ಬ್ರೇಕಿಂಗ್ ನ್ಯೂಸ್
16-12-20 12:45 pm Source: GIZBOT ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಖಾಸಗಿ ಟೆಲಿಕಾಂಗಳಿಗೆ ಟಕ್ಕರ ನೀಡುವಂತಹ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಬಿಎಸ್ಎನ್ಎಲ್ ಪ್ರೀಪೇಯ್ಡ್ ಯೋಜನೆಗಳು ಅಧಿಕ ವ್ಯಾಲಿಡಿಟಿ ಹಾಗೂ ಡೇಟಾ ಪ್ರಯೋಜನಗಳ ಸೌಲಭ್ಯಗಳನ್ನು ಪಡೆದಿವೆ. ಅದೇ ಹಾದಿಯಲ್ಲಿ ಮುನ್ನಡೆದಿರುವ ಬಿಎಸ್ಎನ್ಎಲ್ ಇದೀಗ ಮತ್ತೊಂದು ನೂತನ ಪ್ರೀಪೇಯ್ಡ್ ಪ್ಲ್ಯಾನ್ ಪರಿಚಯಿದ್ದು, ಖಾಸಗಿ ಟೆಲಿಕಾಂಗಳು ಕಕ್ಕಾಬಿಕ್ಕಿ ಆಗಿವೆ.
ಹೌದು, ಬಿಎಸ್ಎನ್ಎಲ್ ಟೆಲಿಕಾಂ ಕ್ರಿಸ್ಮಸ್ ಅಂಗವಾಗಿ ನೂತನವಾಗಿ 199ರೂ.ಗಳ ಪ್ರೀಪೇಯ್ಡ್ ಪ್ಲ್ಯಾನ್ ಪರಿಚಯಿಸಿದೆ. ಬಿಎಸ್ಎನ್ಎಲ್ನ ಈ ಪ್ಲ್ಯಾನ್ ಆಕರ್ಷಕ ವ್ಯಾಲಿಡಿಟಿ ಅವಧಿ ಸೇರಿದಂತೆ ಪ್ರತಿದಿನ ಡೇಟಾ ಹಾಗೂ ವಾಯಿಸ್ ಕರೆಗಳ ಪ್ರಯೋಜನಗಳನ್ನು ಹೊಂದಿದೆ. ಅಗ್ಗದ ಬೆಲೆಯಲ್ಲಿ ಆಕರ್ಷಕ ಪ್ರಯೋಜನಗಳನ್ನು ಒಳಗೊಂಡಿರುವ ಈ ನೂತನ ಯೋಜನೆಯು ಡಿಸೆಂಬರ್ 24, 2020 ರಿಂದ ರೀಚಾರ್ಜ್ಗೆ ಲಭ್ಯವಾಗಲಿದೆ ಎಂದು ಟೆಲಿಕಾಂ ಹೇಳಿದೆ.

ಬಿಎಸ್ಎನ್ಎಲ್ 199ರೂ. ಪ್ಲ್ಯಾನ್
ಬಿಎಸ್ಎನ್ಎಲ್ ಈ ಹೊಸ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ ಸಿಗಲಿವೆ ಹಾಗೂ ಯಾವುದೇ ನೆಟವರ್ಕ್ಗೆ ಅನಿಯಮಿತ (250 ನಿಮಿಷಗಳ) ವಾಯಿಸ್ ಕರೆಯ ಸೌಲಭ್ಯವು ಸಹ ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 30 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಹಾಗೆಯೇ ಬಿಎಸ್ಎನ್ಎಲ್ ವಾರ್ಷಿಕ ವ್ಯಾಲಿಡಿಟಿಯ ಯೋಜನೆಗಳನ್ನು ಹೊಂದಿದೆ.

ಬಿಎಸ್ಎನ್ಎಲ್ 2,399ರೂ. ಪ್ಲ್ಯಾನ್
ಬಿಎಸ್ಎನ್ಎಲ್ನ ಈ ಪ್ಲ್ಯಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್ಎಮ್ಎಸ್ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್ಎನ್ಎಲ್ ಟ್ಯೂನ್ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಪ್ಲ್ಯಾನ್ ಉತ್ತಮ ಆಯ್ಕೆ ಆಗಿದೆ.

ಬಿಎಸ್ಎನ್ಎಲ್ 693ರೂ.ಪ್ಲ್ಯಾನ್
ಹಾಗೆಯೇ ಬಿಎಸ್ಎನ್ಎಲ್ 693ರೂ. ಡೇಟಾ ಎಸ್ಟಿವಿ ಯೋಜನೆಯು ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇದು ಡೇಟಾ ಪ್ರೀಪೇಯ್ಡ್ ಯೋಜನೆ ಆಗಿರುವುದರಿಂದ ಯಾವುದೇ ವಾಯಿಸ್ ಕರೆ ಹಾಗೂ ಎಸ್ಎಮ್ಎಸ್ ಸೌಲಭ್ಯಗಳು ದೊರೆಯುವುದಿಲ್ಲ.
This News Article is a Copy of GIZBOT
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 03:14 pm
HK News Staffer
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm