ಬ್ರೇಕಿಂಗ್ ನ್ಯೂಸ್
16-01-21 05:43 pm Source: GIZBOT Mutthuraju H M ಡಿಜಿಟಲ್ ಟೆಕ್
ದೇಶಿಯ ಮಾರುಕಟ್ಟೆಯಲ್ಲಿ ಬಜೆಟ್ ದರದ ಸ್ಮಾರ್ಟ್ಫೋನ್ಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಈ ನಿಟ್ಟಿನಲ್ಲಿ ಬಹುತೇಕ ಕಂಪನಿಗಳು ನೂತನ ಫೋನ್ಗಳನ್ನು ಪರಿಚಯಿಸುತ್ತವೆ. ಅವುಗಳಲ್ಲಿ ಐಟೆಲ್ ಕಂಪನಿಯು ಸಹ ಅಗ್ಗದ ದರದಲ್ಲಿ ಸ್ಮಾರ್ಟ್ಫೋನ್ಗಳನ್ನು ಲಾಂಚ್ ಮಾಡಿ ಸೈ ಅನಿಸಿಕೊಂಡಿದೆ. ಇದೀಗ ಐಟೆಲ್ ಕಂಪನಿಯು ಭಾರತದಲ್ಲಿ ಹೊಸದಾಗಿ ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ.
ಹೌದು, ಐಟೆಲ್ ಕಂಪೆನಿ ತನ್ನ ಹೊಸ ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಅಗ್ಗದ ಪ್ರೈಸ್ಟ್ಯಾಗ್ ಹೊಂದಿರುವ ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 10 ಗೋ ಎಡಿಷನ್ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4,000mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್ಅಪ್ ಅನ್ನು ಪಡೆದುಕೊಂಡಿದೆ ಜೊತೆಗೆ ತ್ರಿವಳಿ ಕ್ಯಾಮೆರಾ ರಚನೆಯನ್ನು ಹೊಂದಿದೆ.

ಡಿಸ್ಪ್ಲೇ ವಿನ್ಯಾಸ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಹೊಂದಿರುವ ಡಿಸ್ಪ್ಲೇ ಹೊಂದಿದ್ದು, ಇದು 720x1600 ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.5-ಇಂಚಿನ ಎಚ್ಡಿ ಪ್ಲಸ್ ಡಿಸ್ಪ್ಲೇ ಇದಾಗಿದೆ. ಈ ಡಿಸ್ಪ್ಲೇಯು IPS LCD ಪ್ಯಾನೆಲ್ ಡಿಸ್ಪ್ಲೇ ಆಗಿದ್ದು, 450 ನಿಟ್ಸ್ ಬ್ರೈಟ್ನೆಶ್ ಅನ್ನು ಹೊಂದಿದೆ. ಅಲ್ಲದೆ ಈ ಡಿಸ್ಪ್ಲೇ 20:9 ಅನುಪಾತ ಹೊಂದಿದೆ.

ಪ್ರೊಸೆಸರ್ ಬಲ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, 10 ಗೋ ಎಡಿಷನ್ ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಗ್ಗದ ಬೆಲೆಯ ಈ ಸ್ಮಾರ್ಟ್ಫೋನ್ 2GB RAM ಮತ್ತು 32GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನ ಹೊಂದಿದೆ.

ಕ್ಯಾಮೆರಾ ರಚನೆ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ಟ್ರಿಪಲ್ ಕ್ಯಾಮೆರಾ ರಿಯರ್ ಸೆಟ್ಆಪ್ ಹೊಂದಿದ್ದು, ಮೊದಲನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನುಳಿದಂತೆ ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳೆರಡು VGA ಕ್ಯಾಮೆರಾ ಮಾದರಿಯನ್ನು ಹೊಂದಿವೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ 4000mAh ಬ್ಯಾಟರಿ ಪ್ಯಾಕ್ಆಪ್ ಹೊಂದಿದೆ. 35 ಗಂಟೆಗಳ ಪ್ಲೇಬ್ಯಾಕ್ ಮ್ಯೂಸಿಕ್, 8 ಗಂಟೆಗಳ ವೀಡಿಯೊ ಮತ್ತು 7 ಗಂಟೆಗಳ ಗೇಮಿಂಗ್ ಅನ್ನು ಒದಗಿಸುತ್ತದೆ ಎಂದು ಐಟೆಲ್ ಹೇಳಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಡ್ಯುಯಲ್ ಆಕ್ಟಿವ್ 4G VOLTE, ವೈಫೈ, ಬ್ಲೂಟೂತ್ , ಹಾಟ್ಸ್ಪಾಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ 2GB RAM ಮತ್ತು 32GB ವೇರಿಯಂಟ್ ಬೆಲೆಯು 6,599ರೂ.ಗಳಾಗಿದೆ. ಇನ್ನು ಈ ಫೋನ್ ಅರೋರಾ ಬ್ಲೂ ಹಾಗೂ ಓಶಿಯನ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.
This News Article is a Copy of GIZBOT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm