ಬ್ರೇಕಿಂಗ್ ನ್ಯೂಸ್
26-12-20 05:45 pm Source: GIZBOT ಡಿಜಿಟಲ್ ಟೆಕ್
ನೀವು ಜಿಯೋ ಕಾಲರ್ ಟ್ಯೂನ್ ಸೆಟ್ ಮಾಡ ಬಯಸಿದರೇ, ಕಾಲರ್ ಟ್ಯೂನ್ ಸೆಟ್ ಮಾಡಲು ನಾಲ್ಕು ಮಾರ್ಗಗಳಿವೆ. ರಿಲಯನ್ಸ್ ಜಿಯೋ ಬಳಕೆದಾರರು ಮೈಜಿಯೊ ಅಪ್ಲಿಕೇಶನ್, IVR ಅಥವಾ SMS ಬಳಸಿ ಕಾಲರ್ ಟ್ಯೂನ್ ಹೊಂದಿಸಬಹುದು. ಹಾಗೆಯೇ ಮತ್ತೊಬ್ಬ ಜಿಯೋ ಗ್ರಾಹಕರಿಂದ ಜಿಯೋ ಟ್ಯೂನ್ ಅನ್ನು ನಕಲಿಸಲು ಸಹ ಟೆಲಿಕಾಂ ಅನುಮತಿಸುತ್ತದೆ. ಒಂದು ವೇಳೆ ನೀವು ಮೈಜಿಯೊ ಅಪ್ಲಿಕೇಶನ್ನಲ್ಲಿ ನಿರ್ದಿಷ್ಟ ಹಾಡನ್ನು ಸರ್ಚ್ ಮಾಡಲು ಸಾಧ್ಯವಾಗದೆ ಇದ್ದಲ್ಲಿ, ನಂತರ ನೀವು ಜಿಯೋಸಾವನ್ ಅಪ್ಲಿಕೇಶನ್ ಬಳಸಿ ಕಾಲರ್ ಟ್ಯೂನ್ ಹೊಂದಿಸಲು ಪ್ರಯತ್ನಿಸಬಹುದು. ಹಾಗೆಯೇ ಕಾಲರ್ ಟ್ಯೂನ್ ಸೇವೆ ನಿಲ್ಲಿಸಲು ಅವಕಾಶ ನೀಡಲಾಗಿದೆ.
ಹೌದು, ರಿಲಾಯನ್ಸ್ ಜಿಯೋ ಕಂಪನಿಯು ತನ್ನ ಜಿಯೋ ಟ್ಯೂನ್ಸ್ ಲೈಬ್ರರಿಯಲ್ಲಿ 4 ಲಕ್ಷ ಜೊತೆಗೆ ಹಾಡುಗಳ ಸಂಗ್ರಹವನ್ನು ಹೊಂದಿದೆ. ಇದರಿಂದ ನಿಮ್ಮ ಜಿಯೋ ಟ್ಯೂನ್ ಅನ್ನು ನೀವು ಆಯ್ಕೆ ಮಾಡಬಹುದು. ಹಾಗೆಯೇ ಹೆಲೋ ಟ್ಯೂನ್ ಸೆಟ್ ಮಾಡಿದ ನಂತರ ಈ ಸೇವೆ ಬೇಡವಾದಲ್ಲಿ ತೆಗೆದು ಹಾಕಬಹುದು/ ಸೇವೆಯನ್ನು ನಿಲ್ಲಿಸಬಹುದಾಗಿದೆ. ಹಾಗಾದರೇ ಜಿಯೋದ ಹೆಲೋ/ ಕಾಲರ್ ಟ್ಯೂನ್ ಅನ್ನು ಹೇಗೆ ನಿಲ್ಲಿಸುವುದು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ.

ಜಿಯೋ ಕಾಲರ್ ಟ್ಯೂನ್ ಸೇವೆಯನ್ನು ಸ್ಥಗಿತ ಮಾಡಲು ಮೂರು ಆಯ್ಕೆಗಳು ಇವೆ. ಅವುಗಳು ಕ್ರಮವಾಗಿ ಎಸ್ಎಮ್ಎಸ್ ಮೂಲಕ, ಮೈ ಜಿಯೋ ಆಪ್ ಮೂಲಕ ಹಾಗೂ IVR ಮೂಲಕ. ಬಳಕೆದಾರರು ಈ ಮೂರು ಆಯ್ಕೆಗಳಲ್ಲಿ ಒಂದು ಅನುಕೂಲಕರ ವಿಧಾನದ ಮೂಲಕ ಕಾಲರ್ ಟ್ಯೂನ್ ಸೇವೆ ನಿಲ್ಲಿಸಬಹುದಾಗಿದೆ.

SMS ವಿಧಾನದ ಮೂಲಕ
*ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಮೆಸೇಜ್ ಆಪ್ ತೆರೆಯಿರಿ. *ಮೆಸೇಜ್ನಲ್ಲಿ ಸ್ಟಾಪ್ ಎಂದು ಟೈಪ್ ಮಾಡಿ 56789 ಗೆ ಕಳುಹಿಸಿ.
*ನಿಷ್ಕ್ರಿಯಗೊಳಿಸುವಿಕೆಯನ್ನು ದೃಢೀಕರಿಸಲು 1 ಎಂದು ಪ್ರತ್ಯುತ್ತರಿಸಿ.
*ಇದಾದ ನಂತರ ಜಿಯೋ ಟ್ಯೂನ್ಸ್ ಸೇವೆ ಸ್ಥಗಿತವಾಗುತ್ತದೆ. ಮತ್ತು ನಿಷ್ಕ್ರಿಯದ ಬಗ್ಗೆ ದೃಢೀಕೃತ SMSನ್ನು ಬಳಕೆದಾರರು ಸ್ವೀಕರಿಸುತ್ತಾರೆ.

ಮೈ ಜಿಯೋ ಆಪ್ ವಿಧಾನದ ಮೂಲಕ
*ಮೈ ಜಿಯೋ ಆಪ್ ತೆರೆಯಿರಿ.
*ಮೆನುವಿನಲ್ಲಿ 'ಜಿಯೋ ಟ್ಯೂನ್ಸ್' ಆಯ್ಕೆಯನ್ನು ಕ್ಲಿಕ್ ಮಾಡಿ.
*'ಮೈ ಸಬ್ಸ್ಕ್ರೈಬರ್ ಪುಟ'ಕ್ಕೆ ಹೋಗಿ ಮತ್ತು ಕೆಳಭಾಗದಲ್ಲಿರುವ 'ಜಿಯೋ ಟ್ಯೂನ್ ನಿಷ್ಕ್ರಿಯಗೊಳಿಸಿ' ಆಯ್ಕೆ ಟ್ಯಾಪ್ ಮಾಡಿ. *ದೃಢೀಕರಣ ಪುಟದಲ್ಲಿ 'ಹೌದು' ಎಂಬುದನ್ನು ಟ್ಯಾಪ್ ಮಾಡಿ

IVR ವಿಧಾನದ ಮೂಲಕ
*ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಕಾಲ್ ಡಯಲರ್ ಆಪ್ ತೆರೆಯಿರಿ
*ಜಿಯೋ ಸಂಖ್ಯೆಯಿಂದ 155223 ಗೆ ಕಾಲ್ ಮಾಡಿ
*ಇಂಗ್ಲಿಷ್ಗಾಗಿ 1 ಮತ್ತು ಹಿಂದಿಗಾಗಿ 2 ಒತ್ತುವ ಮೂಲಕ ಆದ್ಯತೆಯ ಭಾಷೆ ಆರಿಸಿ.
*ಈಗ, ಐವಿಆರ್ ನಿಮ್ಮ ಜಿಯೋ ಸಂಖ್ಯೆಯಲ್ಲಿರುವ ಎಲ್ಲಾ ಸಕ್ರಿಯ ಮೌಲ್ಯವರ್ಧಿತ ಸೇವೆಗಳನ್ನು ಕೇಳುತ್ತದೆ
This News Article is a Copy of GIZBOT
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm