ಬ್ರೇಕಿಂಗ್ ನ್ಯೂಸ್
12-07-21 04:42 pm GIZBOT Mantesh ಡಿಜಿಟಲ್ ಟೆಕ್
ಜನಪ್ರಿಯ ಶಿಯೋಮಿ ಕಂಪೆನಿ ಭಾರತದಲ್ಲಿ ತನ್ನ ಹೊಸ ರೆಡ್ಮಿ ನೋಟ್ 10T 5G ಸ್ಮಾರ್ಟ್ಫೋನ್ ಲಾಂಚ್ ಮಾಡಲು ಡೇಟ್ ಫಿಕ್ಸ್ ಮಾಡಿದೆ. ಇನ್ನು ಈ ಸ್ಮಾರ್ಟ್ಫೋನ್ ಭಾರತದಲ್ಲಿ ಜುಲೈ 20 ಕ್ಕೆ ಬಿಡುಗಡೆ ಆಗುವುದು ಪಕ್ಕಾ ಆಗಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಈ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ಹೌದು, ಶಿಯೋಮಿ ರೆಡ್ಮಿ ನೋಟ್ 10T 5G ಸ್ಮಾರ್ಟ್ಫೋನ್ ಭಾರತದಲ್ಲಿ ಜುಲೈ 20 ಕ್ಕೆ ಲಾಂಚ್ ಆಗಲಿದೆ. ಇನ್ನು ಈ ಸ್ಮಾರ್ಟ್ಫೋನ್ 6.5-ಇಂಚಿನ ಫುಲ್ ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿರಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ರೆಡ್ಮಿ ನೋಟ್ 10T 5G ಸ್ಮಾರ್ಟ್ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್ ಹೆಚ್ಡಿ + ಡಿಸ್ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್
ರೆಡ್ಮಿ ನೋಟ್ 10T 5G ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ
ಈ ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಎಫ್ / 1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ರೆಡ್ಮಿ ನೋಟ್ 10T 5G ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 5.1, ಎನ್ಎಫ್ಸಿ, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದು ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ರೆಡ್ಮಿ ನೋಟ್ 10T 5G ಬೆಲೆ ಇನ್ನೂ ಬಹಿರಂಗಗೊಂಡಿಲ್ಲ. ಆದರೆ ಇದು ಭಾರತದಲ್ಲಿ ಸರಿಸುಮಾರು 20,000 ರೂ.ಬೆಲೆಯನ್ನು ಹೊಂದಿರುವ ಸಾಧ್ಯತೆ ಇದೆ.
(Kannada Copy of Gizbot Kannada)
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm