ಬ್ರೇಕಿಂಗ್ ನ್ಯೂಸ್
21-12-20 03:08 pm Source: GIZBOT Mutthuraju H M ಡಿಜಿಟಲ್ ಟೆಕ್
ಬೆಂಗಳೂರು, ಡಿ.21: ಇಂದು ಖಗೋಳದಲ್ಲಿ ವಿಸ್ಮಯವೊಂದು ಜರುಗಲಿದೆ. ಸೌರವ್ಯೂಹದ ಎರಡ್ಡು ದೊಡ್ಡ ಗ್ರಹಗಳ ಸಮಾಗಮಕ್ಕೆ ಈ ದಿನ ಸಾಕ್ಷಿಯಾಗಲಿದೆ. ಎರಡು ದೊಡ್ಡ ಗ್ರಹಗಳು ಹತ್ತಿರ ಹತ್ತಿರ ಸಮೀಪಿಸುತ್ತಿದ್ದಾರೆ ಎನ್ನುವ ಸುದ್ದಿ ಇಡೀ ಜಗತ್ತನ್ನೇ ಕುತೂಹಲಕ್ಕೆ ದೂಡಿದೆ. ಇದೇ ಕಾರಣಕ್ಕೆ ಸರ್ಚ್ ಇಂಜಿನ್ ದೈತ್ಯ ಕೂಡ ಈ ದಿನ ತನ್ನ ಮುಖಪುಟದ ಡೂಡಲ್ ನಲ್ಲಿ ಉತ್ತರ ಗೋಳಾರ್ಧದಲ್ಲಿ ಚಳಿಗಾಲದ ಅಯನ ಸಂಕ್ರಾಂತಿಯನ್ನು ಪ್ರದರ್ಶಿಸಿದೆ.

ಹೌದು, ಸೌರವ್ಯೂಹದ ದೊಡ್ಡ ಗ್ರಹಗಳಾದ ಗುರು ಮತ್ತು ಶನಿ ಸಮೀಪಕ್ಕೆ ಬರಲಿದ್ದಾರೆ. ಇದು 2020 ರ ಮತ್ತೊಂದು ಅಚ್ಚರಿ ಎಂದೇ ಹೇಳಬಹುದಾಗಿದೆ. ಡಿಸೆಂಬರ್ 21 ಅಂದರೆ ಈ ದಿನ ಸುದೀರ್ಘ ರಾತ್ರಿಯಲ್ಲಿ, "ದೊಡ್ಡ ಸಂಯೋಗ" ಎಂದು ಕರೆಯಲ್ಪಡುವ ನಂಬಲಾಗದ ಖಗೋಳ ಚಮತ್ಕಾರ ನಡೆಯಲಿದೆ. ರಾತ್ರಿಯ ಆಕಾಶದಲ್ಲಿ ನಮ್ಮ ಸೌರವ್ಯೂಹದ ಗ್ರಹಗಳಾದ ಶನಿ ಮತ್ತು ಗುರುಗಳ ದೃಶ್ಯ ಅತಿಕ್ರಮಣವೇ ದೊಡ್ಡ ಸಂಯೋಗವಾಗಿದೆ.
ಮೂಲತಃ, ಶನಿ ಮತ್ತು ಗುರುಗಳು ಪರಸ್ಪರ 0.1 ಡಿಗ್ರಿ ಒಳಗೆ ಇರುತ್ತವೆ. ಶನಿ ಮತ್ತು ಗುರು ಗ್ರಹಗಳು ಪ್ರತಿ 20 ವರ್ಷಗಳಿಗೆ ಒಮ್ಮೆ ಹೀಗೆ ಪರಸ್ಪರ ಹಾದುಹೋಗಲಿವೆ. ಆದರೆ, ಈ ಬಾರಿ ಈ ಎರಡೂ ಗ್ರಹಗಳಿಗೆ ಅತ್ಯಂತ ಹತ್ತಿರದಲ್ಲಿ ಭೂಮಿಯೂ ಹಾದುಹೋಗಲಿದೆ. ಸದ್ಯ ಗುರು ಮತ್ತು ಶನಿಗ್ರಹಗಳು 400 ವರ್ಷಗಳ ನಂತರ ಇದೇ ಮೊದಲ ಬಾರಿ ಅತ್ಯಂತ ಸಮೀಪಕ್ಕೆ ಬರಲಿವೆ. ಇದನ್ನು ಖಗೋಳ ವಿಜ್ಞಾನಿಗಳು ‘ಮಹಾ ಸಂಯೋಗ' ಎಂದು ಹೆಸರಿಸಲಾಗಿದೆ. ಇಂತಹ ವಿದ್ಯಮಾನ ಮತ್ತೇ 60 ವರ್ಷಗಳ ನಂತರ ಸಂಭವಿಸಲಿದೆ ಎಂದು ‘ನಾಸಾ' ಸಂಸ್ಥೆ ಹೇಳಿದೆ.

ಇನ್ನು ಈ ಮಹಾ ಸಂಯೋಗಕ್ಕೆ ಸಾಕ್ಷಿಯಾಗಿ ಡಿಸೆಂಬರ್ 13ರಿಂದಲೇ ಖಗೋಳದ ಎರಡು ದೊಡ್ಡ ಗ್ರಹಗಳಾದ ಗುರು ಮತ್ತು ಶನಿ ಹತ್ತಿ ಹತ್ತಿರ ಬರುತ್ತಿವೆ. ಪ್ರತಿದಿನ ಇವುಗಳ ನಡುವಣ ಅಂತರ ಕಡಿಮೆಯಾಗಲಿದೆ. ಆದರೆ ಇಂದು ಈ ಎರಡು ಗ್ರಹಗಳು ಅತ್ಯಂತ ಸಮೀಪಕ್ಕೆ ಬರಲಿವೆ. ಈ ಮಹಾ ಸಂಯೋಗದಲ್ಲಿ ಪ್ರಾರಂಭದಿಂದ ಶನಿಗ್ರಹವು ಮೇಲ್ಭಾಗದಲ್ಲಿ, ಗುರು ಗ್ರಹವು ಕೆಳಭಾಗದಲ್ಲಿ ಗೋಚರಿಸಲಿದೆ. ಇದನ್ನು ಬರಿ ಗಣ್ಣಿನಿಂದಲೇ ನೋಡಬಹುದಾಗಿದ್ದು, ಆಕಾಶದಲ್ಲಿ ಸುಲಭವಾಗಿ ಗೋಚರಿಸಲಿದೆ. ಆದರೆ ಸೋಮವಾರವಾದ ಇಂದು ರಾತ್ರಿಯಿಂದ ಗುರು ಗ್ರಹವು ಮೇಲ್ಭಾಗದಲ್ಲಿ ಮತ್ತು ಶನಿಗ್ರಹವು ಕೆಳಭಾಗದಲ್ಲಿ ಗೋಚರಿಸಲಿದೆ. ಇನ್ನು ಗೂಗಲ್ ಕೂಡ ತನ್ನ ಡೂಡಲ್ನಲ್ಲಿ, ಶನಿ ಮತ್ತು ಗುರುಗಳ ಮಹಾ ಸಂಯೋಗದ ಗುರುತಾಗಿ ತನ್ನ ಡೂಡಲ್ ಪ್ರದರ್ಶಿಸಿದೆ.
This News Article is a Copy of GIZBOT
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm