ಬ್ರೇಕಿಂಗ್ ನ್ಯೂಸ್
01-05-21 03:24 pm Headline Karnataka News Network ಡಿಜಿಟಲ್ ಟೆಕ್
Photo credits : Gadgets
ಇಡೀ ವಿಶ್ವ ಕೊರೊನಾ ಎರಡನೇ ಅಲೆ ವಿರುದ್ಧ ಹೋರಾಡುತ್ತಿದೆ. ಅದರಲ್ಲೂ ಈ ಬಾರಿ ಕೊರೊನಾಕ್ಕೆ ಅತ್ಯಂತ ಹೆಚ್ಚು ತತ್ತರಿಸಿರುವ ರಾಷ್ಟ್ರ ಭಾರತ. ಬರೀ ಕೊರೊನಾ ಸೋಂಕು ಉಲ್ಬಣಗೊಂಡಿರುವುದಷ್ಟೇ ಅಲ್ಲ, ಅದರೊಂದಿಗೆ ಆಕ್ಸಿಜನ್ ಅಭಾವ, ಬೆಡ್ಗಳ ಕೊರತೆಯಂಥ ಸಮಸ್ಯೆಗಳೂ ತಲೆದೋರಿವೆ. ಅದರ ಮಧ್ಯೆ ಇಂದು ಮೂರನೇ ಹಂತದ ಲಸಿಕೆ ವಿತರಣೆ ಶುರುವಾಗಬೇಕಿತ್ತು. ಆದರೆ ಕೊವಿಡ್ 19 ವ್ಯಾಕ್ಸಿನ್ಗಳ ಅಭಾವ ಉಂಟಾಗಿರುವ ಕಾರಣಕ್ಕೆ ಇಂದು ಎಲ್ಲ ರಾಜ್ಯಗಳಲ್ಲೂ ಲಸಿಕೆ ನೀಡಲು ಸಾಧ್ಯವಾಗುತ್ತಿಲ್ಲ.

ಆದರೆ ಮಾರಣಾಂತಿಕವಾದ ಈ ವೈರಸ್ನಿಂದ ಪಾರಾಗಲು ಲಸಿಕೆ ಪಡೆಯುವುದೊಂದೇ ಮಾರ್ಗ ಎಂದು ವಿಶ್ವ ಆರೋಗ್ಯ ಸಂಸ್ಥೆ ಸೇರಿ, ಹಲವು ಪ್ರಮುಖ ತಜ್ಞರು, ಸಂಶೋಧಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜನರು ಸ್ವಯಂ ಪ್ರೇರಿತರಾಗಿ ಬಂದು ಲಸಿಕೆ ಪಡೆಯಬೇಕು ಎಂದು ಅರಿವು ಮೂಡಿಸುತ್ತಿದ್ದಾರೆ. ಇದೀಗ ಗೂಗಲ್ ಕೂಡ ತನ್ನ ಡೂಡಲ್ ಮೂಲಕ ಲಸಿಕೆ ಪಡೆಯುವಂತೆ ಜನರನ್ನು ಪ್ರೇರೇಪಿಸುತ್ತಿದೆ.

ವಿಶ್ವದಾದ್ಯಂತ ಅನೇಕ ರಾಷ್ಟ್ರಗಳಲ್ಲಿ ಕೊವಿಡ್ 19 ಲಸಿಕೆ ಅಭಿಯಾನ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದು ಇನ್ನಷ್ಟು ವೇಗವಾಗಿ ನಡೆದರೆ ಇನ್ನೂ ಒಳಿತು ಎಂಬುದು ತಜ್ಞರ ಅನಿಸಿಕೆ. ಕಳೆದವರ್ಷ ಕೊರೊನಾ ಸೋಂಕು ಶುರುವಾದಾಗಿನಿಂದಲೂ ಗೂಗಲ್ ತನ್ನ ಡೂಡಲ್ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ಜನರನ್ನು ಎಚ್ಚರಿಸುತ್ತಿದೆ. ಇದೀಗ ಲಸಿಕೆಯನ್ನು ಪಡೆಯಲು ಪ್ರೇರೇಪಿಸಿದೆ. GOOGLE ಎಂಬ ಶಬ್ದದ ಎಲ್ಲ ಅಕ್ಷರಗಳಿಗೂ ಫೇಸ್ ಮಾಸ್ಕ್ ಹಾಕಿ, ಲಸಿಕೆ ಪಡೆದ ಸಂಕೇತವಾದ ಬ್ಯಾಂಡ್ ತೊಟ್ಟಿರುವಂತೆ ಚಿತ್ರಿಸಲಾಗಿದೆ. ಅಷ್ಟೇ ಅಲ್ಲ ಎಲ್ಲ ಅಕ್ಷರಗಳೂ ಲಸಿಕೆ ಪಡೆದು ತುಂಬ ಖುಷಿಯಾಗಿರುವಂತೆ ರಚಿಸಲಾಗಿದೆ.

ಹಾಗೇ, ಈ ಡೂಡಲ್ ಮೇಲೆ ಕ್ಲಿಕ್ ಮಾಡಿದರೆ ಲಸಿಕೆ ಪಡೆಯಿರಿ, ಮಾಸ್ಕ್ ಧರಿಸಿ, ಜೀವ ರಕ್ಷಿಸಿಕೊಳ್ಳಿ ಎಂಬ ಸಂದೇಶವನ್ನು ನೋಡಬಹುದು.
Google displayed a new doodle across many countries on May 1 to promote vaccination against COVID-19. The doodle was visible on the search engine across India, Canada, the United States, United Kingdom, Pakistan and Indonesia, among other countries.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am