ಬ್ರೇಕಿಂಗ್ ನ್ಯೂಸ್
13-02-21 02:59 pm Source: GIZBOT Manthesh ಡಿಜಿಟಲ್ ಟೆಕ್
ಗೂಗಲ್ ಮ್ಯಾಪ್ ಅಪ್ಲಿಕೇಶನ್ಗೆ ಬದಲಾಗಿ ಸ್ವದೇಶಿ ಮ್ಯಾಪ್ ಸೇವೆ ಅಭಿವೃದ್ಧಿ ಪಡಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಮತ್ತು ಮ್ಯಾಪ್ ಮೈ ಇಂಡಿಯಾ ಸಂಸ್ಥೆಗಳು ಒಪ್ಪಂದ ಮಾಡಿಕೊಂಡಿವೆ.
ಸ್ವದೇಶಿ ಮ್ಯಾಪ್ ಸೇವೆ ಅಭಿವೃದ್ಧಿಯಿಂದ ಮ್ಯಾಪ್, ಜಿಯೊ ಲೊಕೇಶನ್, ನ್ಯಾವಿಗೇಷನ್ ಸೇರಿದಂತೆ ಮ್ಯಾಪ್ ಸೇವೆಗಳಿಗೆ ವಿದೇಶಿ ಕಂಪನಿಗಳನ್ನು ಅವಲಂಬಿಸುವುದು ತಪ್ಪುತ್ತದೆ. ಇಸ್ರೊದ ಭೂ ಪರಿವೀಕ್ಷಣೆ ಡೇಟಾ, ಸ್ಯಾಟಲೈಟ್ ಫೋಟೊಗಳನ್ನು ಬಳಸಿಕೊಳ್ಳುವ ಮೂಲಕ ಉತ್ತಮ ಗುಣಮಟ್ಟದ ಮ್ಯಾಪ್ ಸೇವೆ ನೀಡಲು ಸಾಧ್ಯವಾಗುತ್ತದೆ. ಆತ್ಮನಿರ್ಭರ ಭಾರತ ಹಾದಿಯಲ್ಲಿ ಇದು ಮಹತ್ವದ ಮೈಲಿಗಲ್ಲು ಎಂದು ಮ್ಯಾಪ್ ಮೈ ಇಂಡಿಯಾ ಸಿಇಒ ರೋಹನ್ ವರ್ಮಾ ಹೇಳಿದ್ದಾರೆ.

ಮ್ಯಾಪ್ ಮೈ ಇಂಡಿಯಾ ಮಾಲೀಕತ್ವ ಹೊಂದಿರುವ ಸಿ.ಇ. ಇನ್ಫೋ ಸಿಸ್ಟಮ್ಸ್ ಪ್ರೈ.ಲಿ. ಮತ್ತು ಬಾಹ್ಯಾಕಾಶ ಇಲಾಖೆ ಫೆ.11ರಂದು ಒಪ್ಪಂದ ಮಾಡಿಕೊಂಡಿವೆ ಎಂದು ಇಸ್ರೊ ತಿಳಿಸಿದೆ. ಭೂ ಪರಿವೀಕ್ಷಣೆ ಡೇಟಾಗಾಗಿ ಇಸ್ರೊದ 'NavIC', 'ವೆಬ್ ಸೇವೆಗಳು', 'API', 'ಮ್ಯಾಪ್ ಮೈ ಇಂಡಿಯಾ', 'ಭುವನ್', 'VEDAS' ಮತ್ತು 'MOSDAC 'ಗಳನ್ನು ಬಳಸಿಕೊಂಡು ಜಂಟಿಯಾಗಿ ಸ್ಥಳಗಳ ವಿವರ ಒದಗಿಸುವ ಉತ್ತಮ ಮ್ಯಾಪ್ ಸೇವೆ ಒದಗಿಸಲು ಮ್ಯಾಪ್ ಮೈ ಇಂಡಿಯಾ ಜೊತೆಗಿನಒಪ್ಪಂದ ನೆರವಾಗುತ್ತದೆ ಎಂದು ಇಸ್ರೊ ತಿಳಿಸಿದೆ.
ಕೇಂದ್ರ ಸರಕಾರದ ಅಧಿಕೃತ ಮ್ಯಾಪ್ ಬಳಸುವ ಮ್ಯಾಪ್ ಮೈ ಇಂಡಿಯಾ, ಭಾರತದ ನೈಜ ಸಾರ್ವಭೌಮತೆಯನ್ನು ಪ್ರದರ್ಶಿಸುವ ಭಾರತೀಯ ಕಂಪನಿಯಾಗಿದೆ. ಮ್ಯಾಫ್ಸ್, ಆ್ಯಫ್ಸ್ ಮತ್ತು ಸೇವೆಗಳು ಇನ್ನು ಮುಂದೆ ಇಸ್ರೊದ ಬೃಹತ್ ಛಾಯಾಚಿತ್ರ ಮತ್ತು ಭೂಪರೀಕ್ಷಣೆ ಸ್ಯಾಟಲೈಟ್ ಡೇಟಾ ಜತೆ ಏಕೀಕರಣಗೊಳ್ಳಲಿವೆ ಎಂದು ಮ್ಯಾಪ್ ಮೈ ಇಂಡಿಯಾ ತಿಳಿಸಿದೆ.

ವಿದೇಶಿ ಸಂಸ್ಥೆಯಗಳು ಉಚಿತ ಸೇವೆ ಹೆಸರಿನಲ್ಲಿ ಬಳಕೆದಾರರ ಖಾಸಗಿ ಮಾಹಿತಿ, ಓಡಾಟ ಮತ್ತು ಲೊಕೇಶನ್ ಅನ್ನು ಮಾರಿಕೊಳ್ಳುತ್ತವೆ. ಖಾಸಗಿತನಕ್ಕೆ ಧಕ್ಕೆ ತರುವ ದೃಷ್ಠಿಯಿಂದ ಇದು ಒಳ್ಳೆಯ ಕ್ರಮವಲ್ಲ. ಆದರೆ, ನಮ್ಮದು ಖಾಸಗಿತನಕ್ಕೆ ಧಕ್ಕೆಯಾಗದಂತೆ ಜಾಹೀರಾತು ಬಿಸಿನೆಸ್ ಮಾಡೆಲ್ ಒಳಗೊಂಡಿರದ ಸುರಕ್ಷಿತ ಮ್ಯಾಪ್ ಆಗಿದೆ ಎಂದು ಮ್ಯಾಪ್ ಮೈ ಇಂಡಿಯಾ ಸಿಇಒ ರೋಹನ್ ವರ್ಮಾ ಹೇಳಿದ್ದಾರೆ.
This News Article is a Copy of GIZBOT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am