ಬ್ರೇಕಿಂಗ್ ನ್ಯೂಸ್
29-03-21 11:29 am Source: Vijaya Karnataka ಡಿಜಿಟಲ್ ಟೆಕ್
ಸಾಮಾನ್ಯವಾಗಿ ಸಂಚಾರ ಪೊಲೀಸ್ ಅಧಿಕಾರಿಗಳು ಸಹ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಇ-ಚಲನ್ ನೀಡುತ್ತಾರೆ. ಈ ಚಲನ್ನ್ನು ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಪಾವತಿಸಬಹುದು.
ಸದ್ಯ ದೇಶದೆಲ್ಲಡೆ ಕೊರೋನಾ ವೈರಸ್ ಎರಡನೇ ಅಲೆ ಆವರಿಸಿದ್ದು, ಮಾಸ್ಕ್ ಹಾಕದೇ ಇದ್ದಾಗ ಅಥವಾ ಹೆಲ್ಮೆಟ್ ಹಾಕಿದ್ದರೂ ಮಾಸ್ಕ್ ಧರಿಸಿದೆ ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿದರೆ ಭಾರೀ ಪ್ರಮಾಣದಲ್ಲಿ ದಂಡ ವಿಧಿಸಲಾಗುತ್ತಿದೆ. ಆದರೂ ಕೇಂದ್ರ ಸರ್ಕಾರದ ಈ ಕ್ರಮಕ್ಕೆ ಸಾರ್ವಜನಿಕವಾಗಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕೇವಲ ಸಾಂವಿಧಾನಿಕ ಬದಲಾವಣೆ ಅಷ್ಟೇ ಅಲ್ಲದೇ ಸಂಚಾರ ನಿಯಮ ಉಲ್ಲಂಘನೆ ಪತ್ತೆಹಚ್ಚಲು ರಸ್ತೆಗಳಲ್ಲಿ ಕ್ಯಾಮೆರಾಗಳನ್ನು ಸಹ ಅಳವಡಿಸಲಾಗಿದ್ದು,

ಸಾಮಾನ್ಯವಾಗಿ ಸಂಚಾರ ಪೊಲೀಸ್ ಅಧಿಕಾರಿಗಳು ಸಹ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಇ-ಚಲನ್ ನೀಡುತ್ತಾರೆ. ಈ ಚಲನ್ನ್ನು ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಪಾವತಿಸಬಹುದು. ಹಾಗಿದ್ರೇ, ಟ್ರಾಫಿಕ್ ಇ-ಚಲನ್ನ್ನು ಆನ್ಲೈನ್ನಲ್ಲಿ ಪಾವತಿಸುವುದು ಹೇಗೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಮೊದಲು ಮೊಬೈಲ್ ಅಥವಾ ಡೆಸ್ಕ್ಟಾಪ್ನಲ್ಲಿ https://echallan.parivahan.gov.in ವೆಬ್ಸೈಟ್ಗೆ ಭೇಟಿ ನೀಡಿ. ಈ ವೆಬ್ಸೈಟ್ ಒನ್ ನೇಷನ್ ಒನ್ ಚಲನ್ ಉಪಕ್ರಮದಡಿ ಸೃಷ್ಟಿಯಾಗಿದ್ದು, ಇಲ್ಲಿ "ಚಲನ್ ಸ್ಥಿತಿ ಪರಿಶೀಲಿಸಿ" ಆಯ್ಕೆಯನ್ನು ಕ್ಲಿಕ್ ಮಾಡಿ.

ನೀವು ಲೈಸನ್ಸ್ ಸಂಖ್ಯೆ, ವಾಹನ ಸಂಖ್ಯೆ ಅಥವಾ ಚಲನ್ ಸಂಖ್ಯೆಯೊಂದಿಗೆ ದಂಡದ ಚಲನ್ಗಳನ್ನು ಹುಡುಕಬಹುದು. ನಿಮಗೆ ಈ ಮಾಹಿತಿಯ ಅಗತ್ಯವಿರುತ್ತದೆ. ಪ್ರಕ್ರಿಯೆಯಲ್ಲಿ ಮುಂದುವರಿಯಲು ಕ್ಯಾಪ್ಚಾ ನಮೂದಿಸಿ. ಮೇಲಿನ ಮೂರು ವಿವರಗಳಲ್ಲಿ ಒಂದನ್ನು ನಮೂದಿಸಿದ ನಂತರ, ದಂಡದ ಚಲನ್ ವಿವರಗಳು ಆನ್ಲೈನ್ನಲ್ಲಿ ಗೋಚರಿಸುತ್ತವೆ. ಕೆಲವೊಮ್ಮೆ ಎರಡು ವಿಭಿನ್ನ ಚಲನ್ಗಳನ್ನು ಪರವಾನಗಿ ಸಂಖ್ಯೆ ಮತ್ತು ವಾಹನ ಸಂಖ್ಯೆ ಎರಡನ್ನು ಪ್ರತ್ಯೇಕವಾಗಿ ಬಳಸಿ ನೀಡಿರುತ್ತಾರೆ ಎಂಬುದನ್ನು ಗಮನಿಸಬೇಕು. ಆನ್ಲೈನ್ನಲ್ಲಿ ಉತ್ಪತ್ತಿಯಾಗುವ ಚಲನ್ ವಿವರಗಳನ್ನು ಪಡೆಯಲು ಎರಡು ವಿವರಗಳನ್ನು ಬಳಸಬಹುದು.
ಚಲನ್ ವಿವರಗಳನ್ನು ಜನರೇಟ್ ಮಾಡಿದ ನಂತರ, ಆನ್ಲೈನ್ನಲ್ಲಿ ಪಾವತಿ ಮಾಡಲು ‘ಈಗ ಪಾವತಿಸಿ' ಆಯ್ಕೆಯನ್ನು ಕ್ಲಿಕ್ ಮಾಡಿ. ಬಳಿಕ ವಹಿವಾಟನ್ನು ಪ್ರಾರಂಭಿಸಲು, ನಿಮ್ಮ ಸಂಖ್ಯೆಗೆ ಕಳುಹಿಸಲಾದ ಒಟಿಪಿಯನ್ನು ನಿಮ್ಮ ಮೊಬೈಲ್ ಸಂಖ್ಯೆಯೊಂದಿಗೆ ಪರಿಶೀಲಿಸಬೇಕಾಗುತ್ತದೆ. ಈ ಹಂತದಲ್ಲಿ, ನಿಮ್ಮನ್ನು ನಿಮ್ಮ ರಾಜ್ಯದ ಇ-ಚಲನ್ ಪಾವತಿ ವೆಬ್ಸೈಟ್ಗೆ ಕೊಂಡೊಯ್ಯಲಾಗುತ್ತದೆ.

ಮೇಲಿನ ಹಂತ ಮುಗಿದ ನಂತರ, ನೀವು ಪಾವತಿಸಿದ ಬಗ್ಗೆ ದೃಢೀಕರಣವನ್ನು ನೋಡುತ್ತೀರಿ. ಇಲ್ಲಿ ‘‘Proceed with Net Payment'' ಆಯ್ಕೆಯನ್ನು ಕ್ಲಿಕ್ ಮಾಡಿ, ನಿಮ್ಮ ಆದ್ಯತೆಯ ಪೇಮೆಂಟ್ ಗೇಟ್ವೇ ಆಯ್ಕೆಮಾಡಿ. ಇಲ್ಲಿ ನಿಮಗೆ ನೆಟ್ ಬ್ಯಾಂಕಿಂಗ್, ಕಾರ್ಡ್ ಪಾವತಿ ಮತ್ತಿತರ ಇತರ ಪಾವತಿ ವಿಧಾನಗಳು ಲಭ್ಯವಿದ್ದು, ನಿಮ್ಮ ಇಷ್ಟದ ಪಾವತಿ ವಿಧಾನದಲ್ಲಿ ದಂಡ ಪಾವತಿಸಬಹುದು.
This News Article Is A Copy Of Vijaya Karnataka
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm