ಬ್ರೇಕಿಂಗ್ ನ್ಯೂಸ್
12-08-20 05:36 pm Headline Karnataka News Network ಡಿಜಿಟಲ್ ಟೆಕ್
ನವದೆಹಲಿ, ಆಗಸ್ಟ್ 12: ಭೂಕಂಪನದ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಮೊಬೈಲ್ ಫೀಚರ್ ಒಂದನ್ನು ಬಳಕೆಗೆ ತರುವ ಕುರಿತು ಗೂಗಲ್ ಮಾಹಿತಿ ನೀಡಿದೆ. ಈಗಾಗಲೇ ಆ್ಯಂಡ್ರಾಯ್ಡ್ ಆಧಾರಿತ ಭೂಕಂಪನ ಪತ್ತೆ ಹಚ್ಚುವ ಫೀಚರ್ ಅನ್ನು ಆಯ್ದ ಸ್ಮಾರ್ಟ್ ಫೋನ್ ಗಳಲ್ಲಿ ಜಾರಿಗೊಳಿಸಲಾಗಿದೆ.
ಆ್ಯಂಡ್ರಾಯ್ಡ್ ಪೋನ್ ಗಳು ಭೂಕಂಪನ ಅಲರ್ಟ್ ಸಿಸ್ಟಮ್ ಅನ್ನು ಒಳಗೊಂಡಿರಲಿದ್ದು, ಈ ಸೌಲಭ್ಯ ಜಗತ್ತಿನಾದ್ಯಂತ ಜನರಿಗೆ ದೊರೆಯುತ್ತದೆ. ಇದರ ಪ್ರಕಾರ ಪ್ರತಿ ಆ್ಯಂಡ್ರಾಯ್ಡ್ ಫೋನ್ ಗಳು ಮಿನಿ ಸಿಸ್ಮೋಮೀಟರ್ ಆಗಿ ಬದಲಾಗುತ್ತದೆ. ಆ ಮೂಲಕ ಜಗತ್ತಿನ ಅತೀ ದೊಡ್ಡ ಭೂಕಂಪನ ಕುರಿತ ಎಚ್ಚರಿಕೆ ನೀಡುವ ನೆಟ್ ವರ್ಕ್ ಇದಾಗಿರಲಿದೆ ಎಂದು ಗೂಗಲ್ ತನ್ನ ಬ್ಲಾಗ್ ನಲ್ಲಿ ತಿಳಿಸಿದೆ, ಈ ಫೀಚರ್ ಅನ್ನು ಮೊದಲು ಕ್ಯಾಲಿಪೋರ್ನಿಯಾದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸುಮಾರು 700 ಸಿಸ್ಮೋ ಮೀಟರ್ ಗಳನ್ನು ವಿವಿಧೆಡೆ ಅಳವಡಿಸಲಾಗಿತ್ತು. ಈ ಸಮಯದಲ್ಲಿ ಭೂಕಂಪವಾಗುವ 5 ಸೆಕೆಂಡುಗಳಿಗೂ ಮೊದಲು ಭೂಮಿ ಕಂಪಿಸುತ್ತಿರುವ ತರಂಗಾಂತರಗಳನ್ನು ಸಿಸ್ಮೋಮೀಟರ್ ಗಳು ರವಾನಿಸುತ್ತಿದ್ದವು. ಈ 5 ಸೆಕೆಂಡುಗಳು ಜನರ ಪ್ರಾಣ ಉಳಿಸಲು ನೆರವಾಗುವ ಸಾಧ್ಯತೆಯೂ ಇದೆ ಎಂದು ಗೂಗಲ್ ಅಭಿಪ್ರಾಯಪಟ್ಟಿದೆ.
ಇದರ ಭಾಗವಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಸ್ಮಾರ್ಟ್ ಪೋನ್ ಗಳೂ ಅತೀ ಸಣ್ಣದಾದ ಆ್ಯಕ್ಸಲರೋ ಮೀಟರ್ ಅನ್ನು ಒಳಗೊಂಡಿದ್ದು ಭೂಮಿ ಕಂಪಿಸುವಾಗ ಸಿಗ್ನಲ್ ಗಳನ್ನು ಪಡೆಯಲು ನೆರವಾಗುತ್ತದೆ. ಮಾತ್ರವಲ್ಲದೆ ಯಾವ ಸ್ಥಳದಲ್ಲಿ ಭೂಮಿ ಕಂಪಿಸುತ್ತಿದೆ ಎಂಬ ಮಾಹಿತಿಯನ್ನು ತಿಳಿಯಲು ಸಹಾಯಕವಾಗುತ್ತದೆ. ಈ ಫೀಚರ್ ಮುಂದಿನ ಕೆಲವು ವರ್ಷಗಳಲ್ಲಿ ಎಲ್ಲಾ ರಾಷ್ಟ್ರಗಳ ಆ್ಯಂಡ್ರಾಯ್ಡ್ ಪೋನ್ ಗಳಿಗೆ ಲಭ್ಯವಾಗುತ್ತದೆ ಎಂದು ಗೂಗಲ್ ತಿಳಿಸಿದೆ.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm