ಬ್ರೇಕಿಂಗ್ ನ್ಯೂಸ್
16-12-20 12:45 pm Source: GIZBOT ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಖಾಸಗಿ ಟೆಲಿಕಾಂಗಳಿಗೆ ಟಕ್ಕರ ನೀಡುವಂತಹ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಬಿಎಸ್ಎನ್ಎಲ್ ಪ್ರೀಪೇಯ್ಡ್ ಯೋಜನೆಗಳು ಅಧಿಕ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನಗಳ ಸೌಲಭ್ಯಗಳನ್ನು ಪಡೆದಿವೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಬಿಎಸ್ಎನ್ಎಲ್ ಇದೀಗ ಮತ್ತೊಂದು ನೂತನ ಪ್ರೀಪೇಯ್ಡ್ ಪ್ಲ್ಯಾನ್ ಪರಿಚಯಿದ್ದು, ಖಾಸಗಿ ಟೆಲಿಕಾಂಗಳು ಕಕ್ಕಾಬಿಕ್ಕಿ ಆಗಿವೆ.
ಹೌದು, ಬಿಎಸ್ಎನ್ಎಲ್ ಟೆಲಿಕಾಂ ಕ್ರಿಸ್ಮಸ್ ಅಂಗವಾಗಿ ನೂತನವಾಗಿ 199ರೂ.ಗಳ ಪ್ರೀಪೇಯ್ಡ್ ಪ್ಲ್ಯಾನ್ ಪರಿಚಯಿಸಿದೆ. ಬಿಎಸ್ಎನ್ಎಲ್ನ ಈ ಪ್ಲ್ಯಾನ್ ಆಕರ್ಷಕ ವ್ಯಾಲಿಡಿಟಿ ಅವಧಿ ಸೇರಿದಂತೆ ಪ್ರತಿದಿನ ಡೇಟಾ ಹಾಗೂ ವಾಯಿಸ್ ಕರೆಗಳ ಪ್ರಯೋಜನಗಳನ್ನು ಹೊಂದಿದೆ. ಅಗ್ಗದ ಬೆಲೆಯಲ್ಲಿ ಆಕರ್ಷಕ ಪ್ರಯೋಜನಗಳನ್ನು ಒಳಗೊಂಡಿರುವ ಈ ನೂತನ ಯೋಜನೆಯು ಡಿಸೆಂಬರ್ 24, 2020 ರಿಂದ ರೀಚಾರ್ಜ್ಗೆ ಲಭ್ಯವಾಗಲಿದೆ ಎಂದು ಟೆಲಿಕಾಂ ಹೇಳಿದೆ.

ಬಿಎಸ್ಎನ್ಎಲ್ 199ರೂ. ಪ್ಲ್ಯಾನ್
ಬಿಎಸ್ಎನ್ಎಲ್ ಈ ಹೊಸ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸಿಗಲಿವೆ ಹಾಗೂ ಯಾವುದೇ ನೆಟವರ್ಕ್ಗೆ ಅನಿಯಮಿತ (250 ನಿಮಿಷಗಳ) ವಾಯಿಸ್ ಕರೆಯ ಸೌಲಭ್ಯವು ಸಹ ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 30 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಹಾಗೆಯೇ ಬಿಎಸ್ಎನ್ಎಲ್ ವಾರ್ಷಿಕ ವ್ಯಾಲಿಡಿಟಿಯ ಯೋಜನೆಗಳನ್ನು ಹೊಂದಿದೆ.

ಬಿಎಸ್ಎನ್ಎಲ್ 2,399ರೂ. ಪ್ಲ್ಯಾನ್
ಬಿಎಸ್ಎನ್ಎಲ್ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್ಎನ್ಎಲ್ ಟ್ಯೂನ್ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

ಬಿಎಸ್ಎನ್ಎಲ್ 693ರೂ.ಪ್ಲ್ಯಾನ್
ಹಾಗೆಯೇ ಬಿಎಸ್ಎನ್ಎಲ್ 693ರೂ. ಡೇಟಾ ಎಸ್ಟಿವಿ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇದು ಡೇಟಾ ಪ್ರೀಪೇಯ್ಡ್ ಯೋಜನೆ ಆಗಿರುವುದರಿಂದ ಯಾವುದೇ ವಾಯಿಸ್ ಕರೆ ಹಾಗೂ ಎಸ್ಎಮ್ಎಸ್ ಸೌಲಭ್ಯಗಳು ದೊರೆಯುವುದಿಲ್ಲ.
This News Article is a Copy of GIZBOT
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
ಹೆಸರಿನಲ್ಲಿ ತಪ್ಪಿದೆ ಎಂದು ದಕ್ಷಿಣ ಕನ್ನಡ ಮಾಜಿ ಜಿಲ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm