ಬ್ರೇಕಿಂಗ್ ನ್ಯೂಸ್
01-05-21 03:24 pm Headline Karnataka News Network ಡಿಜಿಟಲ್ ಟೆಕ್
Photo credits : Gadgets
ಇಡೀ ವಿಶ್ವ ಕೊರೊನಾ ಎರಡನೇ ಅಲೆ ವಿರುದ್ಧ ಹೋರಾಡುತ್ತಿದೆ. ಅದರಲ್ಲೂ ಈ ಬಾರಿ ಕೊರೊನಾಕ್ಕೆ ಅತ್ಯಂತ ಹೆಚ್ಚು ತತ್ತರಿಸಿರುವ ರಾಷ್ಟ್ರ ಭಾರತ. ಬರೀ ಕೊರೊನಾ ಸೋಂಕು ಉಲ್ಬಣಗೊಂಡಿರುವುದಷ್ಟೇ ಅಲ್ಲ, ಅದರೊಂದಿಗೆ ಆಕ್ಸಿಜನ್ ಅಭಾವ, ಬೆಡ್ಗಳ ಕೊರತೆಯಂಥ ಸಮಸ್ಯೆಗಳೂ ತಲೆದೋರಿವೆ. ಅದರ ಮಧ್ಯೆ ಇಂದು ಮೂರನೇ ಹಂತದ ಲಸಿಕೆ ವಿತರಣೆ ಶುರುವಾಗಬೇಕಿತ್ತು. ಆದರೆ ಕೊವಿಡ್ 19 ವ್ಯಾಕ್ಸಿನ್ಗಳ ಅಭಾವ ಉಂಟಾಗಿರುವ ಕಾರಣಕ್ಕೆ ಇಂದು ಎಲ್ಲ ರಾಜ್ಯಗಳಲ್ಲೂ ಲಸಿಕೆ ನೀಡಲು ಸಾಧ್ಯವಾಗುತ್ತಿಲ್ಲ.

ಆದರೆ ಮಾರಣಾಂತಿಕವಾದ ಈ ವೈರಸ್ನಿಂದ ಪಾರಾಗಲು ಲಸಿಕೆ ಪಡೆಯುವುದೊಂದೇ ಮಾರ್ಗ ಎಂದು ವಿಶ್ವ ಆರೋಗ್ಯ ಸಂಸ್ಥೆ ಸೇರಿ, ಹಲವು ಪ್ರಮುಖ ತಜ್ಞರು, ಸಂಶೋಧಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜನರು ಸ್ವಯಂ ಪ್ರೇರಿತರಾಗಿ ಬಂದು ಲಸಿಕೆ ಪಡೆಯಬೇಕು ಎಂದು ಅರಿವು ಮೂಡಿಸುತ್ತಿದ್ದಾರೆ. ಇದೀಗ ಗೂಗಲ್ ಕೂಡ ತನ್ನ ಡೂಡಲ್ ಮೂಲಕ ಲಸಿಕೆ ಪಡೆಯುವಂತೆ ಜನರನ್ನು ಪ್ರೇರೇಪಿಸುತ್ತಿದೆ.

ವಿಶ್ವದಾದ್ಯಂತ ಅನೇಕ ರಾಷ್ಟ್ರಗಳಲ್ಲಿ ಕೊವಿಡ್ 19 ಲಸಿಕೆ ಅಭಿಯಾನ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದು ಇನ್ನಷ್ಟು ವೇಗವಾಗಿ ನಡೆದರೆ ಇನ್ನೂ ಒಳಿತು ಎಂಬುದು ತಜ್ಞರ ಅನಿಸಿಕೆ. ಕಳೆದವರ್ಷ ಕೊರೊನಾ ಸೋಂಕು ಶುರುವಾದಾಗಿನಿಂದಲೂ ಗೂಗಲ್ ತನ್ನ ಡೂಡಲ್ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ಜನರನ್ನು ಎಚ್ಚರಿಸುತ್ತಿದೆ. ಇದೀಗ ಲಸಿಕೆಯನ್ನು ಪಡೆಯಲು ಪ್ರೇರೇಪಿಸಿದೆ. GOOGLE ಎಂಬ ಶಬ್ದದ ಎಲ್ಲ ಅಕ್ಷರಗಳಿಗೂ ಫೇಸ್ ಮಾಸ್ಕ್ ಹಾಕಿ, ಲಸಿಕೆ ಪಡೆದ ಸಂಕೇತವಾದ ಬ್ಯಾಂಡ್ ತೊಟ್ಟಿರುವಂತೆ ಚಿತ್ರಿಸಲಾಗಿದೆ. ಅಷ್ಟೇ ಅಲ್ಲ ಎಲ್ಲ ಅಕ್ಷರಗಳೂ ಲಸಿಕೆ ಪಡೆದು ತುಂಬ ಖುಷಿಯಾಗಿರುವಂತೆ ರಚಿಸಲಾಗಿದೆ.

ಹಾಗೇ, ಈ ಡೂಡಲ್ ಮೇಲೆ ಕ್ಲಿಕ್ ಮಾಡಿದರೆ ಲಸಿಕೆ ಪಡೆಯಿರಿ, ಮಾಸ್ಕ್ ಧರಿಸಿ, ಜೀವ ರಕ್ಷಿಸಿಕೊಳ್ಳಿ ಎಂಬ ಸಂದೇಶವನ್ನು ನೋಡಬಹುದು.
Google displayed a new doodle across many countries on May 1 to promote vaccination against COVID-19. The doodle was visible on the search engine across India, Canada, the United States, United Kingdom, Pakistan and Indonesia, among other countries.
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
15-12-25 08:12 pm
HK News Desk
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
15-12-25 05:40 pm
Mangalore Correspondent
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm