ಬ್ರೇಕಿಂಗ್ ನ್ಯೂಸ್
17-12-20 03:52 pm Source: GIZBOT ಡಿಜಿಟಲ್ ಟೆಕ್
ಪ್ರಸ್ತುತ ದೇಶದಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಹೆಚ್ಚು ಮುನ್ನಲೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಹಲವು UPI ಆಧಾರಿತ ಪೇಮೆಂಟ್ ಆಪ್ಗಳು ಬಳಕೆಯಲ್ಲಿವೆ. ಈ ಸಾಲಿಗಿಗ ಭಾರತೀಯ ಅಂಚೆ ಇಲಾಖೆಯೂ ಸೇರ್ಪಡೆ ಆಗಿದ್ದು, ಅಂಚೆ ಇಲಾಖೆ ಹೊಸದಾಗಿ ''ಡಾಕ್ಪೇ'' ಆಪ್ ಅನ್ನು ಪರಿಚಯಿಸಿದೆ. ಈ ಸೇವೆಯಿಂದ ಹಣವನ್ನು ಕಳುಹಿಸುವುದು, ಕ್ಯೂಆರ್ ಕೋಡ್ಗಳನ್ನು ಸ್ಕ್ಯಾನ್ ಮಾಡುವುದು ಮತ್ತು ವ್ಯಾಪಾರಿಗಳಿಗೆ ಡಿಜಿಟಲ್ ರೂಪದಲ್ಲಿ ಹಣ ಪಾವತಿಗಳನ್ನು ಮಾಡುವಂತಹ ಸೇವೆಗಳನ್ನು ಸುಗಮಗೊಳಿಸಲು ಸಾಧ್ಯವಾಗುತ್ತದೆ.
ಹೌದು, ದೇಶದಲ್ಲಿ ಡಿಜಿಟಲ್ ಪೇಮೆಂಟ್ ಉತ್ತೇಜಿಸುವ ನಿಟ್ಟಿನಲ್ಲಿ ಅಂಚೆ ಇಲಾಖೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಈ ನೂತನ ಆಪ್ ಅನಾವರಣ ಮಾಡಿವೆ. ಇನ್ನು ಈ ಆಪ್ನಲ್ಲಿ ಬಳಕೆದಾರರಿಗೆ ಹಣ ವರ್ಗಾವಣೆ, QR ಕೋಡ್ ಸ್ಕ್ಯಾನ್, ಬಿಲ್ ಪಾವತಿ, ಹಣ ಪಾವತಿ, ವರ್ಚುವಲ್ ಡೆಬಿಟ್ ಕಾರ್ಡ್, UPI ಪೇಮೆಂಟ್, ಬ್ಯಾಂಕ್ ಸೇವೆಗಳಂತಹ ಸೇವೆಗಳು ಲಭ್ಯವಾಗುತ್ತವೆ.

ಆಂಡ್ರಾಯ್ಡ್ನಲ್ಲಿ ಡಾಕ್ಪೇ ಅಪ್ಲಿಕೇಶನ್ ಡೌನ್ಲೋಡ್ ಮಾಡುವುದು ಹೇಗೆ?
* ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಗೂಗಲ್ ಪ್ಲೇ ಸ್ಟೋರ್ ತೆರೆಯಿರಿ.
* ಹುಡುಕಾಟ ಪೆಟ್ಟಿಗೆಯನ್ನು ಬಳಸಿಕೊಂಡು 'ಡಾಕ್ಪೇ'-'DakPay' ಕೀ ಸರ್ಚ್ ಹುಡುಕಿ.
* DakPay by IPPB ಹೆಸರಿನ ಅಪ್ಲಿಕೇಶನ್ನಲ್ಲಿ ಟ್ಯಾಪ್ ಮಾಡಿ ಮತ್ತು ಇನ್ಸ್ಟಾಲ್ ಬಟನ್ ಒತ್ತಿರಿ.
* ಆಪ್ ಇನ್ಸ್ಟಾಲ್ ಆದ ನಂತರ, ಅಪ್ಲಿಕೇಶನ್ ತೆರೆಯಿರಿ. * ಆನಂತರ NEXT ಐಕಾನ್ ಮೇಲೆ ಟ್ಯಾಪ್ ಮಾಡಿ.
* ನೀವು ಡಾಕ್ಪೇ ಜೊತೆ ಲಿಂಕ್ ಮಾಡಲು ಬಯಸುವ ಮೊಬೈಲ್ ಸಂಖ್ಯೆಯನ್ನು ಆಯ್ಕೆ ಮಾಡಿ/ನಮೂದಿಸಿ.
* ಹೆಸರು, ಇಮೇಲ್ ಐಡಿ, ಹುಟ್ಟಿದ ದಿನಾಂಕ ಮತ್ತು ಇತರೆ ವಿವರಗಳನ್ನು ನಮೂದಿಸುವ ಮೂಲಕ ಪ್ರೊಫೈಲ್ ರಚಿಸಿ.

ಆಂಡ್ರಾಯ್ಡ್ನಲ್ಲಿ ಲಭ್ಯ
ಅಂಚೆ ಇಲಾಖೆಯ ನೂತನ ಡಾಕ್ಪೇ ಪೇಮೆಂಟ್ ಅಪ್ಲಿಕೇಶನ್ ಸದ್ಯ ಗೂಗಲ್ ಪ್ಲೇ ಸ್ಟೋರ್ ಮೂಲಕ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಅಪ್ಲಿಕೇಶನ್ ಲಭ್ಯವಿದೆ. ಇನ್ನು ಡಾಕ್ಪೇ ಅಪ್ಲಿಕೇಶನ್ ಶೀಘ್ರದಲ್ಲೇ ಆಪಲ್ ಆಪ್ ಸ್ಟೋರ್ ಮೂಲಕ ಐಓಎಸ್ ಬಳಕೆದಾರರಿಗೂ ಲಭ್ಯವಾಗಲಿದ ಎನ್ನಲಾಗಿದೆ.
This News Article is a Copy of GIZBOT
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm