ಬ್ರೇಕಿಂಗ್ ನ್ಯೂಸ್
16-09-21 11:15 am Gizbot, Mutthuraju H M ಡಿಜಿಟಲ್ ಟೆಕ್
ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆದುಕೊಳ್ಳಬೇಕಾದ್ರೆ ರೇಷನ್ ಕಾರ್ಡ್ ಅವಶ್ಯಕವಾಗಿದೆ. ಅಷ್ಟೇ ಅಲ್ಲ ಬಡತನ ರೇಖೆಗಿಂತ ಕೆಳಗಿರುವ, ಸಾಮಾಜಿಕವಾಗಿ ಹಿಂದುಳಿದಿರುವ ಹಾಗೂ ಮಧ್ಯಮವರ್ಗದ ಜನತೆಗೆ ಪಡಿತರ ಚೀಟಿ ಅತಿ ಅಗತ್ಯವಾಗಿದೆ. ಇನ್ನು ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಪಡೆಯುವುದು, ತಿದ್ದುಪಡಿ ಮಾಡಿಸುವುದು, ಹೊಸದಾಗಿ ಹೆಸರು ಸೇರ್ಪಡೆ ಮಾಡಿಸಬೇಕಾದ ಸಂದರ್ಭ ಬಂದರೆ ಕೆಲವರಿಗೆ ಏನು ಮಾಡಬೇಕು ಅನ್ನೊದು ತಿಳಿದಿರುವುದಿಲ್ಲ.
ಹೌದು, ರೇಷನ್ ಕಾರ್ಡ್ಗೆ ನಿಮ್ಮ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡುವುದು? ಹೆಸರು ತಿದ್ದುಪಡಿ ಮಾಡಬೇಕಾದಾಗ ಕಚೇರಿಗೆ ಅಲೆದಾಡುವುದು ಕಿರಿಕಿರಿ ಎನಿಸಲಿದೆ. ಅದರಲ್ಲೂ ಪಡಿತರ ಚೀಟಿಯಲ್ಲಿ ಕುಟುಂಬದ ಸದಸ್ಯರ ಹೆಸರು ಸೇರಿಸುವುದು ಅತಿ ಮುಖ್ಯವಾಗಿರೊದ್ರಿಂದ ಈ ಕೆಲಸ ಮಾಡಲೇಬೇಕಾದ ಅನಿವಾರ್ಯತೆ ಕೂಡ ಇರುತ್ತೆ. ಆದರೆ ಏನು ಮಾಡೋದು ಕೆಲವರಿಗೆ ಇದರ ಬಗ್ಗೆ ಎಲ್ಲಿ ಹೋಗಿ ವಿಚಾರಿಸಬೇಕು ಅನ್ನೊದು ತಿಳಿದಿರುವುದಿಲ್ಲ. ಅದಕ್ಕಾಗಿ ನೀವು ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಬೇಕಾದರೆ? ಹೆಸರು ತಿದ್ದುಪಡಿ ಮಾಡಿಸುವುದಕ್ಕೆ ಏನು ಮಾಡಬೇಕು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ವಿಚಾರದಲ್ಲಿ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಪಡಿತರ ಚೀಟಿಗಾಗಿ ಬಯೋಮೆಟ್ರಿಕ್ ದೃಡೀಕರಣವನ್ನು ಕುಟುಂಬದ ಸದದಸ್ಯರೆಲ್ಲರೂ ನೀಡಲೇಬೇಕಾದ ಅನಿವಾರ್ಯತೆ ಇದೆ. ಹಾಗೆಯೇ ಹೊಸದಾಗಿ ಪಡಿತರ ಚೀಟಿ ಪಡೆಯುವುದಕ್ಕೆ ಆಗಲಿ, ಹೊಸದಾಗಿ ಹೆಸರು ಸೇರ್ಪಡೆ ಮಾಡುವುದಕ್ಕಾಗಲಿ ಕೆಲವು ಅಗತ್ಯ ದಾಖಲೆಗಳನ್ನು ನೀವು ಒದಗಿಸಲೇಬೇಕು.

ರೇಷನ್ ಕಾರ್ಡ್ನಲ್ಲಿ ನಿಮ್ಮ ಮನೆಯ ಸದಸ್ಯರೆಲ್ಲರ ಹೆಸರು ಇದ್ದರೆ ಅನುಕೂಲವಿದೆ. ಇದೇ ಕಾರಣಕ್ಕೆ ನಿಮ್ಮ ಮಕ್ಕಳ ಹೆಸರನ್ನು ಕೂಡ ಸೇರಿಸುವುದು ಇಂದಿನ ದಿನಗಳಲ್ಲಿ ಅಗತ್ಯ. ಇನ್ನು ನೀವು ನಿಮ್ಮ ಮಗುವಿನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಬೇಕಾದ್ರೆ, ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅಗತ್ಯವಾಗಿ ನೀಡಬೇಕಾಗುತ್ತದೆ. ಇದಲ್ಲದೆ ನಿಮ್ಮ ಮನೆಗೆ ಮದುವೆಯ ನಂತರ ಬಂದ ಸೊಸೆ/ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಕಾರ್ಡ್, ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಲು ಹೀಗೆ ಮಾಡಿ?
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm