ಬ್ರೇಕಿಂಗ್ ನ್ಯೂಸ್
01-05-21 03:24 pm Headline Karnataka News Network ಡಿಜಿಟಲ್ ಟೆಕ್
Photo credits : Gadgets
ಇಡೀ ವಿಶ್ವ ಕೊರೊನಾ ಎರಡನೇ ಅಲೆ ವಿರುದ್ಧ ಹೋರಾಡುತ್ತಿದೆ. ಅದರಲ್ಲೂ ಈ ಬಾರಿ ಕೊರೊನಾಕ್ಕೆ ಅತ್ಯಂತ ಹೆಚ್ಚು ತತ್ತರಿಸಿರುವ ರಾಷ್ಟ್ರ ಭಾರತ. ಬರೀ ಕೊರೊನಾ ಸೋಂಕು ಉಲ್ಬಣಗೊಂಡಿರುವುದಷ್ಟೇ ಅಲ್ಲ, ಅದರೊಂದಿಗೆ ಆಕ್ಸಿಜನ್ ಅಭಾವ, ಬೆಡ್ಗಳ ಕೊರತೆಯಂಥ ಸಮಸ್ಯೆಗಳೂ ತಲೆದೋರಿವೆ. ಅದರ ಮಧ್ಯೆ ಇಂದು ಮೂರನೇ ಹಂತದ ಲಸಿಕೆ ವಿತರಣೆ ಶುರುವಾಗಬೇಕಿತ್ತು. ಆದರೆ ಕೊವಿಡ್ 19 ವ್ಯಾಕ್ಸಿನ್ಗಳ ಅಭಾವ ಉಂಟಾಗಿರುವ ಕಾರಣಕ್ಕೆ ಇಂದು ಎಲ್ಲ ರಾಜ್ಯಗಳಲ್ಲೂ ಲಸಿಕೆ ನೀಡಲು ಸಾಧ್ಯವಾಗುತ್ತಿಲ್ಲ.

ಆದರೆ ಮಾರಣಾಂತಿಕವಾದ ಈ ವೈರಸ್ನಿಂದ ಪಾರಾಗಲು ಲಸಿಕೆ ಪಡೆಯುವುದೊಂದೇ ಮಾರ್ಗ ಎಂದು ವಿಶ್ವ ಆರೋಗ್ಯ ಸಂಸ್ಥೆ ಸೇರಿ, ಹಲವು ಪ್ರಮುಖ ತಜ್ಞರು, ಸಂಶೋಧಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜನರು ಸ್ವಯಂ ಪ್ರೇರಿತರಾಗಿ ಬಂದು ಲಸಿಕೆ ಪಡೆಯಬೇಕು ಎಂದು ಅರಿವು ಮೂಡಿಸುತ್ತಿದ್ದಾರೆ. ಇದೀಗ ಗೂಗಲ್ ಕೂಡ ತನ್ನ ಡೂಡಲ್ ಮೂಲಕ ಲಸಿಕೆ ಪಡೆಯುವಂತೆ ಜನರನ್ನು ಪ್ರೇರೇಪಿಸುತ್ತಿದೆ.

ವಿಶ್ವದಾದ್ಯಂತ ಅನೇಕ ರಾಷ್ಟ್ರಗಳಲ್ಲಿ ಕೊವಿಡ್ 19 ಲಸಿಕೆ ಅಭಿಯಾನ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದು ಇನ್ನಷ್ಟು ವೇಗವಾಗಿ ನಡೆದರೆ ಇನ್ನೂ ಒಳಿತು ಎಂಬುದು ತಜ್ಞರ ಅನಿಸಿಕೆ. ಕಳೆದವರ್ಷ ಕೊರೊನಾ ಸೋಂಕು ಶುರುವಾದಾಗಿನಿಂದಲೂ ಗೂಗಲ್ ತನ್ನ ಡೂಡಲ್ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ಜನರನ್ನು ಎಚ್ಚರಿಸುತ್ತಿದೆ. ಇದೀಗ ಲಸಿಕೆಯನ್ನು ಪಡೆಯಲು ಪ್ರೇರೇಪಿಸಿದೆ. GOOGLE ಎಂಬ ಶಬ್ದದ ಎಲ್ಲ ಅಕ್ಷರಗಳಿಗೂ ಫೇಸ್ ಮಾಸ್ಕ್ ಹಾಕಿ, ಲಸಿಕೆ ಪಡೆದ ಸಂಕೇತವಾದ ಬ್ಯಾಂಡ್ ತೊಟ್ಟಿರುವಂತೆ ಚಿತ್ರಿಸಲಾಗಿದೆ. ಅಷ್ಟೇ ಅಲ್ಲ ಎಲ್ಲ ಅಕ್ಷರಗಳೂ ಲಸಿಕೆ ಪಡೆದು ತುಂಬ ಖುಷಿಯಾಗಿರುವಂತೆ ರಚಿಸಲಾಗಿದೆ.

ಹಾಗೇ, ಈ ಡೂಡಲ್ ಮೇಲೆ ಕ್ಲಿಕ್ ಮಾಡಿದರೆ ಲಸಿಕೆ ಪಡೆಯಿರಿ, ಮಾಸ್ಕ್ ಧರಿಸಿ, ಜೀವ ರಕ್ಷಿಸಿಕೊಳ್ಳಿ ಎಂಬ ಸಂದೇಶವನ್ನು ನೋಡಬಹುದು.
Google displayed a new doodle across many countries on May 1 to promote vaccination against COVID-19. The doodle was visible on the search engine across India, Canada, the United States, United Kingdom, Pakistan and Indonesia, among other countries.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm