ಬ್ರೇಕಿಂಗ್ ನ್ಯೂಸ್
29-03-21 11:29 am Source: Vijaya Karnataka ಡಿಜಿಟಲ್ ಟೆಕ್
ಸಾಮಾನ್ಯವಾಗಿ ಸಂಚಾರ ಪೊಲೀಸ್ ಅಧಿಕಾರಿಗಳು ಸಹ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಇ-ಚಲನ್ ನೀಡುತ್ತಾರೆ. ಈ ಚಲನ್ನ್ನು ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಪಾವತಿಸಬಹುದು.
ಸದ್ಯ ದೇಶದೆಲ್ಲಡೆ ಕೊರೋನಾ ವೈರಸ್ ಎರಡನೇ ಅಲೆ ಆವರಿಸಿದ್ದು, ಮಾಸ್ಕ್ ಹಾಕದೇ ಇದ್ದಾಗ ಅಥವಾ ಹೆಲ್ಮೆಟ್ ಹಾಕಿದ್ದರೂ ಮಾಸ್ಕ್ ಧರಿಸಿದೆ ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿದರೆ ಭಾರೀ ಪ್ರಮಾಣದಲ್ಲಿ ದಂಡ ವಿಧಿಸಲಾಗುತ್ತಿದೆ. ಆದರೂ ಕೇಂದ್ರ ಸರ್ಕಾರದ ಈ ಕ್ರಮಕ್ಕೆ ಸಾರ್ವಜನಿಕವಾಗಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕೇವಲ ಸಾಂವಿಧಾನಿಕ ಬದಲಾವಣೆ ಅಷ್ಟೇ ಅಲ್ಲದೇ ಸಂಚಾರ ನಿಯಮ ಉಲ್ಲಂಘನೆ ಪತ್ತೆಹಚ್ಚಲು ರಸ್ತೆಗಳಲ್ಲಿ ಕ್ಯಾಮೆರಾಗಳನ್ನು ಸಹ ಅಳವಡಿಸಲಾಗಿದ್ದು,

ಸಾಮಾನ್ಯವಾಗಿ ಸಂಚಾರ ಪೊಲೀಸ್ ಅಧಿಕಾರಿಗಳು ಸಹ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಇ-ಚಲನ್ ನೀಡುತ್ತಾರೆ. ಈ ಚಲನ್ನ್ನು ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಪಾವತಿಸಬಹುದು. ಹಾಗಿದ್ರೇ, ಟ್ರಾಫಿಕ್ ಇ-ಚಲನ್ನ್ನು ಆನ್ಲೈನ್ನಲ್ಲಿ ಪಾವತಿಸುವುದು ಹೇಗೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಮೊದಲು ಮೊಬೈಲ್ ಅಥವಾ ಡೆಸ್ಕ್ಟಾಪ್ನಲ್ಲಿ https://echallan.parivahan.gov.in ವೆಬ್ಸೈಟ್ಗೆ ಭೇಟಿ ನೀಡಿ. ಈ ವೆಬ್ಸೈಟ್ ಒನ್ ನೇಷನ್ ಒನ್ ಚಲನ್ ಉಪಕ್ರಮದಡಿ ಸೃಷ್ಟಿಯಾಗಿದ್ದು, ಇಲ್ಲಿ "ಚಲನ್ ಸ್ಥಿತಿ ಪರಿಶೀಲಿಸಿ" ಆಯ್ಕೆಯನ್ನು ಕ್ಲಿಕ್ ಮಾಡಿ.

ನೀವು ಲೈಸನ್ಸ್ ಸಂಖ್ಯೆ, ವಾಹನ ಸಂಖ್ಯೆ ಅಥವಾ ಚಲನ್ ಸಂಖ್ಯೆಯೊಂದಿಗೆ ದಂಡದ ಚಲನ್ಗಳನ್ನು ಹುಡುಕಬಹುದು. ನಿಮಗೆ ಈ ಮಾಹಿತಿಯ ಅಗತ್ಯವಿರುತ್ತದೆ. ಪ್ರಕ್ರಿಯೆಯಲ್ಲಿ ಮುಂದುವರಿಯಲು ಕ್ಯಾಪ್ಚಾ ನಮೂದಿಸಿ. ಮೇಲಿನ ಮೂರು ವಿವರಗಳಲ್ಲಿ ಒಂದನ್ನು ನಮೂದಿಸಿದ ನಂತರ, ದಂಡದ ಚಲನ್ ವಿವರಗಳು ಆನ್ಲೈನ್ನಲ್ಲಿ ಗೋಚರಿಸುತ್ತವೆ. ಕೆಲವೊಮ್ಮೆ ಎರಡು ವಿಭಿನ್ನ ಚಲನ್ಗಳನ್ನು ಪರವಾನಗಿ ಸಂಖ್ಯೆ ಮತ್ತು ವಾಹನ ಸಂಖ್ಯೆ ಎರಡನ್ನು ಪ್ರತ್ಯೇಕವಾಗಿ ಬಳಸಿ ನೀಡಿರುತ್ತಾರೆ ಎಂಬುದನ್ನು ಗಮನಿಸಬೇಕು. ಆನ್ಲೈನ್ನಲ್ಲಿ ಉತ್ಪತ್ತಿಯಾಗುವ ಚಲನ್ ವಿವರಗಳನ್ನು ಪಡೆಯಲು ಎರಡು ವಿವರಗಳನ್ನು ಬಳಸಬಹುದು.
ಚಲನ್ ವಿವರಗಳನ್ನು ಜನರೇಟ್ ಮಾಡಿದ ನಂತರ, ಆನ್ಲೈನ್ನಲ್ಲಿ ಪಾವತಿ ಮಾಡಲು ‘ಈಗ ಪಾವತಿಸಿ' ಆಯ್ಕೆಯನ್ನು ಕ್ಲಿಕ್ ಮಾಡಿ. ಬಳಿಕ ವಹಿವಾಟನ್ನು ಪ್ರಾರಂಭಿಸಲು, ನಿಮ್ಮ ಸಂಖ್ಯೆಗೆ ಕಳುಹಿಸಲಾದ ಒಟಿಪಿಯನ್ನು ನಿಮ್ಮ ಮೊಬೈಲ್ ಸಂಖ್ಯೆಯೊಂದಿಗೆ ಪರಿಶೀಲಿಸಬೇಕಾಗುತ್ತದೆ. ಈ ಹಂತದಲ್ಲಿ, ನಿಮ್ಮನ್ನು ನಿಮ್ಮ ರಾಜ್ಯದ ಇ-ಚಲನ್ ಪಾವತಿ ವೆಬ್ಸೈಟ್ಗೆ ಕೊಂಡೊಯ್ಯಲಾಗುತ್ತದೆ.

ಮೇಲಿನ ಹಂತ ಮುಗಿದ ನಂತರ, ನೀವು ಪಾವತಿಸಿದ ಬಗ್ಗೆ ದೃಢೀಕರಣವನ್ನು ನೋಡುತ್ತೀರಿ. ಇಲ್ಲಿ ‘‘Proceed with Net Payment'' ಆಯ್ಕೆಯನ್ನು ಕ್ಲಿಕ್ ಮಾಡಿ, ನಿಮ್ಮ ಆದ್ಯತೆಯ ಪೇಮೆಂಟ್ ಗೇಟ್ವೇ ಆಯ್ಕೆಮಾಡಿ. ಇಲ್ಲಿ ನಿಮಗೆ ನೆಟ್ ಬ್ಯಾಂಕಿಂಗ್, ಕಾರ್ಡ್ ಪಾವತಿ ಮತ್ತಿತರ ಇತರ ಪಾವತಿ ವಿಧಾನಗಳು ಲಭ್ಯವಿದ್ದು, ನಿಮ್ಮ ಇಷ್ಟದ ಪಾವತಿ ವಿಧಾನದಲ್ಲಿ ದಂಡ ಪಾವತಿಸಬಹುದು.
This News Article Is A Copy Of Vijaya Karnataka
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am