ಬ್ರೇಕಿಂಗ್ ನ್ಯೂಸ್
08-09-21 03:10 pm Gizbot, Mantesh ಡಿಜಿಟಲ್ ಟೆಕ್
ರಿಯಲ್ ಮಿ ಮೊಬೈಲ್ ಸಂಸ್ಥೆಯ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರಿಯಲ್ಮಿ GT ಮಾಸ್ಟರ್ ಎಡಿಷನ್ ಫೋನ್ ದೈತ್ಯ ಫೀಚರ್ಸ್ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್ಫೋನ್ ಇಂದು (ಸೆ. 8) ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್ಕಾರ್ಟ್ ಹಾಗೂ ಅಧಿಕೃತ ರಿಯಲ್ ಮಿ ತಾಣದ ಮೂಲಕ ಸೇಲ್ ಆರಂಭಿಸಲಿದೆ. ಇನ್ನು ಈ ಸ್ಮಾರ್ಟ್ಫೋನಿನ ಆರಂಭಿಕ ಬೆಲೆಯು 25,999ರೂ. ಆಗಿದೆ.
ಹೌದು, ರಿಯಲ್ ಮಿ ಕಂಪನಿಯ ರಿಯಲ್ಮಿ GT ಮಾಸ್ಟರ್ ಎಡಿಷನ್ ಸ್ಮಾರ್ಟ್ಫೋನ್ 6GB+128GB ವೇರಿಯಂಟ್ ಮಾಡೆಲ್ ಇಂದು ಮಾರಾಟ ಕಾಣಲಿದೆ. ಈ ಸ್ಮಾರ್ಟ್ಫೋನ್ 4,300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ರಿಯಲ್ಮಿ GT ಮಾಸ್ಟರ್ ಎಡಿಷನ್ ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ರಿಯಲ್ಮಿ GT ಮಾಸ್ಟರ್ ಎಡಿಷನ್ ಫೀಚರ್ಸ್ ರಿಯಲ್ಮಿ GT ಮಾಸ್ಟರ್ ಎಡಿಷನ್ ಆಂಡ್ರಾಯ್ಡ್ 11 ಅನ್ನು ರಿಯಲ್ಮೆ ಯುಐ 2.0 ನೊಂದಿಗೆ ಚಾಲನೆ ಮಾಡುತ್ತದೆ. ಇದು 120Hz ರಿಫ್ರೆಶ್ ದರ, 360Hz ಟಚ್ ಸ್ಯಾಂಪ್ಲಿಂಗ್ ದರ ಹೊಂದಿದೆ. 6.43-ಇಂಚಿನ ಪೂರ್ಣ ಹೆಚ್ಡಿ + ಸೂಪರ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778 SoC ನಿಂದ ನಿಯಂತ್ರಿಸಲ್ಪಡುತ್ತದೆ. ಹಾಗೆಯೇ 8GB ವರೆಗೆ RAM ಮತ್ತು 256GB ವರೆಗೆ ಸಂಗ್ರಹವನ್ನು ಹೊಂದಿದೆ.

ರಿಯಲ್ಮಿ GT ಮಾಸ್ಟರ್ ಎಡಿಷನ್ ಕ್ಯಾಮೆರಾ ಫೋಟೋಗಳು ಮತ್ತು ವೀಡಿಯೊಗಳಿಗಾಗಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾವು 64 ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕ, ಸೆಕೆಂಡರಿ ಕ್ಯಾಮೆರಾವು ಎಫ್ / 2.2 ಲೆನ್ಸ್ ಹೊಂದಿರುವ 8 ಮೆಗಾಪಿಕ್ಸೆಲ್ ಸಂವೇದಕ ಮತ್ತು ತೃತೀಯ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಸಂವೇದಕ ಪಡೆದಿದೆ. ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಅನ್ನು ಎಫ್ / 2.5 ಅಪರ್ಚರ್ ಹೊಂದಿದೆ. ಇದರೊಂದಿಗೆ 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 4,300mAh ಬ್ಯಾಟರಿಯಿಂದ ಫೋನ್ ಬೆಂಬಲಿತವಾಗಿದೆ.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm