ಬ್ರೇಕಿಂಗ್ ನ್ಯೂಸ್
18-06-21 11:49 am GIZBOT Mutthuraju H M ಡಿಜಿಟಲ್ ಟೆಕ್
ಭಾರತದಲ್ಲಿ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದ ಪಬ್ಜಿ ಗೇಮ್ ಕಳೆದ ವರ್ಷ ಬ್ಯಾನ್ ಆಗಿತ್ತು. ಸೆಪ್ಟೆಂಬರ್ 2020 ರಲ್ಲಿ ನಿಷೇಧಿಸಲ್ಪಟ್ಟ ನಂತರ ಇದೀಗ ಹೊಸ ಸ್ವರೂಪದಲ್ಲಿ ಬ್ಯಾಟಲ್ ಗ್ರೌಂಡ್ ಮೊಬೈಲ್ ಇಂಡಿಯಾ ಹೆಸರಿನಲ್ಲಿ ಭಾರತಕ್ಕೆ ರೀ ಎಂಟ್ರಿ ನೀಡಿದೆ. ಸದ್ಯ ಈ ಅಪ್ಲಿಕೇಶನ್ ಗೂಗಲ್ನ ಪ್ಲೇ ಸ್ಟೋರ್ನಲ್ಲಿ ಬೀಟಾ ಪರೀಕ್ಷಕರಿಗೆ ಡೌನ್ಲೋಡ್ ಮಾಡಲು ಲಭ್ಯವಿದೆ. ಅಲ್ಲದೆ ಗೇಮ್ನಲ್ಲಿ ಕೂಡ ಬದಲಾವಣೆ ಮಾಡಲಾಗಿದ್ದು, ಗ್ರೀನ್ ಬ್ಲಡ್ ಮತ್ತು ನ್ಯೂ ಅಕೌಂಟ್ ಸಿಸ್ಟಂ ನಲ್ಲಿ ಹೊಸ ಬದಲಾವಣೆ ತರಲಾಗಿದೆ.
ಹೌದು, ಪಬ್ಜಿ ಗೇಮ್ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಯುವಜನತೆಯ ನೆಚ್ಚಿನ ಗೇಮಿಂಗ್ ಅಪ್ಲಿಕೇಶನ್ ಆಗಿತ್ತು. ಆದರೆ ಪಬ್ಜಿ ಗೇಮ್ ಭಾರತ ದೇಶದ ಸಾರ್ವಭಮತೆಗೆ ದಕ್ಕೆ ತರುವ ಕೆಲಸದಲ್ಲಿ ತೊಡಗಿದೆ ಎಂದು ಕೇಂದ್ರ ಸರ್ಕಾರ ಈ ಗೇಮ್ ಅನ್ನು ಬ್ಯಾನ್ ಮಾಡಲಾಗಿತ್ತು. ಏಕೆಂದರೆ ಇದರ ಪ್ರಮುಖ ವಿಡಿಯೋ ಗೇಮ್ ಹೂಡಿಕೆದಾರ ಟೆನ್ಸೆಂಟ್ ಆಗಿತ್ತು. ಸದ್ಯ ಇದೀಗ ಸರ್ಕಾರದ ನಿಯಮಗಳಿಗೆ ಅನುಗುಣವಾಗಿ ಹೊಸ ಮಾದರಿಯಲ್ಲಿ ರೀ ಎಂಟ್ರಿ ನೀಡಿದೆ. ಹಾಗಾದ್ರೆ ಬ್ಯಾಟಲ್ ಗ್ರೌಂಡ್ ಮೊಬೈಲ್ ಇಂಡಿಯಾದ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಪಬ್ಜಿ ಗೇಮ್ ಭಾರತಕ್ಕೆ ಬ್ಯಾಟಲ್ ಗ್ರೌಂಡ್ ರೂಪದಲ್ಲಿ ರೀ ಎಂಟ್ರಿ ನೀಡಿರೊದು ಎಲ್ಲರಿಗೂ ಗೊತ್ತಿರುವ ವಿಚಾರ. ಸದ್ಯ ಭಾರತೀಯ ಗೇಮರುಗಳಿಗಾಗಿ ಕಸ್ಟಮೈಸ್ ಮಾಡಿದ ಹೊಸ ಫೀಚರ್ಸ್ಗಳೊಂದಿಗೆ ಈ ಗೇಮ್ ಅನ್ನು ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ ಪ್ರಮುಖವಾಗಿ ಬ್ಲಡ್ ಕಲರ್ ಅನ್ನು ಬದಲಾವಣೆ ಮಾಡಲಾಗಿದೆ. ಬ್ಲಡ್ ಗೇಮ್ ಅನ್ನು ಹೊಸದಾಗಿ ರೂಪಿಸಲಾಗಿದೆ. ಆಟವನ್ನು ಸ್ಪಷ್ಟವಾಗಿ ರೂಪಿಸುವುದು ವರ್ಚುವಲ್ ಸಿಮ್ಯುಲೇಶನ್ ತರಬೇತಿ ಮೈದಾನವನ್ನು ಸಹ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.

ಇನ್ನು ಗೇಮ್ನಲ್ಲಿ ಮಾಡಲಾಗಿರುವ ಹಲವು ಮಾರ್ಪಡಿಸಿದ ದೈಹಿಕ ದ್ರವಗಳನ್ನು ಮೀರಿ ಆಟಗಳಲ್ಲಿನ ಹಿಂಸಾಚಾರದ ಚಿತ್ರಣಗಳನ್ನು ಸೆನ್ಸಾರ್ ಮಾಡುವುದು ಹಾಗೆ ಉಳಿದುಕೊಂಡಿದೆ. ಇನ್ನು ಬ್ಯಾಟಲ್ಗ್ರೌಂಡ್ PUBG ಮೊಬೈಲ್ನಂತೆಯೇ ಇದೆ. ನಿಮ್ಮ ಖಾತೆಯನ್ನು ಹಳೆಯ ಆಟದಿಂದ ಹೊಸದಕ್ಕೆ ಸುಲಭವಾಗಿ ವರ್ಗಾಯಿಸುವ ಮಾರ್ಗವೂ ಇದೆ. ಈ ಹೊಸ ಗೇಮ್ನಲ್ಲಿ ಆಗಿರುವ ಬದಲಾವಣೆಗಳು ಮೆಲ್ನೋಟಕ್ಕೆ ಯಾರಿಗೂ ತಿಳಿಯುವುದೇ ಇಲ್ಲ. ಥೇಟ್ ಪಬ್ಜಿ ಗೇಮ್ ಮಾದರಿಯೇ ಎಂದೆನಿಸುತ್ತದೆ. ಆದರೆ ಗೇಮ್ನ ಒಳಗೆ ಇಳಿದಂತೆ ಹೊಸ ಹೊಸ ಬದಲಾವಣೆಗಳು ತಿಳಿಯಲಿದೆ

ಇದಲ್ಲದೆ ಪಬ್ಜಿ ಗೇಮ್ ಅನ್ನು ಭಾರತ ಸರ್ಕಾರ ಬ್ಯಾನ್ ಮಾಡಲು ಮುಖ್ಯ ಕಾರಣ ಬಳಕೆದಾರರ ಡೇಟಾವನ್ನು ಎಲ್ಲಿ ರವಾನಿಸಲಾಗುತ್ತದೆ ಎಂಬ ಕಳವಳ. ಇದೇ ಕಾರಣಕ್ಕೆ PUBG ಸ್ಟುಡಿಯೋ ಭಾರತದಲ್ಲಿ ಟೆನ್ಸೆಂಟ್ನೊಂದಿಗಿನ ಸಂಬಂಧವನ್ನು ಬೇರ್ಪಡಿಸುತ್ತಿದೆ. ಅಲ್ಲದೆ ಈ ಹೊಸ ಗೇಮ್ ಹೋಸ್ಟಿಂಗ್ ಅನ್ನು ದೇಶದ ಮೈಕ್ರೋಸಾಫ್ಟ್ ಅಜೂರ್ ಡೇಟಾ ಕೇಂದ್ರಗಳಿಗೆ ಸ್ಥಳಾಂತರಿಸುವುದಾಗಿ ಘೋಷಿಸಿದೆ. ಇದು ಗೇಮ್ ಪ್ರಿಯರಿಗೆ ಇನ್ನಷ್ಟು ಸಂತೋಷಕ್ಕೆ ಕಾರಣವಾಗಿದೆ.
(Kannada Copy of Gizbot Kannada)
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm