ಬ್ರೇಕಿಂಗ್ ನ್ಯೂಸ್
06-01-21 03:24 pm Source: GIZBOT Manthesh ಡಿಜಿಟಲ್ ಟೆಕ್
ನಿಮಗೆ ನಿಮ್ಮ ಹೋಲದ ಪಹಣಿ ಪಡೆಯಬೇಕಿದ್ದರೇ, ಮೊದಲಿನಂತೆ ನಾಡ ಕಚೇರಿಗೆ ಹೋಗಿ ಕ್ಯೂನಲ್ಲಿ ನಿಲ್ಲುವ ಅಗತ್ಯವಿಲ್ಲ. ಆನ್ಲೈನ್ ಮೂಲಕ ಅತೀ ಸುಲಭವಾಗಿ ಹೋಲದ RTC ಉತಾರ/ ಪಹಣಿಯನ್ನು ನೀವು ಪಡೆಯಬಹುದಾಗಿದೆ. ಹಾಗೆಯೇ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಸಹ ಅವಕಾಶವಿದೆ.
ಹೌದು, ಸದ್ಯ ತಂತ್ರಜ್ಞಾನ ಬಹುತೇಕ ಎಲ್ಲ ಕೆಲಸಗಳನ್ನು ಸರಳಗೊಳಿಸಿದೆ. ಸರ್ಕಾರ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದ್ದು, ಆನ್ಲೈನ್ ಮೂಲಕ ಯಾವಾಗ ಬೇಕಾದರೂ ಪಹಣಿಯಲ್ಲಿ ಪಡೆಯಬಹುದಾಗಿದೆ. ಪಹಣಿ ಪಡೆಯಲು ಅಗತ್ಯ ಮಾಹಿತಿಗಳಾದ ಹೋಲದ ಸರ್ವೇ ನಂಬರ್, ಹಿಸ್ಸಾ, ಯಾವ ಜಿಲ್ಲೆ, ಯಾವ ತಾಲೂಕ್, ಯಾವ ಹೋಬಳಿಗಳ ಇವುಗಳ ಮಾಹಿತಿ ನೀಡಬೇಕಿರುತ್ತದೆ. ಹಾಗಾದರೇ ಆನ್ಲೈನ್ನಲ್ಲಿ ಪಹಣಿ ಪಡೆಯುವುದು

ಆನ್ಲೈನ್ನಲ್ಲಿ ಪಹಣಿ ಪಡೆಯಲು ಈ ಕ್ರಮ ಅನುಸರಿಸಿ
ಹಂತ 1 ಮೊದಲು ನೀವು ಬ್ರೌಸರ್ನಲ್ಲಿ https://landrecords.karnataka.gov.in ಅಥವಾ Bhoomi ವೆಬ್ಸೈಟ್ ತೆರೆಯಿರಿ.
ಹಂತ 2 ಆ ನಂತರ ಮೇಲಿನ ಚಿತ್ರದಲ್ಲಿ ತೋರಿಸಿರುವಂತೆ View RTC and MR ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 3 View RTC and MR ಆಯ್ಕೆ ಕ್ಲಿಕ್ ಮಾಡಿದ ನಂತರ ಮೇಲೆ ತೋರಿಸಿರುವ ವಿಂಡೋ ತೆರದುಕೊಳ್ಳುತ್ತದೆ.

ಹಂತ 4 ನಂತರ ಅಲ್ಲಿ ಕೇಳಲಾಗಿರುವ, ಹೋಲ ಇರುವ ಜಿಲ್ಲೆ ಯಾವುದು, ತಾಲೂಕು ಯಾವುದು, ಹೋಬಳಿ, ಗ್ರಾಮ, ಸರ್ವೇ ನಂಬರ್ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.
ಹಂತ 5 ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ನಂತರ Fetch Details ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 6 Fetch Details ಆಯ್ಕೆ ಕ್ಲಿಕ್ ಮಾಡಿದ ಮೇಲೆ ನೀವು ನಮೂದಿಸಿದ ಜಾಗದ/ಭೂಮಿಯ ಮಾಹಿತಿಯನ್ನಾಧರಿಸಿ ಆ ಸರ್ವೇ ನಂಬರ್ನಲ್ಲಿರುವ ಭೂಮಿಯ ವಿವರಗಳು ನಿಮಗೆ ಕಾಣುತ್ತವೆ.

ಹಂತ 7 ಭೂಮಿಯ ವಿವರಗಳು ಕಾಣಿಸಿಕೊಂಡ ನಂತರ View ಆಯ್ಕೆಯನ್ನು ಸೆಲೆಕ್ಟ್ ಮಾಡಿ.
ಹಂತ 8 View ಆಯ್ಕೆ ಕ್ಲಿಕ್ ಮಾಡಿದ ನಂತರ ಬೇರೊಂದು ಪುಟದಲ್ಲಿ ನಿಮ್ಮ ಪಹಣಿ ಕಾಣುತ್ತದೆ. ನೀವು ಅಲ್ಲಿ ಕಾಣುವ ಪಹಣಿಯನ್ನು ಸೇವ್ ಮಾಡಿಕೊಂಡು ಪ್ರಿಂಟ್ ತೆಗೆಸಿಕೊಳ್ಳಬಹುದು.
ಹಂತ 9 ಆನ್ಲೈನ್ನಲ್ಲಿ ವೀಕ್ಷಿಸುವ ಪಹಣಿ ವೀಕ್ಷಣೆಗೆ ಮಾತ್ರ. ಆದರೆ ನಿಗದಿತ ಸರ್ಕಾರಿ ಶುಲ್ಕ ಪಾವತಿಸುವ ಮೂಲಕ ಕೆಲಸಗಳಿಗೆ ಮಾನ್ಯತೆ ಇರುವಂತಹ ಪಹಣಿ ಸಹ ಪ್ರಿಂಟ್ ಮಾಡಬಹುದಾಗಿದೆ.
This News Article is a Copy of GIZBOT
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am