ಬ್ರೇಕಿಂಗ್ ನ್ಯೂಸ್
24-04-21 05:20 pm Source: Gizbot Bureau ಡಿಜಿಟಲ್ ಟೆಕ್
ಭಾರತದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹೆಚ್ಚಾಗುತ್ತಿದೆ. ಇದರ ನಡುವೆ ಕೋವಿಡ್ ವ್ಯಾಕ್ಸಿನೇಶನ್ ಅಭಿಯಾನವೂ ಕೂಡ ಸಾಗುತ್ತಿದೆ. ಇಷ್ಟು ದಿನ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಕೊರೊನಾ ಲಸಿಕೆ ಅಭಿಯಾನ ನಡೆಸಿದ ಸರ್ಕಾರ ಇದೀಗ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಅಭಿಯಾನಕ್ಕೆ ಮುಂದಾಗಿದೆ. ಈ ಅಭಿಯಾನವೂ ಇದೇ ಏಪ್ರಿಲ್ 28, ಬುಧವಾರದಿಂದ ಪ್ರಾರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.
ಹೌದು, ಕೋವಿಡ್ ವ್ಯಾಕ್ಸಿನೇಶನ್ ಅಭಿಯಾನದಲ್ಲಿ ಇದೀಗ 18 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆದುಕೊಳ್ಳಬಹುದು. ಇದಕ್ಕಾಗಿ ಕೋವಿನ್ ಅಪ್ಲಿಕೇಶನ್ ಮತ್ತು ಕೋವಿಡ್ ಪೋರ್ಟಲ್ ಮೂಲಕ ಲಸಿಕೆಗಾಗಿ ನೊಂದಣಿ ಮಾಡಿಸಿಕೊಳ್ಳಬೇಕಿದೆ. ಅಲ್ಲದೆ ಲಸಿಕೆ ಪಡೆದ ನಂತರ ಇದೇ ಪೋರ್ಟಲ್ಗಳ ಮೂಲಕ ಫಲಾನುಭವಿಗಳು ಕೋವಿಡ್ 19 ಲಸಿಕೆ ಪ್ರಮಾಣವನ್ನು ನೋಂದಾಯಿಸಲು ಸಾಧ್ಯವಾಗುತ್ತದೆ. ಆರೋಗ್ಯಾ ಸೇತು ಆಪ್ ಮೂಲಕ ನೋಂದಣಿ ಮಾಡಲು ಏಪ್ರಿಲ್ 28 ರಿಂದ ಪ್ರಾರಂಭವಾಗಲಿದೆ. ಹಾಗಾದ್ರೆ 18 ವರ್ಷ ಮೇಲ್ಪಟ್ಟ ಯುವ ಜನತೆ ಕೋವಿನ್ ವ್ಯಾಕ್ಸಿನ್ ಲಸಿಕೆ ತೆಗೆದುಕೊಳ್ಳಲು ಹೇಗೆ ನೊಂದಾಯಿಸಿಕೊಳ್ಳುವುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

18 ವರ್ಷ ಮೇಲ್ಪಟ್ಟವರಿಗೆ ಕೊವೀಡ್ ವ್ಯಾಕ್ಸಿನೇಶನ್ ತೆಗೆದುಕೊಳ್ಳಲು ಸರ್ಕಾರ ಅವಕಾಶ ನೀಡಿದೆ. ಈ ಅಭಿಯಾನವೂ ಇದೇ ಏಪ್ರಿಲ್ 28 ಪ್ರಾರಂಭವಾಗಲಿದೆ. ಆದರೆ ವ್ಯಾಕ್ಸಿನೇಷನ್ನ ಮೊದಲ ಮತ್ತು ಎರಡನೆಯ ಹಂತದಂತಲ್ಲದೆ, ಈ ವಯಸ್ಸಿನವರಿಗೆ ಯಾವುದೇ ವಾಕ್-ಇನ್ ನೋಂದಣಿ ಇರುವುದಿಲ್ಲ. ಇದು ಕೇವಲ ಪ್ರೀ ಬುಕಿಂಗ್ ಆಗಿರಲಿದೆ. ಕೋವಿಡ್ 19 ವ್ಯಾಕ್ಸಿನೇಷನ್ ಮೂರನೇ ಹಂತವನ್ನು ಮೇ 1 ರಿಂದ ನಿಗದಿಪಡಿಸಲಾಗಿದೆ. ನಂತರ 18 ವರ್ಷಕ್ಕಿಂತ ಮೇಲ್ಪಟ್ಟವರು, ರಾಜ್ಯಗಳು ಮತ್ತು ಖಾಸಗಿ ಸಂಸ್ಥೆಗಳು ಚುಚ್ಚುಮದ್ದಿನ ತಯಾರಕರಿಗೆ ನೇರವಾಗಿ ಲಸಿಕೆಗಳನ್ನು ಖರೀದಿಸಬಹುದು.

ಕೋವಿಡ್ ನೋಂದಣಿ: ಲಸಿಕೆಗಾಗಿ ನೋಂದಾಯಿಸುವುದು ಹೇಗೆ? ಕೋವಿನ್ ಅಪ್ಲಿಕೇಶನ್ ಮೂಲಕ ಕೋವಿಡ್ 19 ಲಸಿಕೆಗಾಗಿ ನೋಂದಣಿ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ.
ಹಂತ:1 ಕೋವಿನ್ ಪೋರ್ಟಲ್ಗೆ ಭೇಟಿ ನೀಡಿ: https://www.cowin.gov.in/home. ಇದು ಅಲ್ಲಿರುವ ಎಲ್ಲ ಬ್ರೌಸರ್ಗಳೊಂದಿಗೆ ಹೊಂದಿಕೊಳ್ಳುತ್ತದೆ. ಫಲಾನುಭವಿಗಳು ತಮ್ಮ ಆಂಡ್ರಾಯ್ಡ್ ಮೊಬೈಲ್ ಫೋನ್ಗಳಲ್ಲಿ ಗೂಗಲ್ ಪ್ಲೇ ಸ್ಟೋರ್ನಿಂದ ಕೋವಿನ್ 2.0 ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಐಫೋನ್ ಬಳಕೆದಾರರಿಗೆ ಈ ಸೌಲಭ್ಯ ಇನ್ನೂ ಲಭ್ಯವಿಲ್ಲ
ಹಂತ:2 ಕೋವಿನ್ 2.0 ಪೋರ್ಟಲ್ನ ಹೋಮ್ಪೇಜ್ನಿಂದ, ‘ನಿಮ್ಮ ಹತ್ತಿರದ ವ್ಯಾಕ್ಸಿನೇಷನ್ ಕೇಂದ್ರವನ್ನು ಹುಡುಕಿ' ವಿಭಾಗಕ್ಕೆ ಕೆಳಗೆ ಸ್ಕ್ರಾಲ್ ಮಾಡಿ
ಹಂತ:3 ನೀವು ವಾಸಿಸುವ ಸ್ಥಳ ಮತ್ತು ವಿಳಾಸವನ್ನು ನಮೂದಿಸಿ ಅಥವಾ ಹತ್ತಿರದ ವ್ಯಾಕ್ಸಿನೇಷನ್ ಕೇಂದ್ರದ ವಿವರಗಳನ್ನು ಪಡೆಯಲು ‘ಪ್ರಸ್ತುತ ಸ್ಥಳ' ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ಹಂತ:4 ಈಗ, ಮುಂದುವರಿಯಲು ‘ರಿಜಿಸ್ಟರ್ ಯುವರ್ ಸೆಲ್ಫ್' ಬಟನ್ ಕ್ಲಿಕ್ ಮಾಡಿ ಮತ್ತು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ
ಹಂತ:5 ನಿಮ್ಮ ಖಾತೆಯನ್ನು ರಚಿಸುವ OTP ಅನ್ನು ನೀವು ಪಡೆಯುತ್ತೀರಿ ಹಂತ:6 ವಿವರಗಳನ್ನು ಭರ್ತಿ ಮಾಡಿ ಮತ್ತು ಗುರುತಿನ ದಾಖಲೆಗಳನ್ನು ಅಪ್ಲೋಡ್ ಮಾಡಿ ಹಂತ:7 ಲಸಿಕೆಗಾಗಿ ಅಪಾಯಿಂಟ್ಮೆಂಟ್ ಅನ್ನು ಸರ್ಕಾರಿ ಮತ್ತು ಖಾಸಗಿ ಸೌಲಭ್ಯಗಳಲ್ಲಿ ಕಾಯ್ದಿರಿಸಲು ಫಲಾನುಭವಿಗಳಿಗೆ ಅವಕಾಶ ಸಿಗುತ್ತದೆ.

ಒಂದು ವೇಳೆ, ಕೋವಿನ್ 2.0 ಮೂಲಕ COVID-19 ಲಸಿಕೆಗಾಗಿ ನೋಂದಾಯಿಸಲು ನಿಮಗೆ ಸಾಧ್ಯವಾಗದಿದ್ದರೆ, ಆರೋಗ್ಯಾ ಸೇತು ಅಪ್ಲಿಕೇಶನ್ ಬಳಸಿ. ಸರ್ಕಾರದ ಆರೋಗ್ಯ ಸೇವಾ ಅಪ್ಲಿಕೇಶನ್ ಫಲಾನುಭವಿಗಳಿಗೆ ಒಟಿಪಿ ಮೂಲಕ ದಾಖಲೆ ಪರಿಶೀಲಿಸುವ ಮೂಲಕ ತಮ್ಮನ್ನು ನೋಂದಾಯಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಆರೋಗ್ಯ ಸೇತು ಅಪ್ಲಿಕೇಶನ್ ಮೂಲಕ ಕೋವಿಡ್ ಲಸಿಕೆಗಾಗಿ ನೋಂದಾಯಿಸುವುದು ಹೇಗೆ?
ಹಂತ:1 ಆರೋಗ್ಯ ಸೇತು ಅಪ್ಲಿಕೇಶನ್ ಮೇನ್ ಮೆನುವಿನಿಂದ COVID ಅಪ್ಡೇಟ್ ಪಕ್ಕದಲ್ಲಿರುವ ‘CoWIN' ಆಯ್ಕೆಯನ್ನು ಟ್ಯಾಪ್ ಮಾಡಿ
ಹಂತ:2 ಇದರಲ್ಲಿ ಎರಡನೆಯ ‘ವ್ಯಾಕ್ಸಿನೇಷನ್' ಟ್ಯಾಪ್ ಮಾಡಿ ಮತ್ತು ‘ಈಗ ನೋಂದಾಯಿಸಿ' ಆಯ್ಕೆಮಾಡಿ. ನೀವು ಈಗಾಗಲೇ ನೋಂದಾಯಿಸಿದ್ದರೆ, ‘ಲಾಗಿನ್' ಆಯ್ಕೆಮಾಡಿ
ಹಂತ:3 ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು ‘ಪರಿಶೀಲಿಸಲು ಮುಂದುವರಿಯಿರಿ'
ಹಂತ:4 ಒಟಿಪಿಯನ್ನು ಸಂಖ್ಯೆಗೆ ಕಳುಹಿಸಲಾಗುತ್ತದೆ
ಹಂತ:5 ನಿಮ್ಮ ವಿವರಗಳು, ಇನಾಕ್ಯುಲೇಷನ್ ಸೆಂಟರ್ ಮತ್ತು ಹೆಚ್ಚಿನದನ್ನು ನಮೂದಿಸಲು ಒಟಿಪಿ ಬಳಸಿ
This News Article Is A Copy Of GIZBOT BUREAU
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm