ಬ್ರೇಕಿಂಗ್ ನ್ಯೂಸ್
01-02-21 05:24 pm Source: GIZBOT Manthesh ಡಿಜಿಟಲ್ ಟೆಕ್
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕೇಂದ್ರ ಬಜೆಟ್ 2021-22 ಮಂಡನೆಯಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂರನೇ ಬಾರಿಗೆ ಬಜೆಟ್ ಮಂಡಿಸಿದರು. ಕಾಗದರಹಿತ ಬಜೆಟ್ ಮಂಡನೆ ಹಾಗೂ ಕೇಂದ್ರ ಯೂನಿಯನ್ ಬಜೆಟ್ ಆಪ್ ಈ ಬಾರಿಯ ಬಜೆಟ್ನಲ್ಲಿ ಗಮನ ಸೆಳೆದ ಅಂಶಗಳಾಗಿವೆ. ಹಾಗೆಯೇ ಡಿಜಿಟಲ್ ಜನಗಣತಿ ನಡೆಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದ ವೇಳೆ ತಿಳಿಸಿದರು.
ಈ ಬಾರಿಯ ಬಜೆಟ್ನಲ್ಲಿ ಕೋವಿಡ್-19 ನಿಂದ ಹಳಿ ತಪ್ಪಿದ್ದ ದೇಶದ ಆರ್ಥಿಕ ವ್ಯವಸ್ಥೆಗೆ ಚೇತರಿಕೆ ನೀಡುವ ಪ್ರಯತ್ನವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ. ಕೇಂದ್ರ ಬಜೆಟ್ 2021ರಲ್ಲಿ ಭಾಷಣದಲ್ಲಿ ಅವರು ಕೃಷಿ, ಆರೋಗ್ಯ, ಕಾರ್ಮಿಕರಿಗೆ, ಹಿರಿಯ ನಾಗರೀಕರಿಗೆ ಹಾಗೂ ತಂತ್ರಜ್ಞಾನ ವಲಯಕ್ಕೆ ಕೊಡುಗೆಗಳನ್ನು ಘೋಷಿಸಿದ್ದಾರೆ.

ಕೇಂದ್ರ ಬಜೆಟ್ ಮೊಬೈಲ್ ಅಪ್ಲಿಕೇಶನ್
ಕೇಂದ್ರ ಬಜೆಟ್ 2021-22 ಇದೇ ಮೊದಲ ಬಾರಿಗೆ ಕಾಗದರಹಿತವಾಗಿ ಮಂಡನೆಯಾಗಿದೆ. ಬಜೆಟ್ ಸಂಬಂಧಿತ ಮಾಹಿತಿ ಮತ್ತು ದಾಖಲೆಗಳನ್ನು ತಿಳಿದುಕೊಳ್ಳಲು ಕೇಂದ್ರ ಬಜೆಟ್ ಮೊಬೈಲ್ ಅಪ್ಲಿಕೇಶನ್ ಅನ್ನು ಸರ್ಕಾರ ರೂಪಿಸಿದೆ. ಇನ್ನು ಆಂಡ್ರಾಯ್ಡ್ ಮತ್ತು ಐಒಎಸ್ ಸ್ಮಾರ್ಟ್ಫೋನ್ಗಳನ್ನು ಈ ಅಪ್ಲಿಕೇಶನ್ ಬೆಂಬಲಿಸಲಿದೆ. ಸಂಸತ್ತಿನಲ್ಲಿ ಬಜೆಟ್ ಮಂಡನೆನ ಬಜೆಟ್ನ ಎಲ್ಲಾ ದಾಖಲೆಗಳು ಮುಕ್ತ ರೀತಿಯಲ್ಲಿ ಅಪ್ಲಿಕೇಶನ್ನಲ್ಲಿ ಲಭ್ಯವಿರುತ್ತವೆ.

ಡಿಜಿಟಲ್ ಬಜೆಟ್
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದಲ್ಲಿ ಇದೇ ಮೊದಲ ಬಾರಿಗೆ ಕಾಗದರಹಿತ ಬಜೆಟ್ ಮಂಡನೆ ಮಾಡಿದ್ದಾರೆ. ಇದು ಅವರ ಮೂರನೇ ಬಜೆಟ್ ಆಗಿದೆ.

ಡಿಜಿಟಲ್ ಜನಗಣತಿ
ದೇಶದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಸಲಾಗುವುದು ಎಂದು ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಡಿಜಿಟಲ್ ಜನಗಣತಿಗಾಗಿ 3,768ಕೋಟಿ ನೀಡಲಾಗುವುದು ಅವರು ತಿಳಿಸಿದ್ದಾರೆ.

ಜಿಎಸ್ಟಿಯಲ್ಲಿ ಅಪ್ಡೇಟ್
ಜಿಎಸ್ಟಿ ವ್ಯವಸ್ಥೆಯು ಶುರುವಾಗಿ ಇದೀಗ ನಾಲ್ಕು ವರ್ಷ ಕಳೆದಿದೆ. ಕೇಂದ್ರ ಸರ್ಕಾರ ಜಿಎಸ್ಟಿಯನ್ನು ಇನ್ನಷ್ಟು ಸರಳೀಕರಿಸಲಿದೆ ಎಂದು ಬಜೆಟ್ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಕಾರ್ಮಿಕರಿಗೆ ಪೋರ್ಟಲ್
ಈ ಬಾರಿಯ ಬಜೆಟ್ನಲ್ಲಿ ಅಸಂಘಟಿತ ಕಾರ್ಮಿಕರ ವಲಯಕ್ಕೆ ಒಲವು ತೋರಿಸಿದ್ದು, ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ಮುಂದಾಗಲಿದೆ. ಈ ನಿಟ್ಟಿನಲ್ಲಿ ಕಾರ್ಮಿಕರ ಮಾಹಿತಿ ಸಂಗ್ರಹಿಸಲು ಪೋರ್ಟಲ್ ಪ್ರಾರಂಭಿಸಲಾಗುವುದು ಎಂದಿದ್ದಾರೆ.

ಸ್ಟಾರ್ಟ್ಅಪ್ಗಳಿಗೆ ಗಿಫ್ಟ್
ಕೇಂದ್ರ ಬಜೆಟ್ 2021-22ರಲ್ಲಿ ಸ್ಟಾರ್ಟ್ಅಪ್ಗಳಿಗೆ ಭರ್ಜರಿ ಗಿಫ್ಟ್ ನೀಡಲಾಗಿದೆ. ಸ್ಟಾರ್ಟ್ಅಪ್ಗಳಿಗೆ ಬಂಡವಾಳ ತೆರಿಗೆಯಲ್ಲಿ ವಿನಾಯಿತಿ ಘೋಷಿಸಲಾಗಿದೆ.

ಇತರೆ ಅಂಶಗಳು
* ದೇಶದಲ್ಲಿ ಶೀಘ್ರವೇ ಒಂದೇ ಪಡಿತರ ಕಾರ್ಡ್ ಯೋಜನೆ ಜಾರಿ.
* ಆಮದು ಮಾಡಿಕೊಳ್ಳುವ ಮೊಬೈಲ್ಗಳ ದರದಲ್ಲಿ ಏರಿಕೆ.
This News Article is a Copy of GIZBOT
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm