ಬ್ರೇಕಿಂಗ್ ನ್ಯೂಸ್
20-04-21 08:05 pm Source: MYKHEL ಡಿಜಿಟಲ್ ಟೆಕ್
ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಪ್ರಗ್ಯಾನ್ ಓಜಾ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅತ್ಯುತ್ತಮ ಯೋಜನೆಯನ್ನು ಹಾಕಿಕೊಂಡಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಡಿಸಿದ್ದಾರೆ. ಆದರೆ ಚೆಪಾಕ್ ಅಂಗಳದಲ್ಲಿ ಈ ಪಂದ್ಯ ನಡೆಯುತ್ತಿರುವುದು ಡೆಲ್ಲಿಗೆ ದೊಡ್ಡ ಸವಾಲಾಗಲಿದೆ ಎಂದು ಹೇಳಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡು ತಂಡಗಳು ಕೂಡ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿವೆ. ಆದರೆ ಡೆಲ್ಲಿ ತಂಡ ಚೆಪಾಕ್ ಅಂಗಳದಲ್ಲಿ ಈ ಬಾರಿ ಪ್ರಥಮ ಬಾರಿಗೆ ಆಡುತ್ತಿದೆ. ಆದರೆ ಮುಂಬೈ ಕಳೆದ ಮೂರು ಪಂದ್ಯಗಳನ್ನು ಕೂಡ ಇದೇ ಅಂಗಳದಲ್ಲಿ ಆಡಿರುವುದು ಡೆಲ್ಲಿ ವಿರುದ್ಧ ಮೇಲುಗೈ ಸಾಧಿಸಲು ಕಾರಣವಾಗಬಹುದು.
"ನನ್ನ ಅಭಿಪ್ರಾಯದ ಪ್ರಕಾರ ಮುಂಬೈ ತಂಡದ ವಿರುದ್ಧ ಕಳೆದ ಕೆಲ ಮುಖಾಮುಖಿಯಲ್ಲಿ ಸೋಲು ಕಂಡಿರುವುದರಿಂದ ಯಾವ ರೀತಿ ಆಡಬೇಕೆಂದು ಯೋಜನೆ ಹಾಕಿಕೊಂಡಿರುತ್ತೀರಿ. ತಂಡದಲ್ಲಿರುವ ರಿಕಿ ಪಾಂಟಿಂಗ್ ಮತ್ತು ಹಿರಿಯ ಸದಸ್ಯರು ಅದಕ್ಕೆ ಪೂರಕವಾಗಿ ತಂಡವನ್ನು ಸಿದ್ಧಗೊಳಿಸಿರುತ್ತಾರೆ" ಎಂದು ಓಜಾ ಹೇಳಿದ್ದಾರೆ.
"ಆದರೆ ಚೆಪಾಕ್ ಅಂಗಳದಲ್ಲಿ ಡೆಲ್ಲಿ ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಆಡುತ್ತಿರುವುದು ಅವರಿಗೆ ಸವಾಲಾಗಲಿದೆ. ಮುಂಬೈಗೆ ಹೋಲಿಸಿದರೆ ಇದು ಸಾಕಷ್ಟು ಭಿನ್ನವಾದ ಪಿಚ್ ಆಗಿದೆ" ಎಂದು ಓಜಾ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಮೂರು ಪಂದ್ಯಗಳನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಿತ್ತು.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಮಾರ್ಕಸ್ ಸ್ಟೋಯ್ನಿಸ್, ಶಿಮ್ರಾನ್ ಹೆಟ್ಮೇಯರ್, ಲಲಿತ್ ಯಾದವ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅಮಿತ್ ಮಿಶ್ರಾ, ಅವೇಶ್ ಖಾನ್
This News Article Is A Copy Of MYKHEL
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am