನಕಲಿ ಬ್ಯಾಂಕಿಂಗ್ ಅಪ್ಲಿಕೇಶನ್ ಲಿಂಕ್ ಅನ್ನು ಮೆಸೇಜ್ ಕಳುಹಿಸಿ ಅದನ್ನು ಡೌನ್ಲೋಡ್ ಮಾಡಿಸಿ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುವುದು ಈಗ ಹೆಚ್ಚಾಗಿದೆ.
ಕೆನರಾ ಬ್ಯಾಂಕ್, ಐಸಿಐಸಿಐ ಸೇರಿ ದೇಶದ ಪ್ರತಿಷ್ಠಿತ ಬ್ಯಾಂಕ್ಗಳ ಹೆಸರಲ್ಲಿ ನಕಲಿ ಅಪ್ಲಿಕೇಶನ್ ಡೆವಲಪ್ ಮಾಡಿ, ಅದನ್ನು ಡೌನ್ಲೋಡ್ ಮಾಡಿಸಿ ಬ್ಯಾಂಕ್ ಖಾತೆಗೆ ಕನ್ನ ಹಾಕುವ ಹುನ್ನಾರ ಹೆಚ್ಚಾಗಿದೆ. ಆದ್ದರಿಂದ ಅನಾಮಧೇಯ ಹಾಗೂ ಅನುಮಾನಾಸ್ಪದ ಬ್ಯಾಂಕಿಂಗ್ ಅಪ್ಲಿಕೇಶನ್ಗಳನ್ನು ಯಾವುದೇ ಕಾರಣಕ್ಕೂ ಡೌನ್ಲೋಡ್, ಇನ್ಸ್ಟಾಲ್ ಮಾಡಿಕೊಳ್ಳಬಾರದು ಎಂದು ಬ್ಯಾಂಕ್ಗಳು ಹಾಗೂ ಸೈಬರ್ ಪೊಲೀಸರು ಸೂಚನೆ ನೀಡಿದ್ದಾರೆ.
ಬ್ಯಾಂಕ್ ಖಾತೆಗೆ ಕನ್ನ ಹಾಕಲು ಹೇಗೆಲ್ಲಾ ವಂಚನೆ ನಡೆಯುತ್ತದೆ?
ಪ್ರಮುಖ ಪ್ರಧಾನ ಬ್ಯಾಂಕ್ಗಳ ಲೋಗೋ ಬಳಸಿ ಬ್ಯಾಂಕಿಂಗ್ ಅಪ್ಲಿಕೇಶನ್ ಸೃಷ್ಟಿಸಲಾಗುತ್ತದೆ.
ಕಸ್ಟಮರ್ ಸರ್ವೀಸ್ ಪಾಯಿಂಟ್ ಎಂಬ ನಕಲಿ ಅಪ್ಲಿಕೇಶನ್ ಪ್ಯಾಕೇಜ್ಗಳನ್ನು ಸೃಷ್ಟಿಸಿಕೊಂಡು, ಅದನ್ನ ಡೌನ್ಲೋಡ್ ಮಾಡಿಸುವ ಪ್ರಯತ್ನ ಮಾಡುತ್ತಾರೆ.
ವಾಟ್ಸಾಪ್, ಟೆಲಿಗ್ರಾಂ, ಸಾಮಾಜಿಕ ಜಾಲತಾಣಗಳ ಬಳಕೆ ಮೂಲಕ ವಂಚನೆ ಸಾಧ್ಯ. ಅವುಗಳ ಮುಖಾಂತರ ನಕಲಿ ಎಪಿಕೆ ಫೈಲ್ ಅನ್ನು ಕಳುಹಿಸುತ್ತಾರೆ.
ನಿಮ್ಮ ಮೊಬೈಲ್ ನಲ್ಲಿ ಮೊದಲು ಆ ಅಪ್ಲಿಕೇಶನ್ ಇನ್ಸ್ಟಾಲ್ ಮಾಡಿಸುತ್ತಾರೆ. ಆಧಾರ್ ಕೆವೈಸಿ, ಪಾನ್ಕಾರ್ಡ್ ವಿವರ, ನಂಬರ್ ಅಪ್ಡೇಟ್ ಮಾಡಿಸುತ್ತಾರೆ. ನಂತರ ಮೊಬೈಲ್ನಲ್ಲಿ ಅಪ್ಲಿಕೇಶನ್ ಇನ್ಸ್ಟಾಲ್ ಆಗುತ್ತಿದ್ದಂತೆ ಖಾತೆ ವಿವರ ಪಡೆಯುತ್ತಾರೆ. ಆಮೇಲೆ ನೇರವಾಗಿ ಬ್ಯಾಂಕ್ ಖಾತೆಯಲ್ಲಿನ ನಿಮ್ಮ ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಳ್ಳುತ್ತಾರೆ.
ಬ್ಯಾಂಕ್ ಖಾತೆಯಲ್ಲಿ ಹಣ ಕಳವಾದರೆ ಏನು ಮಾಡಬೇಕು?
ಒಂದು ವೇಳೆ ಯಾರಾದರೂ ಈ ರೀತಿಯಲ್ಲಿ ಮೋಸ ಹೋದರೆ ಅಂದೇ ಸೈಬರ್ ಪೊರ್ಟಲ್ ಅಥವಾ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು.
#67# ಗೆ ಡಯಲ್ ಮಾಡಿ ಮೊಬೈಲ್ ಸಂಖ್ಯೆ ಸುರಕ್ಷಿತಗೊಳಿಸಿ. ಸೈಬರ್ ವಂಚನೆಗೆ ತುತ್ತಾದವರು ತಕ್ಷಣ ಕರೆ ಮಾಡಿ ದೂರು ಕೊಡಲು ನಂಬರ್ - 1930.
In today’s digital world, safeguarding your online banking security is more crucial than ever. Hackers constantly look for ways to exploit vulnerabilities, so it's essential to take proactive steps to protect your financial information. From creating strong, unique passwords to being vigilant about phishing scams, here are five key practices that can help you secure your online banking and keep your financial data safe from cyber threats.
26-03-25 09:42 pm
Bangalore Correspondent
Shivamogga DYSP, Krishnamurthy, Lokayukta ar...
26-03-25 07:58 pm
BJP MLA Yatnal: ರೆಬೆಲ್ ಶಾಸಕ ಬಸನಗೌಡ ಯತ್ನಾಳ್ ವಿ...
26-03-25 06:07 pm
Big Boss Kannada, Rajat, Vinay Gowda Arrest,...
26-03-25 12:35 pm
Dr Veerendra Heggade, Sameer MD, court order:...
26-03-25 11:47 am
25-03-25 04:06 pm
HK News Desk
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಗಣಿತ ನಗದು ಪತ್ತ...
21-03-25 04:46 pm
26-03-25 10:02 pm
Mangalore Correspondent
Mangalore, E Records, MLA Vedavyas Kamath: ಕಂ...
26-03-25 05:38 pm
ಮಾ.29ರಂದು ದ.ಕ. ಜಿಲ್ಲಾ ಮಟ್ಟದ ನಿವೃತ್ತ ಸರಕಾರಿ ನೌ...
26-03-25 04:23 pm
Sexual Harassment, POCSO, BJP, Mahesh Bhat, M...
26-03-25 11:16 am
UT Khader, Mangalore: ಕಠಿಣ ಕ್ರಮ ತೆಗೆದುಕೊಂಡರೆ...
24-03-25 03:56 pm
26-03-25 11:19 pm
Bangalore Correspondent
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm
Mangalore Bank Fraud Case, Police; ಬ್ಯಾಂಕ್ ದೋ...
25-03-25 10:09 pm