ಬ್ರೇಕಿಂಗ್ ನ್ಯೂಸ್
01-05-21 03:24 pm Headline Karnataka News Network ಡಿಜಿಟಲ್ ಟೆಕ್
Photo credits : Gadgets
ಇಡೀ ವಿಶ್ವ ಕೊರೊನಾ ಎರಡನೇ ಅಲೆ ವಿರುದ್ಧ ಹೋರಾಡುತ್ತಿದೆ. ಅದರಲ್ಲೂ ಈ ಬಾರಿ ಕೊರೊನಾಕ್ಕೆ ಅತ್ಯಂತ ಹೆಚ್ಚು ತತ್ತರಿಸಿರುವ ರಾಷ್ಟ್ರ ಭಾರತ. ಬರೀ ಕೊರೊನಾ ಸೋಂಕು ಉಲ್ಬಣಗೊಂಡಿರುವುದಷ್ಟೇ ಅಲ್ಲ, ಅದರೊಂದಿಗೆ ಆಕ್ಸಿಜನ್ ಅಭಾವ, ಬೆಡ್ಗಳ ಕೊರತೆಯಂಥ ಸಮಸ್ಯೆಗಳೂ ತಲೆದೋರಿವೆ. ಅದರ ಮಧ್ಯೆ ಇಂದು ಮೂರನೇ ಹಂತದ ಲಸಿಕೆ ವಿತರಣೆ ಶುರುವಾಗಬೇಕಿತ್ತು. ಆದರೆ ಕೊವಿಡ್ 19 ವ್ಯಾಕ್ಸಿನ್ಗಳ ಅಭಾವ ಉಂಟಾಗಿರುವ ಕಾರಣಕ್ಕೆ ಇಂದು ಎಲ್ಲ ರಾಜ್ಯಗಳಲ್ಲೂ ಲಸಿಕೆ ನೀಡಲು ಸಾಧ್ಯವಾಗುತ್ತಿಲ್ಲ.

ಆದರೆ ಮಾರಣಾಂತಿಕವಾದ ಈ ವೈರಸ್ನಿಂದ ಪಾರಾಗಲು ಲಸಿಕೆ ಪಡೆಯುವುದೊಂದೇ ಮಾರ್ಗ ಎಂದು ವಿಶ್ವ ಆರೋಗ್ಯ ಸಂಸ್ಥೆ ಸೇರಿ, ಹಲವು ಪ್ರಮುಖ ತಜ್ಞರು, ಸಂಶೋಧಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜನರು ಸ್ವಯಂ ಪ್ರೇರಿತರಾಗಿ ಬಂದು ಲಸಿಕೆ ಪಡೆಯಬೇಕು ಎಂದು ಅರಿವು ಮೂಡಿಸುತ್ತಿದ್ದಾರೆ. ಇದೀಗ ಗೂಗಲ್ ಕೂಡ ತನ್ನ ಡೂಡಲ್ ಮೂಲಕ ಲಸಿಕೆ ಪಡೆಯುವಂತೆ ಜನರನ್ನು ಪ್ರೇರೇಪಿಸುತ್ತಿದೆ.

ವಿಶ್ವದಾದ್ಯಂತ ಅನೇಕ ರಾಷ್ಟ್ರಗಳಲ್ಲಿ ಕೊವಿಡ್ 19 ಲಸಿಕೆ ಅಭಿಯಾನ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದು ಇನ್ನಷ್ಟು ವೇಗವಾಗಿ ನಡೆದರೆ ಇನ್ನೂ ಒಳಿತು ಎಂಬುದು ತಜ್ಞರ ಅನಿಸಿಕೆ. ಕಳೆದವರ್ಷ ಕೊರೊನಾ ಸೋಂಕು ಶುರುವಾದಾಗಿನಿಂದಲೂ ಗೂಗಲ್ ತನ್ನ ಡೂಡಲ್ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ಜನರನ್ನು ಎಚ್ಚರಿಸುತ್ತಿದೆ. ಇದೀಗ ಲಸಿಕೆಯನ್ನು ಪಡೆಯಲು ಪ್ರೇರೇಪಿಸಿದೆ. GOOGLE ಎಂಬ ಶಬ್ದದ ಎಲ್ಲ ಅಕ್ಷರಗಳಿಗೂ ಫೇಸ್ ಮಾಸ್ಕ್ ಹಾಕಿ, ಲಸಿಕೆ ಪಡೆದ ಸಂಕೇತವಾದ ಬ್ಯಾಂಡ್ ತೊಟ್ಟಿರುವಂತೆ ಚಿತ್ರಿಸಲಾಗಿದೆ. ಅಷ್ಟೇ ಅಲ್ಲ ಎಲ್ಲ ಅಕ್ಷರಗಳೂ ಲಸಿಕೆ ಪಡೆದು ತುಂಬ ಖುಷಿಯಾಗಿರುವಂತೆ ರಚಿಸಲಾಗಿದೆ.

ಹಾಗೇ, ಈ ಡೂಡಲ್ ಮೇಲೆ ಕ್ಲಿಕ್ ಮಾಡಿದರೆ ಲಸಿಕೆ ಪಡೆಯಿರಿ, ಮಾಸ್ಕ್ ಧರಿಸಿ, ಜೀವ ರಕ್ಷಿಸಿಕೊಳ್ಳಿ ಎಂಬ ಸಂದೇಶವನ್ನು ನೋಡಬಹುದು.
Google displayed a new doodle across many countries on May 1 to promote vaccination against COVID-19. The doodle was visible on the search engine across India, Canada, the United States, United Kingdom, Pakistan and Indonesia, among other countries.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm