ಬ್ರೇಕಿಂಗ್ ನ್ಯೂಸ್
12-08-20 05:36 pm Headline Karnataka News Network ಡಿಜಿಟಲ್ ಟೆಕ್
ನವದೆಹಲಿ, ಆಗಸ್ಟ್ 12: ಭೂಕಂಪನದ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಮೊಬೈಲ್ ಫೀಚರ್ ಒಂದನ್ನು ಬಳಕೆಗೆ ತರುವ ಕುರಿತು ಗೂಗಲ್ ಮಾಹಿತಿ ನೀಡಿದೆ. ಈಗಾಗಲೇ ಆ್ಯಂಡ್ರಾಯ್ಡ್ ಆಧಾರಿತ ಭೂಕಂಪನ ಪತ್ತೆ ಹಚ್ಚುವ ಫೀಚರ್ ಅನ್ನು ಆಯ್ದ ಸ್ಮಾರ್ಟ್ ಫೋನ್ ಗಳಲ್ಲಿ ಜಾರಿಗೊಳಿಸಲಾಗಿದೆ.
ಆ್ಯಂಡ್ರಾಯ್ಡ್ ಪೋನ್ ಗಳು ಭೂಕಂಪನ ಅಲರ್ಟ್ ಸಿಸ್ಟಮ್ ಅನ್ನು ಒಳಗೊಂಡಿರಲಿದ್ದು, ಈ ಸೌಲಭ್ಯ ಜಗತ್ತಿನಾದ್ಯಂತ ಜನರಿಗೆ ದೊರೆಯುತ್ತದೆ. ಇದರ ಪ್ರಕಾರ ಪ್ರತಿ ಆ್ಯಂಡ್ರಾಯ್ಡ್ ಫೋನ್ ಗಳು ಮಿನಿ ಸಿಸ್ಮೋಮೀಟರ್ ಆಗಿ ಬದಲಾಗುತ್ತದೆ. ಆ ಮೂಲಕ ಜಗತ್ತಿನ ಅತೀ ದೊಡ್ಡ ಭೂಕಂಪನ ಕುರಿತ ಎಚ್ಚರಿಕೆ ನೀಡುವ ನೆಟ್ ವರ್ಕ್ ಇದಾಗಿರಲಿದೆ ಎಂದು ಗೂಗಲ್ ತನ್ನ ಬ್ಲಾಗ್ ನಲ್ಲಿ ತಿಳಿಸಿದೆ, ಈ ಫೀಚರ್ ಅನ್ನು ಮೊದಲು ಕ್ಯಾಲಿಪೋರ್ನಿಯಾದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸುಮಾರು 700 ಸಿಸ್ಮೋ ಮೀಟರ್ ಗಳನ್ನು ವಿವಿಧೆಡೆ ಅಳವಡಿಸಲಾಗಿತ್ತು. ಈ ಸಮಯದಲ್ಲಿ ಭೂಕಂಪವಾಗುವ 5 ಸೆಕೆಂಡುಗಳಿಗೂ ಮೊದಲು ಭೂಮಿ ಕಂಪಿಸುತ್ತಿರುವ ತರಂಗಾಂತರಗಳನ್ನು ಸಿಸ್ಮೋಮೀಟರ್ ಗಳು ರವಾನಿಸುತ್ತಿದ್ದವು. ಈ 5 ಸೆಕೆಂಡುಗಳು ಜನರ ಪ್ರಾಣ ಉಳಿಸಲು ನೆರವಾಗುವ ಸಾಧ್ಯತೆಯೂ ಇದೆ ಎಂದು ಗೂಗಲ್ ಅಭಿಪ್ರಾಯಪಟ್ಟಿದೆ.
ಇದರ ಭಾಗವಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಸ್ಮಾರ್ಟ್ ಪೋನ್ ಗಳೂ ಅತೀ ಸಣ್ಣದಾದ ಆ್ಯಕ್ಸಲರೋ ಮೀಟರ್ ಅನ್ನು ಒಳಗೊಂಡಿದ್ದು ಭೂಮಿ ಕಂಪಿಸುವಾಗ ಸಿಗ್ನಲ್ ಗಳನ್ನು ಪಡೆಯಲು ನೆರವಾಗುತ್ತದೆ. ಮಾತ್ರವಲ್ಲದೆ ಯಾವ ಸ್ಥಳದಲ್ಲಿ ಭೂಮಿ ಕಂಪಿಸುತ್ತಿದೆ ಎಂಬ ಮಾಹಿತಿಯನ್ನು ತಿಳಿಯಲು ಸಹಾಯಕವಾಗುತ್ತದೆ. ಈ ಫೀಚರ್ ಮುಂದಿನ ಕೆಲವು ವರ್ಷಗಳಲ್ಲಿ ಎಲ್ಲಾ ರಾಷ್ಟ್ರಗಳ ಆ್ಯಂಡ್ರಾಯ್ಡ್ ಪೋನ್ ಗಳಿಗೆ ಲಭ್ಯವಾಗುತ್ತದೆ ಎಂದು ಗೂಗಲ್ ತಿಳಿಸಿದೆ.
30-05-25 11:13 am
Bangalore Correspondent
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
Hassan Heart Attack, Death: ಹಾಸನದಲ್ಲಿ ಹೃದಯಾಘಾ...
29-05-25 03:34 pm
CM Siddaramaiah, B K Hariprasad, Mangalore Mu...
29-05-25 02:43 pm
COVID, African Swine Fever Bagalkote: ಕೊರೋನಾ...
29-05-25 02:19 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
30-05-25 08:44 am
Mangaluru Correspondent
ESIC, ESI Hospital,Mangalore: ಮಂಗಳೂರಿನ ಇಎಸ್ಐ...
29-05-25 10:51 pm
Mangalore, Congress: ಕಾರ್ಯಕರ್ತರ ಸಭೆಯಲ್ಲಿ ಹೈಡ್...
29-05-25 10:40 pm
Anupam Agrawal IPS, CH Sudheer Kumar Reddy, M...
29-05-25 08:52 pm
Moodbidri Suicide, Mangalore: ಮೂಡುಬಿದ್ರೆ ; ವಿ...
28-05-25 11:16 pm
29-05-25 11:04 pm
Mangalore Correspondent
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm
Karkala, Chikkamagaluru: ನವಜಾತ ಶಿಶುವನ್ನು ಕಾರ್...
29-05-25 01:13 pm