ಬ್ರೇಕಿಂಗ್ ನ್ಯೂಸ್
21-12-20 03:08 pm Source: GIZBOT Mutthuraju H M ಡಿಜಿಟಲ್ ಟೆಕ್
ಬೆಂಗಳೂರು, ಡಿ.21: ಇಂದು ಖಗೋಳದಲ್ಲಿ ವಿಸ್ಮಯವೊಂದು ಜರುಗಲಿದೆ. ಸೌರವ್ಯೂಹದ ಎರಡ್ಡು ದೊಡ್ಡ ಗ್ರಹಗಳ ಸಮಾಗಮಕ್ಕೆ ಈ ದಿನ ಸಾಕ್ಷಿಯಾಗಲಿದೆ. ಎರಡು ದೊಡ್ಡ ಗ್ರಹಗಳು ಹತ್ತಿರ ಹತ್ತಿರ ಸಮೀಪಿಸುತ್ತಿದ್ದಾರೆ ಎನ್ನುವ ಸುದ್ದಿ ಇಡೀ ಜಗತ್ತನ್ನೇ ಕುತೂಹಲಕ್ಕೆ ದೂಡಿದೆ. ಇದೇ ಕಾರಣಕ್ಕೆ ಸರ್ಚ್ ಇಂಜಿನ್ ದೈತ್ಯ ಕೂಡ ಈ ದಿನ ತನ್ನ ಮುಖಪುಟದ ಡೂಡಲ್ ನಲ್ಲಿ ಉತ್ತರ ಗೋಳಾರ್ಧದಲ್ಲಿ ಚಳಿಗಾಲದ ಅಯನ ಸಂಕ್ರಾಂತಿಯನ್ನು ಪ್ರದರ್ಶಿಸಿದೆ.
ಹೌದು, ಸೌರವ್ಯೂಹದ ದೊಡ್ಡ ಗ್ರಹಗಳಾದ ಗುರು ಮತ್ತು ಶನಿ ಸಮೀಪಕ್ಕೆ ಬರಲಿದ್ದಾರೆ. ಇದು 2020 ರ ಮತ್ತೊಂದು ಅಚ್ಚರಿ ಎಂದೇ ಹೇಳಬಹುದಾಗಿದೆ. ಡಿಸೆಂಬರ್ 21 ಅಂದರೆ ಈ ದಿನ ಸುದೀರ್ಘ ರಾತ್ರಿಯಲ್ಲಿ, "ದೊಡ್ಡ ಸಂಯೋಗ" ಎಂದು ಕರೆಯಲ್ಪಡುವ ನಂಬಲಾಗದ ಖಗೋಳ ಚಮತ್ಕಾರ ನಡೆಯಲಿದೆ. ರಾತ್ರಿಯ ಆಕಾಶದಲ್ಲಿ ನಮ್ಮ ಸೌರವ್ಯೂಹದ ಗ್ರಹಗಳಾದ ಶನಿ ಮತ್ತು ಗುರುಗಳ ದೃಶ್ಯ ಅತಿಕ್ರಮಣವೇ ದೊಡ್ಡ ಸಂಯೋಗವಾಗಿದೆ.
ಮೂಲತಃ, ಶನಿ ಮತ್ತು ಗುರುಗಳು ಪರಸ್ಪರ 0.1 ಡಿಗ್ರಿ ಒಳಗೆ ಇರುತ್ತವೆ. ಶನಿ ಮತ್ತು ಗುರು ಗ್ರಹಗಳು ಪ್ರತಿ 20 ವರ್ಷಗಳಿಗೆ ಒಮ್ಮೆ ಹೀಗೆ ಪರಸ್ಪರ ಹಾದುಹೋಗಲಿವೆ. ಆದರೆ, ಈ ಬಾರಿ ಈ ಎರಡೂ ಗ್ರಹಗಳಿಗೆ ಅತ್ಯಂತ ಹತ್ತಿರದಲ್ಲಿ ಭೂಮಿಯೂ ಹಾದುಹೋಗಲಿದೆ. ಸದ್ಯ ಗುರು ಮತ್ತು ಶನಿಗ್ರಹಗಳು 400 ವರ್ಷಗಳ ನಂತರ ಇದೇ ಮೊದಲ ಬಾರಿ ಅತ್ಯಂತ ಸಮೀಪಕ್ಕೆ ಬರಲಿವೆ. ಇದನ್ನು ಖಗೋಳ ವಿಜ್ಞಾನಿಗಳು ‘ಮಹಾ ಸಂಯೋಗ' ಎಂದು ಹೆಸರಿಸಲಾಗಿದೆ. ಇಂತಹ ವಿದ್ಯಮಾನ ಮತ್ತೇ 60 ವರ್ಷಗಳ ನಂತರ ಸಂಭವಿಸಲಿದೆ ಎಂದು ‘ನಾಸಾ' ಸಂಸ್ಥೆ ಹೇಳಿದೆ.
ಇನ್ನು ಈ ಮಹಾ ಸಂಯೋಗಕ್ಕೆ ಸಾಕ್ಷಿಯಾಗಿ ಡಿಸೆಂಬರ್ 13ರಿಂದಲೇ ಖಗೋಳದ ಎರಡು ದೊಡ್ಡ ಗ್ರಹಗಳಾದ ಗುರು ಮತ್ತು ಶನಿ ಹತ್ತಿ ಹತ್ತಿರ ಬರುತ್ತಿವೆ. ಪ್ರತಿದಿನ ಇವುಗಳ ನಡುವಣ ಅಂತರ ಕಡಿಮೆಯಾಗಲಿದೆ. ಆದರೆ ಇಂದು ಈ ಎರಡು ಗ್ರಹಗಳು ಅತ್ಯಂತ ಸಮೀಪಕ್ಕೆ ಬರಲಿವೆ. ಈ ಮಹಾ ಸಂಯೋಗದಲ್ಲಿ ಪ್ರಾರಂಭದಿಂದ ಶನಿಗ್ರಹವು ಮೇಲ್ಭಾಗದಲ್ಲಿ, ಗುರು ಗ್ರಹವು ಕೆಳಭಾಗದಲ್ಲಿ ಗೋಚರಿಸಲಿದೆ. ಇದನ್ನು ಬರಿ ಗಣ್ಣಿನಿಂದಲೇ ನೋಡಬಹುದಾಗಿದ್ದು, ಆಕಾಶದಲ್ಲಿ ಸುಲಭವಾಗಿ ಗೋಚರಿಸಲಿದೆ. ಆದರೆ ಸೋಮವಾರವಾದ ಇಂದು ರಾತ್ರಿಯಿಂದ ಗುರು ಗ್ರಹವು ಮೇಲ್ಭಾಗದಲ್ಲಿ ಮತ್ತು ಶನಿಗ್ರಹವು ಕೆಳಭಾಗದಲ್ಲಿ ಗೋಚರಿಸಲಿದೆ. ಇನ್ನು ಗೂಗಲ್ ಕೂಡ ತನ್ನ ಡೂಡಲ್ನಲ್ಲಿ, ಶನಿ ಮತ್ತು ಗುರುಗಳ ಮಹಾ ಸಂಯೋಗದ ಗುರುತಾಗಿ ತನ್ನ ಡೂಡಲ್ ಪ್ರದರ್ಶಿಸಿದೆ.
This News Article is a Copy of GIZBOT
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm