ಬ್ರೇಕಿಂಗ್ ನ್ಯೂಸ್
20-04-21 08:05 pm Source: MYKHEL ಡಿಜಿಟಲ್ ಟೆಕ್
ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಪ್ರಗ್ಯಾನ್ ಓಜಾ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅತ್ಯುತ್ತಮ ಯೋಜನೆಯನ್ನು ಹಾಕಿಕೊಂಡಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಡಿಸಿದ್ದಾರೆ. ಆದರೆ ಚೆಪಾಕ್ ಅಂಗಳದಲ್ಲಿ ಈ ಪಂದ್ಯ ನಡೆಯುತ್ತಿರುವುದು ಡೆಲ್ಲಿಗೆ ದೊಡ್ಡ ಸವಾಲಾಗಲಿದೆ ಎಂದು ಹೇಳಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡು ತಂಡಗಳು ಕೂಡ ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿವೆ. ಆದರೆ ಡೆಲ್ಲಿ ತಂಡ ಚೆಪಾಕ್ ಅಂಗಳದಲ್ಲಿ ಈ ಬಾರಿ ಪ್ರಥಮ ಬಾರಿಗೆ ಆಡುತ್ತಿದೆ. ಆದರೆ ಮುಂಬೈ ಕಳೆದ ಮೂರು ಪಂದ್ಯಗಳನ್ನು ಕೂಡ ಇದೇ ಅಂಗಳದಲ್ಲಿ ಆಡಿರುವುದು ಡೆಲ್ಲಿ ವಿರುದ್ಧ ಮೇಲುಗೈ ಸಾಧಿಸಲು ಕಾರಣವಾಗಬಹುದು.
"ನನ್ನ ಅಭಿಪ್ರಾಯದ ಪ್ರಕಾರ ಮುಂಬೈ ತಂಡದ ವಿರುದ್ಧ ಕಳೆದ ಕೆಲ ಮುಖಾಮುಖಿಯಲ್ಲಿ ಸೋಲು ಕಂಡಿರುವುದರಿಂದ ಯಾವ ರೀತಿ ಆಡಬೇಕೆಂದು ಯೋಜನೆ ಹಾಕಿಕೊಂಡಿರುತ್ತೀರಿ. ತಂಡದಲ್ಲಿರುವ ರಿಕಿ ಪಾಂಟಿಂಗ್ ಮತ್ತು ಹಿರಿಯ ಸದಸ್ಯರು ಅದಕ್ಕೆ ಪೂರಕವಾಗಿ ತಂಡವನ್ನು ಸಿದ್ಧಗೊಳಿಸಿರುತ್ತಾರೆ" ಎಂದು ಓಜಾ ಹೇಳಿದ್ದಾರೆ.
"ಆದರೆ ಚೆಪಾಕ್ ಅಂಗಳದಲ್ಲಿ ಡೆಲ್ಲಿ ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಆಡುತ್ತಿರುವುದು ಅವರಿಗೆ ಸವಾಲಾಗಲಿದೆ. ಮುಂಬೈಗೆ ಹೋಲಿಸಿದರೆ ಇದು ಸಾಕಷ್ಟು ಭಿನ್ನವಾದ ಪಿಚ್ ಆಗಿದೆ" ಎಂದು ಓಜಾ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಮೂರು ಪಂದ್ಯಗಳನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಿತ್ತು.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಮಾರ್ಕಸ್ ಸ್ಟೋಯ್ನಿಸ್, ಶಿಮ್ರಾನ್ ಹೆಟ್ಮೇಯರ್, ಲಲಿತ್ ಯಾದವ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅಮಿತ್ ಮಿಶ್ರಾ, ಅವೇಶ್ ಖಾನ್
This News Article Is A Copy Of MYKHEL
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
07-01-26 12:10 pm
Mangalore Correspondent
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm