ಬ್ರೇಕಿಂಗ್ ನ್ಯೂಸ್
05-02-21 04:30 pm Source: GIZBOT Manthesh ಡಿಜಿಟಲ್ ಟೆಕ್
ಜೂಜಾಟದ ಮಾದರಿಯಲ್ಲಿರುವ ಆನ್ಲೈನ್ ರಮ್ಮಿ ಗೇಮ್ ಹಾಗೂ ಪೋಕರ್ ಗೇಮ್ಗಳನ್ನು ಆಡಿದರೇ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವುದು ಮತ್ತು ಸುಮಾರು ಹತ್ತು ಸಾವಿರ ದಂಡ ವಿಧಿಸುವ ಕಾಯ್ದೆಯನ್ನು ಮೋಹನ್ ರೆಡ್ಡಿ ನಾಯಕತ್ವದ ಆಂಧ್ರಪ್ರದೇಶ ಸರ್ಕಾರ ತೆಗೆದುಕೊಂಡಿದೆ.
ಹೌದು, ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆನ್ಲೈನ್ ಜೂಜಾಟದ ಗೇಮ್ಗಳನ್ನು ರಾಜ್ಯದಲ್ಲಿ ನಿಷೇಧಿಸುವ ಮಹತ್ತರ ಕ್ರಮವನ್ನು ಕೈಗೊಂಡಿದೆ ಎಂದು ಆಂಧ್ರಪ್ರದೇಶದ ಮಾಹಿತಿ ಸಚಿವ ಪೆರ್ನಿ ವೆಂಕಟರಮಯ್ಯ ಹೇಳಿದ್ದಾರೆ.

ಆಂಧ್ರಪ್ರದೇಶ ಗೇಮಿಂಗ್ ಕಾಯಿದೆ-1974 ಅನ್ನು ತಿದ್ದುಪಡಿ ಮಾಡಲು ಸಂಪುಟ ತೀರ್ಮಾನ ಕೈಗೊಂಡಿದೆ. ಆನ್ಲೈನ್ ಜೂಜಾಟ ಗೇಮ್ಗಳು ಯುವಕರನ್ನು ಜೂಜಾಟಕ್ಕೆ ಪ್ರೇರೇಪಣೆ ಮಾಡುತ್ತಿವೆ. ಈ ನಿಟ್ಟಿನಲ್ಲಿ ಸರ್ಕಾರವು ಯುವಸಮೂಹವನ್ನು ಈ ಜೂಜಾಟದ ಬಲಿಗೆ ಸುಳಿವುದನ್ನು ತಪ್ಪಿಸಲು ಎಲ್ಲಾ ಆನ್ಲೈನ್ ಜೂಜಾಟ ಗೇಮ್ಗಳು ನಿಷೇಧಿಸಲು ನಿರ್ಧರಿಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

ಸಚಿವ ಸಂಪುಟದ ತೀರ್ಮಾನದ ಪ್ರಕಾರ, ಆನ್ಲೈನ್ ಜೂಜಾಟದ ಕಂಪನಿಗಳ ಮೊದಲ ಬಾರಿಯ ಅಪರಾಧಕ್ಕೆ ದಂಡ ವಿಧಿಸುವುದರ ಜೊತೆಗೆ ವರ್ಷ ಜೈಲು ಶಿಕ್ಷೆ, ಎರಡನೇ ಅಪರಾಧಕ್ಕೆ ಎರಡು ವರ್ಷ ಜೈಲು ಶಿಕ್ಷೆ ಜೊತೆಗೆ ದಂಡ ವಿಧಿಸಲಾಗುತ್ತದೆ. ಅಲ್ಲದೇ, ಆನ್ಲೈನ್ ಜೂಜಾಟ ಆಡುವವರಿಗೂ ಸಹ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
This News Article is a Copy of GIZBOT
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm